• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕ್ರೈಂ

ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಆಟ – ಪೊಲೀಸ್‌ ದಾಳಿ

ಕಾರ್ಕಳ : ಕುಕ್ಕುಜೆ ಗ್ರಾಮದ ದೊಂಡೆರಂಗಡಿ ಪೇಟೆಯಲ್ಲಿ ಸಂತೋಷ್‌ ಪೂಜಾರಿಯವರ ಅಂಗಡಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಅಶ್ವಿನ್‌ 1 ರೂಪಾಯಿಗೆ 70 ರೂಪಾಯಿ ಕೊಡುವುದಾಗಿ ಕೂಗುತ್ತಾ ಮಟ್ಕಾ ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಅಜೆಕಾರು ಪೊಲೀಸ್‌ ಠಾಣೆಯ ಉಪ ನಿರೀಕ್ಷಕ ಮಹೇಶ್‌ ಟಿ. ಎಮ್‌. ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. ಅಶ್ವಿನ್‌ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಜನರಿಂದ ಸಂಗ್ರಹಿಸಿದ ಹಣವನ್ನು ಸಂತೋಷ ಪೂಜಾರಿಯವರಿಗೆ ನೀಡುತ್ತಿದ್ದು ಅವರು ಆತನಿಗೆ 100 ರೂಪಾಯಿಗೆ 20 ರೂಪಾಯಿಯಂತೆ ಕಮಿಷನ್‌ […]

ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಆಟ – ಪೊಲೀಸ್‌ ದಾಳಿ Read More »

ರೌಡಿಶೀಟರ್ ಸೋಮನಾಥ ಉಡುಪಿ ಜಿಲ್ಲೆಯಿಂದ ಗಡಿಪಾರು

ಕಾರ್ಕಳ: ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ನಿರಂತರವಾಗಿ ಧಕ್ಕೆ ತರುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ, ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸೋಮನಾಥ ಅಲಿಯಾಸ್ ಸೋಮು (40) ಎಂಬಾತನನ್ನು ಉಡುಪಿ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಗುರುವಾರ ಆದೇಶ ಹೊರಡಿಸಿದ್ದಾರೆ.​11 ಪ್ರಕರಣಗಳ ದಾಖಲೆ:ಕಾರ್ಕಳ ತಾಲೂಕು ಕಸಬ ಗ್ರಾಮದ ತೆಳ್ಳಾರು ರಸ್ತೆ ನಿವಾಸಿಯಾಗಿರುವ ಸೋಮನಾಥನ ವಿರುದ್ಧ ಈಗಾಗಲೇ ಕಾರ್ಕಳ ನಗರ ಠಾಣೆಯಲ್ಲಿ ರೌಡಿ ಪಟ್ಟಿ (Rowdy Sheet) ತೆರೆಯಲಾಗಿತ್ತು. ಈತನ ಮೇಲೆ ಹಲ್ಲೆ, ಬೆದರಿಕೆ ಸೇರಿದಂತೆ

ರೌಡಿಶೀಟರ್ ಸೋಮನಾಥ ಉಡುಪಿ ಜಿಲ್ಲೆಯಿಂದ ಗಡಿಪಾರು Read More »

ಜಾಗದ ವಿಚಾರಕ್ಕೆ ಹಲ್ಲೆ

ಕಾರ್ಕಳ: ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿರುವ ಘಟನೆ ತಾಲೂಕಿನ ಬೆಳ್ಮಣ್ ಗ್ರಾಮದ ಎಂಆರ್‌ಪಿಎಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಮೂಡಬಿದ್ರೆಯ ಹೆನ್ರಿ ಪಿಂಟೋ (65) ಹಲ್ಲೆಗೊಳಗಾದವರು. ಇವರು 2008ರಲ್ಲಿ ಆರೋಪಿ ಮೈಕೆಲ್ ಕುಟಿನ್ಹೋ ಎಂಬುವವರಿಂದ 50 ಸೆಂಟ್ಸ್ ಜಾಗ ಖರೀದಿ ಮಾಡಿದ್ದರು. ಏಪ್ರಿಲ್ 9ರಂದು ಬೆಳಿಗ್ಗೆ ಹೆನ್ರಿ ಅವರು ತಮ್ಮ ಜಾಗದ ಕಸ ಕಡ್ಡಿಗಳಿಗೆ ಬೆಂಕಿ ಹಾಕಿ ಸ್ವಚ್ಛಗೊಳಿಸುತ್ತಿದ್ದಾಗ ಅಲ್ಲಿಗೆ ಬಂದ ಮೈಕೆಲ್ ಬೆಂಕಿ ಹಾಕಲು ನಿನಗೆ ಯಾರು ಹೇಳಿದ್ದು ಎಂದು ಅವಾಚ್ಯವಾಗಿ

ಜಾಗದ ವಿಚಾರಕ್ಕೆ ಹಲ್ಲೆ Read More »

ಬೀಗ ಹಾಕಿದ ಮನೆಯಲ್ಲಿ ಕಳ್ಳತನ; 2.64 ಲಕ್ಷ ಮೌಲ್ಯದ ಚಿನ್ನಾಭರಣ ಅಪಹರಣ

ಕಾರ್ಕಳ: ತಾಲ್ಲೂಕಿನ ಕಸಬಾ ಗ್ರಾಮದ ಅಯ್ಯಪ್ಪನಗರ ನಿವಾಸಿಯೊಬ್ಬರ ಮನೆಯ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.​ಇಲ್ಲಿನ ನಿವಾಸಿ ಶಂಕರ ಕುಲಾಲ್ (49) ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಸುಮಾರು 2.64 ಲಕ್ಷ ಮೌಲ್ಯದ ಸ್ವತ್ತುಗಳನ್ನು ಕಳ್ಳರು ದೋಚಿದ್ದಾರೆ.​ಘಟನೆಯ ವಿವರ:​ಶಂಕರ ಕುಲಾಲ್ ಅವರು ಏಪ್ರಿಲ್ 23ರಂದು ಬೆಳಿಗ್ಗೆ 9:10ಕ್ಕೆ ಮನೆಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದರು. ಏಪ್ರಿಲ್ 24ರಂದು ಸಂಜೆ 6:00 ಗಂಟೆಗೆ ಮನೆಗೆ ವಾಪಸಾದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಬೀಗ ಹಾಕಿದ ಮನೆಯಲ್ಲಿ ಕಳ್ಳತನ; 2.64 ಲಕ್ಷ ಮೌಲ್ಯದ ಚಿನ್ನಾಭರಣ ಅಪಹರಣ Read More »

ಮದುವೆಯಾಗುವುದಾಗಿ ನಂಬಿಸಿ ಅಕ್ರಮ ಗರ್ಭ: ಸಂತ್ರಸ್ತೆಗೆ ಮಾಸಿಕ 75 ಸಾವಿರ ಪಾವತಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭಿಣಿಯಾಗಿಸಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಕೃಷ್ಣ ಜೆ. ರಾವ್ ವಿರುದ್ಧದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಆದರೆ, ಸಂತ್ರಸ್ತೆ ಮತ್ತು ಮಗುವಿನ ಜೀವನೋಪಾಯಕ್ಕಾಗಿ ಪ್ರತಿ ತಿಂಗಳು 75,000 ಪಾವತಿಸಬೇಕೆಂಬ ಕಠಿಣ ಷರತ್ತನ್ನು ನ್ಯಾಯಾಲಯ ವಿಧಿಸಿದೆ.​ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ

ಮದುವೆಯಾಗುವುದಾಗಿ ನಂಬಿಸಿ ಅಕ್ರಮ ಗರ್ಭ: ಸಂತ್ರಸ್ತೆಗೆ ಮಾಸಿಕ 75 ಸಾವಿರ ಪಾವತಿಸಲು ಹೈಕೋರ್ಟ್ ಆದೇಶ Read More »

ಬೈಕ್‌ಗಳ ಮುಖಾಮುಖಿ ಢಿಕ್ಕಿ; ಮೂವರಿಗೆ ಗಾಯ

ಕಾರ್ಕಳ: ತಾಲೂಕಿನ ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ಬಳಿ ಬೆಳ್ಮಣ್–ಕಿನ್ನಿಗೋಳಿ ಮುಖ್ಯರಸ್ತೆಯಲ್ಲಿ ಗುರುವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ.​ಕಿನ್ನಿಗೋಳಿ ಕಡೆಯಿಂದ ಬೆಳ್ಮಣ್ ಕಡೆಗೆ ತೆರಳುತ್ತಿದ್ದ ಸವಾರ ಅಮರನಾಥ್ ಎಂಬಾತ ತನ್ನ ವಾಹನವನ್ನು ಅಜಾಗರೂಕತೆಯಿಂದ ರಸ್ತೆಯ ತೀರಾ ಬಲಬದಿಗೆ ಚಲಾಯಿಸಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಬೈಕ್‌ಗೆ ಢಿಕ್ಕಿ ಹೊಡೆದಿದ್ದಾನೆ. ಇದರಿಂದಾಗಿ ಬೆಳ್ಮಣ್ ಕಡೆಯಿಂದ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ಸವಾರ ರಮೇಶ್ ಅವರಿಗೆ ತಲೆಯ ಭಾಗಕ್ಕೆ ತೀವ್ರ ರಕ್ತಗಾಯವಾಗಿದೆ.​ಅಪಘಾತದ ರಭಸಕ್ಕೆ ಎರಡೂ ವಾಹನಗಳು ರಸ್ತೆಗೆ ಬಿದ್ದಿದ್ದು,

ಬೈಕ್‌ಗಳ ಮುಖಾಮುಖಿ ಢಿಕ್ಕಿ; ಮೂವರಿಗೆ ಗಾಯ Read More »

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ ₹25.66 ಲಕ್ಷ ವಂಚನೆ: ಕಾರ್ಕಳದಲ್ಲಿ ಪ್ರಕರಣ ದಾಖಲು

ಕಾರ್ಕಳ: ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ವಿವಿಧ ಕುಂಟು ನೆಪಗಳನ್ನು ಹೇಳಿ ಯುವಕನೊಬ್ಬನಿಂದ ಬರೋಬ್ಬರಿ 25.66 ಲಕ್ಷ ರೂಪಾಯಿ ಹಣ ಪಡೆದು ವಂಚಿಸಿರುವ ಘಟನೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಂಚನೆಗೆ ಒಳಗಾದ ನಲ್ಲೂರು ಗ್ರಾಮದ ಗಣೇಶ ಆಚಾರ್ಯ (34) ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.​ಘಟನೆಯ ವಿವರ: 2024ರ ಜುಲೈ 23ರಂದು ಇನ್‌ಸ್ಟಾಗ್ರಾಂ ಮೂಲಕ ಸುಜನ್ ಶೆಟ್ಟಿ ಸಿದ್ದಾಪುರ ಎಂಬಾತ ಪಿರ್ಯಾದಿದಾರ ಗಣೇಶ ಅವರಿಗೆ ಪರಿಚಯವಾಗಿದ್ದ. ಆರಂಭದಲ್ಲಿ ಕಾಲೇಜಿಗೆ ಹೋಗಲು

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ ₹25.66 ಲಕ್ಷ ವಂಚನೆ: ಕಾರ್ಕಳದಲ್ಲಿ ಪ್ರಕರಣ ದಾಖಲು Read More »

ಡಿಸಿ ಕಚೇರಿ ಬಳಿ ಮಾವು ಕೊಯ್ಯುವ ವೇಳೆ ವಿದ್ಯುತ್‌ ಸ್ಪರ್ಶ – ಸಿಬ್ಬಂದಿ ಮೃತ್ಯು

ಉಡುಪಿ : ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಮಾವಿನ ಮರದಿಂದ ಮಾವಿನ ಕಾಯಿ ಕೊಯ್ಯುವ ವೇಳೆ ವಿದ್ಯುತ್‌ ತಂತಿ ಸ್ಪರ್ಶಿಸಿ ಜಿಲ್ಲಾಧಿಕಾರಿ ಕಚೇರಿ ಗ್ರಾಮ ಸಹಾಯಕ ಅಲೆವೂರು ನಿವಾಸಿ ಸದಾನಂದ ದೇವಾಡಿಗ (55) ಮೃತಪಟ್ಟಿರುತ್ತಾರೆ. ಎ, 24ರಂದು ಬೆಳಗ್ಗೆ ಮಾವಿನ ಕಾಯಿ ಕೊಯ್ಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿದೆ. ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬಂದಿ ಆಗಮಿಸಿ ಮೃತದೇಹ ತೆರವುಗೊಳಿಸಲು ನೆರವಾದರು. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿಸಿ ಕಚೇರಿ ಬಳಿ ಮಾವು ಕೊಯ್ಯುವ ವೇಳೆ ವಿದ್ಯುತ್‌ ಸ್ಪರ್ಶ – ಸಿಬ್ಬಂದಿ ಮೃತ್ಯು Read More »

ಕದ್ರಿ ಗೋಡೆ ಬರಹದ ಆರೋಪಿ ಅರಾಫತ್ ಅಲಿಗೆ 6 ವರ್ಷ ಕಠಿಣ ಶಿಕ್ಷೆ

ಮಂಗಳೂರು/ಬೆಂಗಳೂರು: ಶಿವಮೊಗ್ಗ ಮತ್ತು ಮಂಗಳೂರು ಕೇಂದ್ರಿತ ಐಸಿಸ್ ಉಗ್ರ ಸಂಘಟನೆಯ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡಿದ ಹಾಗೂ ಯುವಕರನ್ನು ಸಂಘಟನೆಗೆ ಸೇರ್ಪಡೆಗೊಳಿಸಲು ಸಂಚು ರೂಪಿಸಿದ ಪ್ರಕರಣದ ಪ್ರಮುಖ ಆರೋಪಿ ಅರಾಫತ್ ಅಲಿಗೆ ಎನ್‌ಐಎ ವಿಶೇಷ ನ್ಯಾಯಾಲಯವು ಬುಧವಾರ ಆರು ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ರಾಷ್ಟ್ರೀಯ ತನಿಖಾ ದಳ (NIA) ಸಲ್ಲಿಸಿದ್ದ ಸಾಕ್ಷ್ಯಾಧಾರಗಳನ್ನು ಪುರಸ್ಕರಿಸಿದ ನ್ಯಾಯಾಲಯವು, ಆರೋಪಿಗೆ ಶಿಕ್ಷೆಯ ಜೊತೆಗೆ ದಂಡವನ್ನೂ ವಿಧಿಸಿದೆ. ಈ ಪ್ರಕರಣದಲ್ಲಿ ಈಗಾಗಲೇ ಮಾಝ್ ಮುನೀರ್ ಅಹ್ಮದ್ ಮತ್ತು ಸೈಯದ್ ಯಾಸಿನ್

ಕದ್ರಿ ಗೋಡೆ ಬರಹದ ಆರೋಪಿ ಅರಾಫತ್ ಅಲಿಗೆ 6 ವರ್ಷ ಕಠಿಣ ಶಿಕ್ಷೆ Read More »

ಮದ್ಯಪಾನದ ವ್ಯಸನಿ ಆತ್ಮಹತ್ಯೆ

ಅಜೆಕಾರು: ಅತಿಯಾದ ಮದ್ಯಪಾನದ ಚಟದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ವೃದ್ಧರೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮರ್ಣೆ ಗ್ರಾಮದ ಕುಂಟಿನಿ ಎಂಬಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಆನಂದ ಸೆರ್ವೆಗಾರ್ (65) ಮೃತಪಟ್ಟವರು. ಇವರು ಕಳೆದ 15 ವರ್ಷಗಳಿಂದ ಮರ್ಣೆ ಗ್ರಾಮದ ವಸಂತ ಶೆಟ್ಟಿ ಅವರ ಮನೆಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು.​ಆನಂದ ಅವರು ವಿಪರೀತ ಮದ್ಯಪಾನದ ಚಟ ಹೊಂದಿದ್ದರು.ಏಪ್ರಿಲ್ 19ರ ರಾತ್ರಿ ಮಧ್ಯಾವಧಿಯಲ್ಲಿ ಮನೆಯ ಮುಂಭಾಗದ ಮಾವಿನ ಮರದ ಕೊಂಬೆಗೆ ತಮ್ಮ ಪಂಚೆಯಿಂದ (ವೇಸ್ಟಿ)

ಮದ್ಯಪಾನದ ವ್ಯಸನಿ ಆತ್ಮಹತ್ಯೆ Read More »

error: Content is protected !!
Scroll to Top