• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಆತ್ಮಹತ್ಯೆ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಕಾರ್ಕಳ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಏ. 28ರಂದು ಸಂಭವಿಸಿದೆ. ದುರ್ಗಾ ಮಲೆಬೆಟ್ಟು ನಿವಾಸಿ ಕರುಣಾಕರ (34) ಆತ್ಮಹತ್ಯೆಗೆ ಶರಣಾದವರು. ಅವರು ಕೂಲಿ ಕೆಲಸ ಮಾಡಿಕೊಂಡಿದ್ದರು. ಕಳೆದ 4 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಈ ಬಗ್ಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇತ್ತೀಚೆಗೆ ತುಂಬಾ ಖಿನ್ನತೆಯಿಂದ ಇದ್ದು ಏ. 28ರಂದು ಕಾರ್ಕಳಕ್ಕೆ ಕೆಲಸಕ್ಕೆ ಹೋದವರು ಮಧ್ಯಾಹ್ನ 12:30ಕ್ಕೆ ಮನೆಗೆ ಬಂದು ಯಾವುದೋ ವಿಷ ಪದಾರ್ಥ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ Read More »

ಶೂಟ್ ಮಾಡಿಕೊಂಡು ದಿಲೀಪ್ ಎನ್. ಆರ್. ಸೂಸೈಡ್

ಕಾರ್ಕಳ : ಸ್ವಯಂ ಶೂಟ್ ಮಾಡಿಕೊಂಡು ಉದ್ಯಮಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.29ರ ಮುಂಜಾನೆ ನಿಟ್ಟೆ ಸಮೀಪದ ದೂಪದಕಟ್ಟೆಯಲ್ಲಿ ಸಂಭವಿಸಿದೆ. ಮೂಲತಃ ಕಾರ್ಕಳದವರಾದ ಮಂಗಳೂರು ನಿವಾಸಿ ದಿಲೀಪ್ ಎನ್. ಆರ್. ಶೂಟ್ ಮಾಡಿಕೊಂಡವರು.ಮಂಗಳೂರಿನಲ್ಲಿ ವಾಸವಿದ್ದ ದಿಲೀಪ್‌ ಎ. 28ರ ರಾತ್ರಿ ಅಲ್ಲಿಂದ ತನ್ನ ಕಾರಿನಲ್ಲಿ ಹೊರಟವರು ದೂಪದಕಟ್ಟೆಯ ಸಮೀಪ ನವೋದಯ ಪ್ರಾಪರ್ಟಿಸ್ ಮುಂಭಾಗ ರಸ್ತೆ ಬದಿ ಕಾರು ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರಿನ ಒಳಗೆ ವಿಷದ ಬಾಟಲಿಯಿದ್ದ ಕಾರಣ ವಿಷ ಸೇವಿಸಿ ನಂತರ ಗುಂಡು ಹಾರಿಸಿಕೊಂಡಿರಬೇಕು ಎನ್ನಲಾಗಿದೆ.

ಶೂಟ್ ಮಾಡಿಕೊಂಡು ದಿಲೀಪ್ ಎನ್. ಆರ್. ಸೂಸೈಡ್ Read More »

ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡೆನೆಂದು ಬಾಲಕ ಆತ್ಮಹತ್ಯೆ

ಕಾರ್ಕಳ : ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡೆನೆಂದು ನೊಂದು ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 27ರಂದು ಎಳ್ಳಾರೆ ಗ್ರಾಮದ ಮಂಜರಬೆಟ್ಟಿನಲ್ಲಿ ಸಂಭವಿಸಿದೆ. ತೇಜಸ್‌ (17) ಆತ್ಮಹತ್ಯೆಗೆ ಶರಣಾದ ಬಾಲಕ. ಈತ 10ನೇ ತರಗತಿ ಪರೀಕ್ಷೆಯ ಕೆಲವು ವಿಷಯಗಳಲ್ಲಿ ಅನುತ್ತೀರ್ಣಗೊಂಡಿದ್ದು ನಂತರ ಅಜೆಕಾರಿನಲ್ಲಿ ಟ್ಯೂಷನ್‌ ಪಡೆದು ಎಸ್ಸೆಸೆಲ್ಸಿ ಸಪ್ಲಿಮೆಂಟರಿ ಪರೀಕ್ಷೆ ಬರೆದಿರುತ್ತಾನೆ. ಆದರೆ, ಅದರಲ್ಲಿ ಕೂಡ ಅನುತ್ತೀರ್ಣಗೊಂಡ ಕಾರಣ ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡೆನೆಂದು ಬಾಲಕ ಆತ್ಮಹತ್ಯೆ Read More »

ನೇಣು ಬಿಗಿದು ಯುವಕ ಆತ್ಮಹತ್ಯೆ

ಕಾರ್ಕಳ : ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾ. 10ರಂದು ಕಸಬಾ ಗ್ರಾಮದಲ್ಲಿ ಸಂಭವಿಸಿದೆ. ಅರುಣ್ ಕುಮಾರ್ (18) ನೇಣಿಗೆ ಶರಣಾದ ಯುವಕ. ಈತ ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದು, ಇದೇ ಕಾರಣದಿಂದಲೊ ಅಥವಾ ಬೇರೆ ಯಾವುದೋ ಕಾರಣದಿಂದ ಮನನೊಂದು ಸೋಮವಾರದಂದು ಕಸಬಾ ಗ್ರಾಮದ ಬಂಗ್ಲೆಗುಡ್ಡೆ ಹಿಮ್ಮುಂಜೆ ರಸ್ತೆಯಲ್ಲಿ ಇರುವ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಉಡುಪಿ : ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ ಹೆಬ್ರಿಯ ಸಾವಿತ್ರಿ (67) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 9ರಂದು ನಡೆದಿದೆ. ಸುಮಾರು 6 ತಿಂಗಳಿನಿಂದ ಗರ್ಭಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಮನನೊಂದು ಮನೆ ಹತ್ತಿರದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಅವರ ಮಗಳು ವಿನುತಾ ಗಾಗಿಹಕ್ಲು ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿರುತ್ತಾರೆ.

ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ Read More »

ಮಾನಸಿಕ ಖಿನ್ನತೆಗೆ ಒಳಗಾದ ಮಹಿಳೆ ನೇಣಿಗೆ ಶರಣು

ಕಾರ್ಕಳ : ಮಾನಸಿಕ ಖಿನ್ನತೆಗೆ ಒಳಗಾದ ಮಹಿಳೆ ನೇಣಿಗೆ ಶರಣಾದ ಘಟನೆ ಮಿಯ್ಯಾರು ಗ್ರಾಮದಲ್ಲಿ ಸಂಭವಿಸಿದೆ. ಮಿಯ್ಯಾರಿನ ಭೋಜ ಎಂಬುವರ ಪತ್ನಿ ಗೀತಾ (53ವ.) ಎಂಬುವರೆ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಫೆ. 26ರಂದು ಮಧ್ಯಾಹ್ನ ತನ್ನ ಮನೆಯ ಹಿಂಭಾಗ ಇರುವ ಕೊಟ್ಟೆಗೆಯ ಪಕ್ಕಾಸಿಗೆ ಸೀರೆಯನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾನಸಿಕ ಖಿನ್ನತೆಗೆ ಒಳಗಾದ ಮಹಿಳೆ ನೇಣಿಗೆ ಶರಣು Read More »

ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಕಾರ್ಕಳ : ಬಾವಿಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 19ರಂದು ಕಾರ್ಕಳದಲ್ಲಿ ಸಂಭವಿಸಿದೆ. ಕಸಬಾ ಗ್ರಾಮದ ಮೀನಗುಂಡಿ ಕಂಪೌಂಡ್‌ನ ಕೆ. ವೆಂಕಟೇಶ ಹೆಗ್ಡೆ (22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತನು ಮಂಗಳೂರು ಸೈಂಟ್‌ ಜೋಸೆಫ್‌ ವಿದ್ಯಾಲಯದಲ್ಲಿ ಪ್ರಥಮ ವರ್ಷದ ಎಂಬಿಎ ವಿದ್ಯಾಭ್ಯಾಸ ಮಾಡುತ್ತಿದ್ದು, ವಿದ್ಯಾಭ್ಯಾಸ ಮಾಡಲು ಕಷ್ಟವಾಗುತ್ತಿದೆ ಎಂದು ತಂದೆಯ ಬಳಿ ಹೇಳಿಕೊಂಡಿದ್ದನು. ಸುಮಾರು 10 ದಿನಗಳಿಂದ ಮೌನವಾಗಿದ್ದು, ಇದೇ ಕಾರಣದಿಂದ ಮನನೊಂದು ಜ. 19ರ ರಾತ್ರಿ 10.30 ಗಂಟೆಯಿಂದ 12.30 ಗಂಟೆಯ ಮಧ್ಯಾವಧಿಯಲ್ಲಿ

ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ Read More »

ಕುಡಿದು ಬಂದು ಪತ್ನಿಗೆ ಗುಂಡಿಕ್ಕಿ ಕೊಂದು ನಂತರ ಆ್ಯಸಿಡ್ ಸೇವಿಸಿ ಪತಿ ಸಾವು

ಮಂಗಳೂರು : ಪತ್ನಿಯನ್ನು ಗುಂಡಿಕ್ಕಿ ಕೊಂದು ನಂತರ ರಬ್ಬರ್ ಸಂಸ್ಕರಣೆಗೆ ಬಳಸುವ ಆ್ಯಸಿಡ್ ಸೇವಿಸಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ನಡೆದಿದೆ. ರಾಮಚಂದ್ರಗೌಡ ಕಳೆದ ರಾತ್ರಿ ತನ್ನ ಪತ್ನಿ ವಿನೋದಾ ಕುಮಾರಿಗೆ ಗುಂಡಿಕ್ಕಿ ಕೊಂದಿದ್ದಾನೆ. ನಂತರ ರಬ್ಬರ್ ಆ್ಯಸಿಡ್ ಸೇವಿಸಿ ಸ್ವಲ್ಪ ಸಮಯದ ನಂತರ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮದ್ಯವ್ಯಸನಿಯಾಗಿದ್ದ ರಾಮಚಂದ್ರಗೌಡ ಕುಡಿದು ಮನೆಗೆ ಬಂದು ತನ್ನ ಪೋಷಕರು, ಪತ್ನಿ ಮತ್ತು ಮಗ ಸೇರಿದಂತೆ ತನ್ನ ಕುಟುಂಬ ಸದಸ್ಯರೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದನು.

ಕುಡಿದು ಬಂದು ಪತ್ನಿಗೆ ಗುಂಡಿಕ್ಕಿ ಕೊಂದು ನಂತರ ಆ್ಯಸಿಡ್ ಸೇವಿಸಿ ಪತಿ ಸಾವು Read More »

ನಲ್ಲೂರು : ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ

ಕಾರ್ಕಳ : ಹೊಳೆಗೆ ಹಾರಿ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 27ರಂದು ನಲ್ಲೂರಿನಲ್ಲಿ ಸಂಭವಿಸಿದೆ. ಬೋರ್ಕಟ್ಟೆ ನಿವಾಸಿ ಲೀಲಾ (71) ಆತ್ಮಹತ್ಯೆಗೆ ಶರಣಾದವರು. ಇವರು ಕಳೆದ 7 ವರ್ಷಗಳ ಹಿಂದೆ ಬಿದ್ದು ತಲೆಗೆ ಏಟಾದ ಕಾರಣ ನರ ದೌರ್ಬಲ್ಯದಿಂದ ಬಳಲುತ್ತಿದ್ದರು. ಇದೇ ಕಾರಣವಾಗಿ ಜೀವನದಲ್ಲಿ ಜುಗುಪ್ಸೆಗೊಂಡು ಮನೆಯ ಬಳಿಯಿರುವ ಹೊಳೆಯ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ನಲ್ಲೂರು : ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ಭೋವಿ ನಿಗಮ ಹಗರಣ : ತನಿಖಾಧಿಕಾರಿ ಕಿರುಕುಳದಿಂದ ಯುವತಿ ಆತ್ಮಹತ್ಯೆ

ಬೆಂಗಳೂರು: ಭೋವಿ ನಿಗಮ ಹಗರಣಕ್ಕೆ ಸಂಬಂಧಿಸಿ ಸಿಐಡಿ ತನಿಖೆ ಎದುರಿಸಿದ್ದ ಯುವತಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಸಂಭವಿಸಿದ್ದು, ತನಿಖೆಯ ಬಗ್ಗೆ ಅನುಮಾನ ಮೂಡುವಂತೆ ಮಾಡಿದೆ. ಭೋವಿ ನಿಗಮದ ಫಲಾನುಭವಿಗಳಿಗೆ ಮೆಟಿರಿಯಲ್ಸ್‌ ಪೂರೈಕೆ ಮಾಡಿದ್ದ ಪದ್ಮನಾಭ ನಗರದ ಜೀವಾ (32) ಎಂಬ ಯುವತಿ ಪದ್ಮನಾಭ ನಗರದ ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೀವಾ ಭೋವಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿ ಮೂರು ತಿಂಗಳ ಹಿಂದೆ ಒಮ್ಮೆ ವಿಚಾರಣೆ ಎದುರಿಸಿದ್ದರು. ಬಳಿಕ

ಭೋವಿ ನಿಗಮ ಹಗರಣ : ತನಿಖಾಧಿಕಾರಿ ಕಿರುಕುಳದಿಂದ ಯುವತಿ ಆತ್ಮಹತ್ಯೆ Read More »

error: Content is protected !!
Scroll to Top