ಕಾರ್ಕಳ : ಪಾದಚಾರಿಗೆ ಬೈಕ್ ಡಿಕ್ಕಿ – ಸಾವು
ಕಾರ್ಕಳ : ಶಿವತಿಕೆರೆ ಶ್ರೀ ಉಮಾಮಹೇಶ್ವರ ದೇವಸ್ಥಾನ ಬಳಿಯ ಬೈಪಾಸ್ ರಸ್ತೆಯಲ್ಲಿ ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವಿಗೀಡಾದ ಘಟನೆ ನ. 27ರ ಸಂಜೆ ಸಂಭವಿಸಿದೆ. ಸ್ಥಳೀಯ ನಿವಾಸಿ ಕುಟ್ಟಿ (65 ) ಎಂಬವರೇ ಅಪಘಾತದಿಂದ ಮೃತಪಟ್ಟ ದುರ್ದೈವಿ. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಸವಾರ ಪರಾರಿಅಪಘಾತವೆಸಗಿ ಸವಾರ ವಾಹನ ಸಮೇತ ಪರಾರಿಯಾಗಿದ್ದು, ಇದುವರೆಗೂ ಯಾರು ಎಂದು ತಿಳಿದು ಬಂದಿಲ್ಲ. ಈ ಕುರಿತು ಕಾರ್ಕಳ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಾರ್ಕಳ : ಪಾದಚಾರಿಗೆ ಬೈಕ್ ಡಿಕ್ಕಿ – ಸಾವು Read More »








