• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕ್ರೈಂ

ಅನಾರೋಗ್ಯದಿಂದ ಮನನೊಂದ ವ್ಯಕ್ತಿ ಆತ್ಮಹತ್ಯೆ

​ಕಾರ್ಕಳ: ಕಾಯಿಲೆ ಗುಣಮುಖವಾಗದ ನೋವಿನಿಂದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ಎಂಬಲ್ಲಿ ಸಂಭವಿಸಿದೆ.ಜೆಡ್ಡು ಮನೆ ನಿವಾಸಿ ಉಮೇಶ ಕೋಟ್ಯಾನ್ ಮೃತಪಟ್ಟವರು.ಇವರು ಈ ಹಿಂದೆ ಮುಂಬೈನಲ್ಲಿ ಹೋಟೆಲ್ ವ್ಯವಹಾರ ನಡೆಸುತ್ತಿದ್ದರು. ಅಲ್ಲಿ ನಷ್ಟ ಅನುಭವಿಸಿದ ಕಾರಣ ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಊರಿಗೆ ಮರಳಿದ್ದರು.​ಮೃತರು ಕರುಳಿನ ವ್ಯಾದಿ ಹಾಗೂ ಬಿಳಿ ಕಾಮಾಲೆ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.ಇದರ ನಡುವೆ ವಿಪರೀತ ಮದ್ಯಪಾನದ ಚಟ ಇತ್ತು. ಔಷಧೋಪಚಾರ ಮಾಡಿದರೂ ಅನಾರೋಗ್ಯದ ಸಮಸ್ಯೆ […]

ಅನಾರೋಗ್ಯದಿಂದ ಮನನೊಂದ ವ್ಯಕ್ತಿ ಆತ್ಮಹತ್ಯೆ Read More »

ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು: ಪಂಚಮಸಾಲಿ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿರುವ ಸಂತ್ರಸ್ತೆ, ಸ್ವಾಮೀಜಿಯವರು ತಮ್ಮ ವಿಶ್ವಾಸವನ್ನು ದುರುಪಯೋಗಪಡಿಸಿಕೊಂಡು ದೈಹಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿದ್ದಾರೆ.​ದೂರಿನ ಸಾರಾಂಶದಂತೆ, ಲಿಂಗಾಯತ ಸಮುದಾಯಕ್ಕೆ ಸೇರಿದ ಸಂತ್ರಸ್ತ ಮಹಿಳೆ ಸ್ವಾಮೀಜಿಯವರ ಭಕ್ತೆಯಾಗಿದ್ದು, ಹಲವು ಹೋರಾಟಗಳಲ್ಲಿ ಅವರಿಗೆ ಬೆಂಬಲ ನೀಡಿದ್ದರು. ಈ ಪರಿಚಯದ ಹಿನ್ನೆಲೆಯಲ್ಲಿ ಮಠಕ್ಕೆ ಕರೆಸಿಕೊಂಡ ಸ್ವಾಮೀಜಿ, ‘ಪ್ರಸಾದ

ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಮಹಿಳಾ ಆಯೋಗಕ್ಕೆ ದೂರು Read More »

ಜೆಇಇ ಮೈನ್ಸ್‌ ಪ್ರಶ್ನೆ ಪತ್ರಿಕೆ ಪ್ರಸಾರಕ್ಕೆ ಯತ್ನಿಸಿದ ವಿದ್ಯಾರ್ಥಿ

ಉಡುಪಿ : ಜೆ.ಇ.ಇ ಮೈನ್ಸ್ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬ ಪ್ರಶ್ನೆ ಪತ್ರಿಕೆ ಪೋಟೋ ತೆಗೆದು ಪ್ರಸಾರ ಮಾಡಲು ಯತ್ನಿಸಿದ ಘಟನೆ ಎ. 5ರಂದು ಮಣಿಪಾಲದಲ್ಲಿ ನಡೆದಿದೆ. ಉತ್ತರಖಂಡದ ವಿದ್ಯಾರ್ಥಿ ಅರೀದಮಾನ್ ಸಿಂಗ್ ಸಾಂಗ್ ಪ್ರಶ್ನೆ ಪತ್ರಿಕೆ ಪ್ರಸಾರ ಮಾಡಲು ಯತ್ನಿಸಿದ ಆರೋಪಿ. ಟಿಎಂಎ ಪೈ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಿಂದ ನಡೆಸುವ ಜೆ.ಇ.ಇ ಮೈನ್ಸ್ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಯನ್ನು ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಯಲ್ಲಿ ನಡೆಸಿದ್ದು ಬೆಳಿಗ್ಗೆ ಸುಮಾರು 149 ವಿದ್ಯಾರ್ಥಿಗಳು, ಮಧ್ಯಾಹ್ನ 133

ಜೆಇಇ ಮೈನ್ಸ್‌ ಪ್ರಶ್ನೆ ಪತ್ರಿಕೆ ಪ್ರಸಾರಕ್ಕೆ ಯತ್ನಿಸಿದ ವಿದ್ಯಾರ್ಥಿ Read More »

ಮದುವೆಯಾಗಿ ಒಂದೇ ತಿಂಗಳಲ್ಲಿ ಉದ್ಯಮಿ ಸಾವು – ಪತ್ನಿಯ ವಿರುದ್ಧ ಕೊಲೆಯತ್ನದ ದೂರು

ಕಾರ್ಕಳ : ಕಳೆದ ತಿಂಗಳು ಮದುವೆಯಾಗಿದ್ದ ವಿವಾಹಿತ ಉದ್ಯಮಿ ಮಾ.17 ರಂದು ತಿಂಡಿಯ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೊರಟದಲ್ಲಿದ್ದವರು ಚಿಕಿತ್ಸೆ ಫಲಿಸದೆ ಮಾ.29 ರಂದು ಬೆಳಗ್ಗೆ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ ಮೂಲತಃ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (36) ಪುತ್ತೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ(28) ಜೊತೆ

ಮದುವೆಯಾಗಿ ಒಂದೇ ತಿಂಗಳಲ್ಲಿ ಉದ್ಯಮಿ ಸಾವು – ಪತ್ನಿಯ ವಿರುದ್ಧ ಕೊಲೆಯತ್ನದ ದೂರು Read More »

ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನ – ಆರೋಪಿಗಳ ಬಂಧನ

ಕಾರ್ಕಳ : ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಆರೋಪಿಗಳನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ ಘಟನೆ ಮಾ. 27ರಂದು ನಡೆದಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್‌ ಉಪನಿರೀಕ್ಷಕ ಪ್ರಸನ್ನ ಎಂ. ಎಸ್. ಮತ್ತು ಸಿಬ್ಬಂದಿ ಕಸಬಾ ಗ್ರಾಮದ ಹಂಚಿಕಟ್ಟೆ ಹೋಂಡಾ ಶೋರೂಮ್ ಬಳಿ ಬಂಗ್ಲೆಗುಡ್ಡೆ ವೃತ್ತದಿಂದ ಬರುತ್ತಿದ್ದ KA-15 Z-0007ನೇ ನಂಬ್ರದ ಕಪ್ಪು ಬಣ್ಣದ ಫಾರ್ಚುನರ್ ಕಾರನ್ನು ನಿಲ್ಲಿಸುವಂತೆ ಸೂಚನೆ ನೀಡಿದಾಗ, ಕಾರಿನಲ್ಲಿದ್ದ ಆಪಾದಿತರಾದ ಕುಂದಾಪುರ ಮೂಲದ ಸುದರ್ಶನ್, ಕರ್ತವ್ಯ ಶೆಟ್ಟಿ, ಅರುಣ್,

ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನ – ಆರೋಪಿಗಳ ಬಂಧನ Read More »

ಕೋಳಿ ಅಂಕಕ್ಕೆ ದಾಳಿ ಮಾಡಿಸಿರುವ ಆರೋಪ – ವ್ಯಕ್ತಿಯ ಮೇಲೆ ಹಲ್ಲೆ

ಕಾರ್ಕಳ : ಕೋಳಿ ಅಂಕಕ್ಕೆ ದಾಳಿ ಮಾಡಿಸಿರುವುದಾಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಘಟನೆ ಮಾ. 16ರಂದು ಹೆಬ್ರಿಯಲ್ಲಿ ನಡೆದಿದೆ. ನಾಲ್ಕೂರು ಗ್ರಾಮದ ವಿಠಲ ಎಂಬವರು ಮುದ್ದೂರಿಗೆ ಹೋಗುವಾಗ ಕೆಂಜೂರು ಜಯಕರ ಶೆಟ್ಟಿಯವರು ಪಾದೆ ಮಠದಲ್ಲಿ ಕೋಳಿ ಅಂಕ ಪಡೆಗೆ ರೈಡ್‌ ಮಾಡಿಸಿರುವುದಾಗಿ ಆರೋಪಿಸಿ ಅವಾಚ್ಯವಾಗಿ ಬೈದು ಹಲ್ಲೆ ಮಾಡಿ ಬೆದರಿಕೆ ಹಾಕಿರುವುದಾಗಿ ವಿಠಲ ಅವರು ನೀಡಿದ ದೂರಿನಂತೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕೋಳಿ ಅಂಕಕ್ಕೆ ದಾಳಿ ಮಾಡಿಸಿರುವ ಆರೋಪ – ವ್ಯಕ್ತಿಯ ಮೇಲೆ ಹಲ್ಲೆ Read More »

ಸಾಲ ವಾಪಾಸ್‌ ಕೇಳಿದಕ್ಕೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಸ್ನೇಹಿತ

ಕಾರ್ಕಳ : ಸ್ನೇಹಿತನಿಗೆ ನೀಡಿದ ಸಾಲದ ಹಣ ವಾಪಾಸ್‌ ಕೇಳಿದಕ್ಕೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಮಾ. 13ರಂದು ಪಡುಬಿದ್ರೆಯಲ್ಲಿ ನಡೆದಿದೆ.ಕಾರ್ಕಳ ತಾಲೂಕು ಬಜಗೋಳಿಯ ಸುಮಿತ್‌ ಎಸ್.‌ ಸುವರ್ಣ ಮತ್ತು ಹೆಜಮಾಡಿ ಗುಂಡಿ ನಿವಾಸಿ ಧೀರಜ್‌ ಸ್ನೇಹಿತರಾಗಿದ್ದು, ಸುಮಿತ್‌ 2 ವರ್ಷಗಳ ಹಿಂದೆ ಆರೋಪಿ ಧೀರಜ್‌ಗೆ 2 ಲಕ್ಷ ರೂ. ಸಾಲ ಕೊಟ್ಟಿದ್ದು, ಅದನ್ನು 6 ತಿಂಗಳಲ್ಲಿ ಹಿಂತಿರುಗಿಸುವುದಾಗಿ ತಿಳಿಸಿದ್ದನು. ಆದರೆ ಈವರೆಗೆ ಹಿಂತಿರುಗಿಸದೇ ಇದ್ದು ಮಾ. 13ರಂದು ಸಾಲದ ಹಣವನ್ನು ಕೇಳಿದಾಗ ಕೋಪಗೊಂಡ ಆರೋಪಿಯು

ಸಾಲ ವಾಪಾಸ್‌ ಕೇಳಿದಕ್ಕೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಸ್ನೇಹಿತ Read More »

ತಾಲೂಕು ರೆಕಾರ್ಡ್‌ ರೂಮ್‌ನಲ್ಲಿ ಕಡತ ನಾಪತ್ತೆ – ಸಿಬ್ಬಂದಿ ವಿರುದ್ಧ ದೂರು ದಾಖಲು

ಕಾರ್ಕಳ : ತಾಲೂಕು ಕಚೇರಿಯ ರೆಕಾರ್ಡ್‌ ರೂಮ್‌ನಲ್ಲಿ (ಅಭಿಲೇಖಾಲಯ)ದ್ದ ಕಡತ ನಾಪತ್ತೆಯಾದ ಕುರಿತಾಗಿ ಸಿಬ್ಬಂದಿ ಶ್ರೀನಾಥ ಅವರ ವಿರುದ್ಧ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಶ್ರೀನಾಥ ಅವರು ಕಾರ್ಕಳ ತಾಲೂಕು ಕಚೇರಿಯ ಸಹಾ ಅಭಿಲೇಖಾಲಯ ವಿಷಯ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದು, 2022-23ನೇ ಸಾಲಿನಲ್ಲಿ ಅಜೆಕಾರು ಹೋಬಳಿಯ ಎರ್ಲಪಾಡಿ ಗ್ರಾಮದ mr 03/10-11ರ ಕಡತದ ಪ್ರತಿಯನ್ನು ಅರ್ಜಿದಾರರಿಗೆ ಮಾಹಿತಿ ಹಕ್ಕಿನಡಿಯಲ್ಲಿ ನೀಡಿರುತ್ತಾರೆ. ಆದರೆ ಆ ಕಡತವು ಪ್ರಸುತ್ತ ಅಭಿಲೇಖಾಲಯದಲ್ಲಿ ನಾಪತ್ತೆಯಾಗಿದೆ. ಈ ಬಗ್ಗೆ ಉಪತಹಶೀಲ್ದಾರ್‌ ಕೆ. ಹರಿಪ್ರಸಾದ

ತಾಲೂಕು ರೆಕಾರ್ಡ್‌ ರೂಮ್‌ನಲ್ಲಿ ಕಡತ ನಾಪತ್ತೆ – ಸಿಬ್ಬಂದಿ ವಿರುದ್ಧ ದೂರು ದಾಖಲು Read More »

ವೃದ್ಧ ಮಹಿಳೆಯನ್ನು ಕಡಿದು ಕೊಲೆ : ಇಬ್ಬರು ಪೊಲೀಸ್‌ ವಶಕ್ಕೆ

ಕಾಪು : ಕಾಪು ತಾಲೂಕಿನ ಮಣಿಪುರ ಗ್ರಾಮದ ಅರಬಿ ಕೆನರಾಡಿ ಎಂಬಲ್ಲಿ ಮಹಿಳೆಯೊಬ್ಬರನ್ನು ಕಡಿದು ಕೊಲೆಗೈದ ಘಟನೆ ನಡೆದಿದೆ. ವನಜಾ ಪೂಜಾರ್ತಿ (60) ಕೊಲೆಯಾದ ಮಹಿಳೆ. ಪ್ರಕರಣ ಸಂಬಂಧ ಸ್ಥಳೀಯ ನಿವಾಸಿಗಳಾದ ವಲೇರಿಯನ್ ಮೆಂಡೊನ್ಸಾ ಮತ್ತು ಪ್ರವೀಣ್‌ ಮೆಂಡೊನ್ಸಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಲೇರಿಯನ್ ಮೆಂಡೊನ್ಸಾ ಹಾಗೂ ಪ್ರವೀಣ್‌ ಮೆಂಡೊನ್ಸಾ ಅವರು ದೊಡ್ಡಪ್ಪನ – ಚಿಕ್ಕಪ್ಪ ಮಕ್ಕಳಾಗಿದ್ದು, ವನಜಾ ಪೂಜಾರ್ತಿಯವರೊಂದಿಗೆ ಆಗಾಗ್ಗೆ ಇವರಿಬ್ಬರು ಮದ್ಯಪಾನ ಮಾಡುತ್ತಿದ್ದರು. ಮಾ. 9 ರಂದು ಸಂಜೆ 5 ಗಂಟೆಯಿಂದ ಮಾ.

ವೃದ್ಧ ಮಹಿಳೆಯನ್ನು ಕಡಿದು ಕೊಲೆ : ಇಬ್ಬರು ಪೊಲೀಸ್‌ ವಶಕ್ಕೆ Read More »

ಬಿಜಾಪುರ ಎನ್‌ಕೌಂಟರ್‌ : ಮತ್ತೆ 6 ನಕ್ಸಲರ ಮೃತದೇಹ ಪತ್ತೆ, ಸಾವಿನ ಸಂಖ್ಯೆ 18ಕ್ಕೆ ಏರಿಕೆ

ಬಿಜಾಪುರ : ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಡಿ.3ರಂದು ನಡೆದ ಎನ್‌ಕೌಂಟರ್‌ ನಂತರ ಮತ್ತೆ ಆರು ನಕ್ಸಲರ ಮೃತದೇಹಗಳು ಪತ್ತೆಯಾಗಿದ್ದು, ಇದರೊಂದಿಗೆ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 18ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆ ನಡೆದ ಗುಂಡಿನ ಚಕಮಕಿಯಲ್ಲಿ ರಾಜ್ಯ ಪೊಲೀಸರ ಒಂದು ಘಟಕವಾದ ಜಿಲ್ಲಾ ಮೀಸಲು ಪೊಲೀಸ್ ಪಡೆಯ ಮೂವರು ಸಿಬ್ಬಂದಿ ಸಹ ಹುತಾತ್ಮರಾಗಿದ್ದಾರೆ. ಸುಮಾರು 12 ಗಂಟೆಗಳ ಕಾಲ ನಡೆದ ದೀರ್ಘಾವಧಿಯ ಗುಂಡಿನ ಚಕಮಕಿಯ ನಂತರ, ಬುಧವಾರ ಸಂಜೆ ತಡರಾತ್ರಿಯವರೆಗೆ 12

ಬಿಜಾಪುರ ಎನ್‌ಕೌಂಟರ್‌ : ಮತ್ತೆ 6 ನಕ್ಸಲರ ಮೃತದೇಹ ಪತ್ತೆ, ಸಾವಿನ ಸಂಖ್ಯೆ 18ಕ್ಕೆ ಏರಿಕೆ Read More »

error: Content is protected !!
Scroll to Top