• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕ್ರೈಂ

ಡೇವಿಡ್ ಡಿಸೋಜ ಹತ್ಯೆ ಪ್ರಕರಣ : ಕೃತ್ಯಕ್ಕೆ ಬೈಕ್ ಒದಗಿಸಿದ ಆರೋಪಿ ಬಂಧನ

ಉಡುಪಿ : ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣದಲ್ಲಿ ಬೈಕ್ ಒದಗಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 9ಕ್ಕೇರಿದೆ. ಬೈಂದೂರು ಬಾಳಿಹಿತ್ಲು ನಿವಾಸಿ ಲೋಕೇಶ್ ತೇಜ ಕೊಠಾರಿ(42) ಬಂಧಿತ ಆರೋಪಿ. ಈತ ಈ ಮೊದಲು ಮುಂಬಯಿಯಲ್ಲಿ ಕೆಲಸ ಮಾಡಿ ಕೊಂಡಿದ್ದು, ಆಗ ಅಲ್ಲಿ ಈ ಪ್ರಕರಣದ ಆರೋಪಿ ಕಿಶೋರ್ ರಾಮ ಪೂಜಾರಿ ಪರಿಚಯವಾಗಿ ಸ್ನೇಹಿತನಾಗಿದ್ದನು.ಲೋಕೇಶ್ ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪಿಗಳಾದ ಅನ್ಮೋಲ್ ರಸ್ತೋಗಿ ಹಾಗೂ […]

ಡೇವಿಡ್ ಡಿಸೋಜ ಹತ್ಯೆ ಪ್ರಕರಣ : ಕೃತ್ಯಕ್ಕೆ ಬೈಕ್ ಒದಗಿಸಿದ ಆರೋಪಿ ಬಂಧನ Read More »

ಅಕ್ರಮವಾಗಿ ದನ ಸಾಗಾಟ – ಓರ್ವ ಪೊಲೀಸರ ವಶಕ್ಕೆ

ಕಾರ್ಕಳ : ಪಿಕಪ್ ವಾಹನದಲ್ಲಿ ಅಕ್ರಮವಾಗಿ ಮೂರು ದನಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ವಾಹನವನ್ನು ತಡೆದು ನಿಲ್ಲಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಂಕಲಕರಿಯದಲ್ಲಿ ನಡೆದಿದೆ. ಏಳಿಂಜೆ ಗ್ರಾಮದ ಜಯ ಮೂಲ್ಯ ಬಂಧಿತ ಆರೋಪಿ. ಕೆಎ 19 ಎಎಫ್ 2512 ನಂಬರ್‌ನ ಪಿಕಪ್ ವಾಹನದಲ್ಲಿ ರೋಶ್ನಿ ಎಂಬವರಿಂದ ಖರೀದಿಸಿದ ದನಗಳನ್ನು ಸಾಗಿಸುತ್ತಿದ್ದಾಗ ಸಂಕಲಕರಿಯ ರಾಜ್ಯ ಹೆದ್ದಾರಿಯಲ್ಲಿ ತಡೆದು ನಿಲ್ಲಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ

ಅಕ್ರಮವಾಗಿ ದನ ಸಾಗಾಟ – ಓರ್ವ ಪೊಲೀಸರ ವಶಕ್ಕೆ Read More »

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ : ಕೃತ್ಯಕ್ಕೆ ಹಣಕಾಸು ಪೂರೈಸಿದ ಪ್ರಮುಖ ಇಬ್ಬರು ಆರೋಪಿಗಳ ಬಂಧನ

ಉಡುಪಿ : ಮುದರಂಗಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿದೆ.ಬಡಾ ಎರ್ಮಾಳ್ ಗ್ರಾಮದ ಅದಮಾರು ಮಠದ ಬಳಿ ನಿವಾಸಿ ಸದಾನಂದ ದೇವಾಡಿಗ (41) ಹಾಗೂ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಬಳಿ ನಿವಾಸಿ ಕಿಶೋರ್ ರಾಮ ಪೂಜಾರಿ (47) ಬಂಧಿತ ಆರೋಪಿಗಳು. ಆ.7ರಂದು ನಡೆದ ಕೃತ್ಯಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು, ಪ್ರಕರಣದಲ್ಲಿ ನೇರವಾಗಿ

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ : ಕೃತ್ಯಕ್ಕೆ ಹಣಕಾಸು ಪೂರೈಸಿದ ಪ್ರಮುಖ ಇಬ್ಬರು ಆರೋಪಿಗಳ ಬಂಧನ Read More »

ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ : ಇಬ್ಬರ ಬಂಧನ

ಮಂಗಳೂರು : ತೊಕ್ಕೊಟ್ಟು ಬಳಿ ಶನಿವಾರ ತಡರಾತ್ರಿ ಸಾರ್ವಜನಿಕವಾಗಿ ತಲವಾರು ಝಳಪಿಸಿ ಜನರನ್ನು ಬೆದರಿಸಿದ ಆರೋಪದಲ್ಲಿ ಇಬ್ಬರನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಾರ್ಗತಲೆ ನಿವಾಸಿ ರೌಡಿಶೀಟರ್ ಮುಹಮ್ಮದ್ ಶಾಕಿರ್ ಹಾಗೂ ಆಟೋ ರಿಕ್ಷಾ ಚಾಲಕ ಮಂಚಿಲ ನಿವಾಸಿ ಅಶ್ಫಾಕ್ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ 12:00 ರಿಂದ 12:20 ರ ನಡುವೆ ತೊಕ್ಕೊಟ್ಟು ವಿನಮ್ರ ಬಾರ್‌ನಲ್ಲಿ ಈ ಘಟನೆ ನಡೆದಿದೆ. ಶಾಕಿರ್ ತಲವಾರು ಹಿಡಿದುಕೊಂಡು ಸಾರ್ವಜನಿಕರಿಗೆ ಬೆದರಿಕೆ ಹಾಕಿದ್ದಾನೆ. ಆರೋಪಿ ಅಶ್ಫಾಕ್ ರಿಕ್ಷಾದಲ್ಲಿ ಬಂದಿದ್ದ

ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ : ಇಬ್ಬರ ಬಂಧನ Read More »

ಡೇವಿಡ್‌ ಹತ್ಯೆ ಪ್ರಕರಣ – ಮೂವರ ಬಂಧನ

ಹಣಕಾಸಿನ ವೈಮನಸ್ಸು – ಸುಪಾರಿ ಹತ್ಯೆ ಉಡುಪಿ : ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌ ಡಿಸೋಜಾ (55) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಒಬ್ಬ ಆರೋಪಿ ಪೊಲೀಸ್‌ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಗಸ್ಟ್‌ 7ರಂದು ಮಧ್ಯಾಹ್ನ 3.45ರ ಸುಮಾರಿಗೆ ಕಾಪು ತಾಲೂಕಿನ ಮುದರಂಗಡಿಯ ಸೆಂಟ್‌ ಕ್ಷೇವಿಯರ್‌ ಚರ್ಚ್‌ ಕಾಂಪ್ಲೆಕ್ಸ್‌ನಲ್ಲಿರುವ ಪ್ರಿನ್ಸ್‌ ಎಂಟರ್‌ಪ್ರೈಸಸ್‌ ಕಚೇರಿಗೆ ಬಂದಿದ್ದ ಡೇವಿಡ್‌ ಡಿಸೋಜಾ ಬಳಿಕ ತಮ್ಮ ಥಾರ್‌ ವಾಹನದ

ಡೇವಿಡ್‌ ಹತ್ಯೆ ಪ್ರಕರಣ – ಮೂವರ ಬಂಧನ Read More »

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಡೇವಿಡ್ ಹಂತಕನಿಗೆ ಗುಂಡಿಕ್ಕಿದ ಕಾಪು ಎಸ್‌ಐ ತೇಜಸ್ವಿ

ಉಡುಪಿ : ಕಾಪು ತಾಲೂಕಿನ ಮುದರಂಗಡಿಯಲ್ಲಿ ಜು. 7ರ ಹಾಡಹಗಲೇ ಗ್ರಾ.ಪಂ. ಮಾಜಿ ಅಧ್ಯಕ್ಷ, ಉದ್ಯಮಿ ಡೇವಿಡ್‌ ಡಿಸೋಜಾರನ್ನು ಹತ್ಯೆಗೈದ ಹಂತಕನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಹಂತಕ ರಾಜುನನ್ನು 7 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಪು ಠಾಣೆ ಪಿಎಸ್ಐ ತೇಜಸ್ವಿ ಟಿ.ಐ., ಕಾರ್ಕಳ ಗ್ರಾಮಾಂತರ ಠಾಣೆ ಪಿಎಸ್ಐ ಪ್ರಸನ್ನ ಎಂ.ಎಸ್., ಶಿರ್ವ‌ ಪಿಎಸ್ಐ ಮಂಜುನಾಥ್ ಮರಬದ ಹಾಗೂ ಬೈಂದೂರು ಪಿಎಸ್ಐ ಮಹೇಶ್ ಅವರ ತಂಡವು ಹಂತಕನನ್ನು ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ಬಂಧಿಸಿ

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಡೇವಿಡ್ ಹಂತಕನಿಗೆ ಗುಂಡಿಕ್ಕಿದ ಕಾಪು ಎಸ್‌ಐ ತೇಜಸ್ವಿ Read More »

ಮರಕ್ಕೆ ಕಟ್ಟಿ ಯುವಕನಿಗೆ ಹಲ್ಲೆ : ಇಬ್ಬರ ಬಂಧನ

ದಲಿತ ದೌರ್ಜನ್ಯ ಪ್ರಕರಣದಲ್ಲಿ ಯುವಕನ ಬಂಧನ ಉಡುಪಿ : ಯುವಕನೋರ್ವನನ್ನು ಮರಕ್ಕೆ ಕಟ್ಟಿ ಥಳಿಸಿದ ಪ್ರಕರಣವೊಂದಕ್ಕೆ ಸಂಬಂಧಿಸಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದ್ದು, ಒಟ್ಟು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯುವಕನನ್ನು ಮರಕ್ಕೆ ಕಟ್ಟಿಹಾಕಿದ್ದ ಫೋಟೋ ಜಾಲತಾಣದಲ್ಲಿ ವೈರಲ್ ಆಗಿತ್ತು. ದಲಿತ ದೌರ್ಜನ್ಯ ಪ್ರಕರಣಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾಲ ಗ್ರಾಮದಲ್ಲಿ ಆ.6ರಂದು ಮನೆಯೊಂದಕ್ಕೆ ನುಗ್ಗಿದ ಸನತ್ ಮೊಗವೀರ ಎಂಬಾತ ಯುವತಿಯೊಬ್ಬಳ ಜೊತೆಗೆ ಅನುಚಿತವಾಗಿ ವರ್ತಿಸಿ ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಿ ನೊಂದ ಯುವತಿ

ಮರಕ್ಕೆ ಕಟ್ಟಿ ಯುವಕನಿಗೆ ಹಲ್ಲೆ : ಇಬ್ಬರ ಬಂಧನ Read More »

ಬಸ್ ನಿಲ್ದಾಣದ ಬಳಿ ಮಟ್ಕಾ ದಂಧೆ – ಇಬ್ಬರು ಆರೋಪಿಗಳ ಬಂಧನ

ಕಾರ್ಕಳ: ಬಸ್‌ ನಿಲ್ದಾಣದ ಸಮೀಪವಿರುವ ‘ಮಹಾಮ್ಮಾಯಿ ಮುಖ್ಯಪ್ರಾಣ ಎಂಟರ್ ಪ್ರೈಸಸ್’ ಅಂಗಡಿಯಲ್ಲಿ ಅಕ್ರಮವಾಗಿ ಮಟ್ಕಾ ದಂಧೆ ನಡೆಸುತ್ತಿದ್ದ ಮಿಯ್ಯಾರು ಗ್ರಾಮದ ವೀರೇಂದ್ರ ಶೆಟ್ಟಿ (42) ಹಾಗೂ ಪ್ರಮೋದ್ ಎಂಬಿಬ್ಬರನ್ನು ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.​ಆ.1 ರಂದು ಆರೋಪಿಗಳು “1 ರೂಪಾಯಿಗೆ 70 ರೂಪಾಯಿ ನೀಡುವುದಾಗಿ” ಜನರಿಗೆ ಆಮಿಷ ಒಡ್ಡಿ ಮಟ್ಕಾ ಜುಗಾರಿ ಆಟಕ್ಕಾಗಿ ಹಣ ಸಂಗ್ರಹಿಸುತ್ತಿದ್ದರು. ಈ ಕುರಿತು ಬಂದ ಖಚಿತ ಮಾಹಿತಿ ಮೇರೆಗೆ ಕಾರ್ಕಳ ನಗರ ಠಾಣೆಯ ತನಿಖಾ ವಿಭಾಗದ ಎಸ್ ಐ ಶಿವಕುಮಾರ್ ಎಸ್.

ಬಸ್ ನಿಲ್ದಾಣದ ಬಳಿ ಮಟ್ಕಾ ದಂಧೆ – ಇಬ್ಬರು ಆರೋಪಿಗಳ ಬಂಧನ Read More »

ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯ – ವಾಟ್ಸಾಪ್‌ನಲ್ಲಿ ಮಾತುಕತೆ

ಬಾರ್‌ನಲ್ಲಿ ಜಗಳ, ಹಲ್ಲೆ, ಬೆದರಿಕೆ : ಯುವತಿಯಿಂದ ಯುವಕನ ವಿರುದ್ಧ ದೂರು ದಾಖಲು ಕಾರ್ಕಳ : ಯುವತಿಯ ಮೇಲೆ ಯುವಕನೋರ್ವ ಹಲ್ಲೆ ಮಾಡಿ ಬೆದರಿಕೆ ಹಾಕಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಸಬಾ ಗ್ರಾಮದ ಕಾವೇರಡ್ಕದ 19 ವರ್ಷದ ಯುವತಿಯೋರ್ವಳಿಗೆ ಇನ್ಸ್ಟಾಗ್ರಾಮ್‌ ಮೂಲಕ ಬಜಗೋಳಿಯ ಯುವಕ ಪರಿಚಯವಾಗಿದ್ದು, ಇವರಿಬ್ಬರೂ ವಾಟ್ಸಾಪ್‌ನಲ್ಲಿ ಮಾತನಾಡುತ್ತಿದ್ದರು. ಜು. 15ರಂದು ಯುವ ಯುವತಿಗೆ ಕರೆ ಮಾಡಿ ಕಸಬಾ ಗ್ರಾಮದ ಬಸ್ ನಿಲ್ದಾಣದ ಬಳಿ ಇರುವ ಮೆಡಿಕಲ್‌ಗೆ ಬರುವಂತೆ ತಿಳಿಸಿದ್ದಾನೆ. ಬಸ್

ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯ – ವಾಟ್ಸಾಪ್‌ನಲ್ಲಿ ಮಾತುಕತೆ Read More »

ಮಾದಕವಸ್ತು ಸಾಗಟ – ಕಾರ್ಕಳದ ಇಬ್ಬರು ಸಹಿತ ಮೂವರ ಬಂಧನ

ಉಡುಪಿ : ಉಡುಪಿ ಜಿಲ್ಲೆಯ ಶಿವಳ್ಳಿ ಗ್ರಾಮದ ಬುಡ್ನಾರ್‌ನಲ್ಲಿ ಎಂ.ಡಿ.ಎಂ.ಎ ಪೌಡರ್, ಎಂ.ಡಿ.ಎಂ.ಎ ಟ್ಯಾಬ್ಲೆಟ್ ಹಾಗೂ ಹೈಡ್ರೋ ಗಾಂಜಾ ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಉದ್ಯಾವರ ಪಿತ್ರೋಡಿಯ ವಿಜಯ ಪೂಜಾರಿ (36), ಕಾರ್ಕಳದ ಕುಕ್ಕಂದೂರು ಹಾರ್ಜಿಡ್ಡು ನಿವಾಸಿ ಪಿ.ಎ.ಮುಹಮ್ಮದ್ ಶಮ್ಮಾಸ್(24) ಹಾಗೂ ಕಾರ್ಕಳ ತಾಲೂಕು ಕುಂಟಿಬೈಲು ಮಿಯಾರು ಗ್ರಾಮದ ಆಕಾಶ್ ಶೆಟ್ಟಿ (20) ಬಂಧಿತ ಆರೋಪಿಗಳು. ಆರೋಪಿಗಳಿಂದ 4 ಗ್ರಾಂ ಎಂ.ಡಿ.ಎಂ.ಎ ಪೌಡರ್, 2.5 ಗ್ರಾಂ ಹೈಡ್ರೋ ಗಾಂಜಾ, 3.65 ಗ್ರಾಂ, ಎಂ.ಡಿ.ಎಂ.ಎ ಟ್ಯಾಬ್ಲೆಟ್‌ ಹಾಗೂ ಗಾಂಜಾ ವಶಕ್ಕೆ

ಮಾದಕವಸ್ತು ಸಾಗಟ – ಕಾರ್ಕಳದ ಇಬ್ಬರು ಸಹಿತ ಮೂವರ ಬಂಧನ Read More »

error: Content is protected !!
Scroll to Top