• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕರಾವಳಿ

ಮಂಗಳೂರು ಸೇರಿದಂತೆ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಕುರಿತು ಜೂ. 29ರ ಬೆಳಗ್ಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ ಎಂದು ವರದಿಯಾಗಿದೆ. ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ. ಬಿಗಿ ಭದ್ರತೆಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬೆದರಿಕೆ ಬಂದಿದ್ದು, ಈ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ಭದ್ರತೆಯ ಬಗ್ಗೆ […]

ಮಂಗಳೂರು ಸೇರಿದಂತೆ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ Read More »

ಹಿಂಜಾವೇ ಮುಖಂಡ ಸಮಿತ್ ರಾಜ್ ದರೆಗುಡ್ಡೆಗೆ 15 ದಿನಗಳ ನ್ಯಾಯಾಂಗ ಬಂಧನ

ಮೂಡುಬಿದಿರೆ : ತನ್ನ ಬಸ್ಸಿಗೆ ಹಾನಿಗೊಳಿಸಿರುವುದಲ್ಲದೆ ತನ್ನಿಂದ 5 ಲಕ್ಷ ರೂ. ಬೇಡಿಕೆ ಮುಂದಿಟ್ಟು ವಸೂಲಿ ನಡೆಸಿದ್ದಾನೆ ಎಂದು ಬಸ್‌ ಮಾಲಕರೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿ ಹಿಂಜಾವೆ ಮುಖಂಡ ಸಮಿತ್ ರಾಜ್ ದರೆಗುಡ್ಡೆಯನ್ನು ಜೂ. 26ರಂದು ಮಧ್ಯಾಹ್ನ ಕಾರ್ಕಳದಲ್ಲಿ ಬಂಧಿಸಿದ್ದಾರೆ. ಮಿಜಾರು ಬಳಿ ನಡೆದ ರಸ್ತೆ ಅಪಘಾತವೊಂದರಲ್ಲಿ ಗಾಯಗೊಂಡಿರುವವರಿಗೆ ಬಸ್ ಮಾಲಕ ಸ್ಥಳದಲ್ಲಿಯೇ ಪರಿಹಾರ ನೀಡುವಂತೆ ಎಬಿವಿಪಿ, ಬಿಜೆಪಿ ಸಹಿತ ಸಾರ್ವಜನಿಕರು ಪ್ರತಿಭಟಿಸಿದ್ದರು. ಈ ಸಂದರ್ಭ ಹೋರಾಟದಲ್ಲಿ ಪಾಲ್ಗೊಂಡಿದ್ದ

ಹಿಂಜಾವೇ ಮುಖಂಡ ಸಮಿತ್ ರಾಜ್ ದರೆಗುಡ್ಡೆಗೆ 15 ದಿನಗಳ ನ್ಯಾಯಾಂಗ ಬಂಧನ Read More »

36 ವರ್ಷಗಳ ಬಳಿಕ ಒಂದಾದ ತಾಯಿ-ಮಗ

ದೈವ ನುಡಿದ ವರ್ಷದೊಳಗೆ ಮಗ ಮನೆಗೆ ಮಂಗಳೂರು : ಕೆಲಸಕ್ಕೆಂದು ಮುಂಬೈಗೆ ಹೋಗಿದ್ದ ಮಗ 36 ವರ್ಷಗಳ ಬಳಿಕ ಮನೆಗೆ ವಾಪಸ್ಸಾದ ಘಟನೆ ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮದಲ್ಲಿ ನಡೆದಿದೆ. ಸಂಕಪ್ಪ ಹಾಗೂ ಗೋಪಿ ದಂಪತಿಯ ಹಿರಿಯ ಪುತ್ರ ಚಂದ್ರಶೇಖರ್, ತಮ್ಮ 25ನೇ ವಯಸ್ಸಿನಲ್ಲಿ ಉದ್ಯೋಗ ಅರಸಿ ಮುಂಬೈಯತ್ತ ತೆರಳಿದ್ದರು. ಬಳಿಕ ಸುಮಾರು 7 ತಿಂಗಳು ಪತ್ರದ ಮುಖೇನ ಮನೆಯವರ ಜೊತೆ ಸಂರ್ಪದಲ್ಲಿದ್ದರು. ನಂತರ ಸಂಪರ್ಕ ಕಡಿದುಕೊಂಡು ಎಲ್ಲಿದ್ದಾರೆಂದು ಪತ್ತೆಯೇ ಇರಲಿಲ್ಲ.ಮಾನಸಿಕ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರ್​​, ಮುಂಬೈಯ

36 ವರ್ಷಗಳ ಬಳಿಕ ಒಂದಾದ ತಾಯಿ-ಮಗ Read More »

ರಾಜ್ಯ ಸರಕಾರದ ಜನವಿರೋಧಿ ನೀತಿ ಖಂಡಿಸಿ ಉಭಯ ಜಿಲ್ಲೆಯ 399 ಗ್ರಾ.ಪಂ. ಗಳಲ್ಲಿ ಏಕಕಾಲಕ್ಕೆ ಧರಣಿ

ಮನೆ ಪಡೆಯಲು ಹಣ ನೀಡಬೇಕಾದ ಪರಿಸ್ಥಿತಿ ಬಗ್ಗೆ ಕಾಂಗ್ರೆಸ್‌ ಶಾಸಕರಿಂದಲೇ ಆರೋಪ – ಸುನಿಲ್ ಕುಮಾರ್ ಉಡುಪಿ : ರಾಜ್ಯ ಸರಕಾರದ ಆಡಳಿತದ ವಿರುದ್ಧ ಗ್ರಾಮ ಗ್ರಾಮಗಳಲ್ಲಿ ಜನ ಆಕ್ರೋಶದಿಂದಿದ್ದಾರೆ. ಕಾಂಗ್ರೆಸ್‌ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ದ.ಕ. ಮತ್ತು ಉಡುಪಿ ಜಿಲ್ಲೆಯ 399 ಗ್ರಾ. ಪಂ. ಗಳಲ್ಲಿ ಏಕ ಕಾಲಕ್ಕೆ ಧರಣಿ ಸತ್ಯಾಗ್ರಹ ನಡೆದಿದೆ. ರಾಜ್ಯ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದು 2 ವರ್ಷ ಪೂರ್ಣಗೊಂಡರೂ ಸಂಪೂರ್ಣವಾಗಿ ಜನಹಿತವನ್ನು ಮರೆತಿದೆ ಎಂದು ಶಾಸಕ ವಿ.

ರಾಜ್ಯ ಸರಕಾರದ ಜನವಿರೋಧಿ ನೀತಿ ಖಂಡಿಸಿ ಉಭಯ ಜಿಲ್ಲೆಯ 399 ಗ್ರಾ.ಪಂ. ಗಳಲ್ಲಿ ಏಕಕಾಲಕ್ಕೆ ಧರಣಿ Read More »

ಜೂ. 23 : ಕಾಂಗ್ರೆಸ್‌ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಾರ್ಕಳ ಕ್ಷೇತ್ರದ ಗ್ರಾ. ಪಂ. ಮುಂಭಾಗ ಏಕಕಾಲದಲ್ಲಿ ಧರಣಿ ಸತ್ಯಾಗ್ರಹ

ಕಾರ್ಕಳ : ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರಕಾರ ಆಡಳಿತಕ್ಕೆ ಬಂದು ಎರಡು ವರ್ಷಗಳಾಗಿದ್ದು, ಆಡಳಿತಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಜನವಿರೋಧಿ ನೀತಿಗಳಿಂದಲೇ ಗುರುತಿಸಿಕೊಂಡಿದೆ. ಅದರಲ್ಲಿಯೂ ಕರಾವಳಿ ಜಿಲ್ಲೆಗಳನ್ನು ರಾಜ್ಯ ಸರಕಾರ ಸಂಪೂರ್ಣವಾಗಿ ಕಡೆಗಣಿಸಿದೆ. ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಇದರ ವತಿಯಿಂದ ಸರಕಾರದ ಈ ಜನವಿರೋಧಿ ನೀತಿಯನ್ನು ಖಂಡಿಸಿ ಈಗಾಗಲೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾವಿರಾರು ಜನರನ್ನು ಸೇರಿಸಿ ಕಾರ್ಕಳ ತಾಲೂಕು ಕಚೇರಿ ಮುಂಭಾಗ ಒಂದು ಬೃಹತ್‌ ಪ್ರತಿಭಟನೆಯನ್ನು ಮಾಡಿ ಎಚ್ಚರಿಕೆಯನ್ನು ನೀಡಲಾಗಿತ್ತು. ಆದರೆ, ಈ ಲಜ್ಜೆಗೆಟ್ಟ

ಜೂ. 23 : ಕಾಂಗ್ರೆಸ್‌ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಾರ್ಕಳ ಕ್ಷೇತ್ರದ ಗ್ರಾ. ಪಂ. ಮುಂಭಾಗ ಏಕಕಾಲದಲ್ಲಿ ಧರಣಿ ಸತ್ಯಾಗ್ರಹ Read More »

ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಉಡುಪಿ : ಜನಸಾಮಾನ್ಯರು ಸರಕಾರದ ಮೇಲೆ ನಿರೀಕ್ಷೆ ಇಟ್ಟುಕೊಂಡು ತಮ್ಮ ಕೆಲಸ ಕಾರ್ಯಗಳಿಗಾಗಿ ಕಚೇರಿಗಳಿಗೆ ಬರುತ್ತಾರೆ. ಅವರೊಂದಿಗೆ ಗೌರವಯುತವಾಗಿ ನಡೆದುಕೊಳ್ಳುವುದರೊಂದಿಗೆ ನಿಯಮಾನುಸಾರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ಜೂ. 20ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ

ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ Read More »

ಬಜಗೋಳಿ ಅನಿಮಲ್ ಕೇರ್ ಟ್ರಸ್ಟ್‌ ಗೋಶಾಲೆಯಲ್ಲಿ ಗೋವುಗಳ ಕಳವು ಖಂಡನೀಯ

ಪೊಲೀಸ್ ಇಲಾಖೆ ಅಕ್ರಮ ಕಸಾಯಿಖಾನೆಯನ್ನು ಮಟ್ಟ ಹಾಕದಿದ್ದಲ್ಲಿ ಹಿಂಜಾವೇಯಿಂದ ಹೋರಾಟದ ಎಚ್ಚರಿಕೆ ಕಾರ್ಕಳ : ಬಜಗೋಳಿ ಅಗ್ನಿಲಾ ಅನಿಮಲ್ ಕೇರ್ ಟ್ರಸ್ಟ್‌ನ ಗೋಶಾಲೆಯಲ್ಲಿ ಚಿಕಿತ್ಸೆಗಾಗಿ ಕಟ್ಟಿದ್ದ ಅನಾರೋಗ್ಯ ಪೀಡಿತ ಗೋವುಗಳ ಕಳ್ಳತನವನ್ನು ಹಿಂದು ಜಾಗರಣ ವೇದಿಕೆ ತೀವ್ರವಾಗಿ ಖಂಡಿಸುತ್ತದೆ. ಕಾರ್ಕಳದ ಹಲವಾರು ಭಾಗಗಳಲ್ಲಿ ಗೋ ಕಳ್ಳರ ಅಟ್ಟಹಾಸ ದಿನೆ ದಿನೆ ಮಿತಿ ಮೀರುತ್ತಿದೆ. ಇಂತಹ ಮತಾಂಧ ಗೋ ಕಳ್ಳರಿಗೆ ಕಾನೂನಿನ ಭಯವೆ ಇಲ್ಲದಂತಾಗಿದೆ. ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಕಳ್ಳರ ದೊಡ್ಡ ಮಾಫಿಯಾವೇ ಇದೆ. ಪೊಲೀಸ್

ಬಜಗೋಳಿ ಅನಿಮಲ್ ಕೇರ್ ಟ್ರಸ್ಟ್‌ ಗೋಶಾಲೆಯಲ್ಲಿ ಗೋವುಗಳ ಕಳವು ಖಂಡನೀಯ Read More »

ಕರಾವಳಿಯಲ್ಲಿ ಜೂ. 26ರ ವರೆಗೂ ಭಾರಿ ಮಳೆ

ಬೆಂಗಳೂರು : ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿಯಲಿದೆ. ಜೂ. 26ರ ವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗಲಿದ್ದು, ಉಳಿದೆಲ್ಲಾ ಕಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಜೂನ್ 26ರವರೆಗೂ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ

ಕರಾವಳಿಯಲ್ಲಿ ಜೂ. 26ರ ವರೆಗೂ ಭಾರಿ ಮಳೆ Read More »

error: Content is protected !!
Scroll to Top