• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ನಿಧನ

ಪೆರ್ವಾಜೆ ಶಿರ್ಡಿ ಸಾಯಿ ಬಾಬಾ ಮಂದಿರ ಪ್ರಧಾನ ಅರ್ಚಕ ಲಕ್ಷ್ಮಿ ನಾರಾಯಣ ಭಟ್ ನಿಧನ

ಕಾರ್ಕಳ : ಪೆರ್ವಾಜೆಯ ಶಿರ್ಡಿ ಸಾಯಿ ಬಾಬಾ ಮಂದಿರದ ಪ್ರಧಾನ ಅರ್ಚಕ ಲಕ್ಷ್ಮಿ ನಾರಾಯಣ ಭಟ್ (62) ಜು.21ರ ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ. ಪೆರ್ವಾಜೆಯ ಅಂಗಡಿ ಭಟ್ರು ಎಂದು ಕರೆಸಿಕೊಳ್ಳುತ್ತಿದ್ದ ಅವರು ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಕಾರ್ಕಳದ ಅನೇಕ ದೇವಸ್ಥಾನಗಳಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.11:30ಕ್ಕೆ ಸ್ವಗೃಹದಲ್ಲಿ ಅವರ ಅಂತಿಮ ವಿಧಿ ವಿಧಾನ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಪೆರ್ವಾಜೆ ಶಿರ್ಡಿ ಸಾಯಿ ಬಾಬಾ ಮಂದಿರ ಪ್ರಧಾನ ಅರ್ಚಕ ಲಕ್ಷ್ಮಿ ನಾರಾಯಣ ಭಟ್ ನಿಧನ Read More »

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಅವರಿಗೆ ಕಳೆದ ಮೂರು ದಿನಗಳಿಂದ ಉಸಿರಾಟದ ಸಮಸ್ಯೆ ಉಲ್ಬಣಿಸಿತ್ತು ಜತೆಗೆ ಎದೆ ಭಾಗದಲ್ಲಿ ನೋವು ಇದ್ದಿದ್ದರಿಂದ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ಬುಧವಾರ ರಾತ್ರಿ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನ ಹೊಂದಿದರು.

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ Read More »

ಕಂದಾಯ ನಿರೀಕ್ಷಕ ಶಿವಪ್ರಸಾದ್‌ ರಾವ್ ನಿಧನ

ಕಾರ್ಕಳ : ಕಾರ್ಕಳ ಶಿವತಿಕೆರೆಯಲ್ಲಿ ಜು. 12ರಂದು ನಡೆದ ಅಪಘಾತದಲ್ಲಿ ತೀವ್ರ ಸ್ವರೂಪದಲ್ಲಿ ಗಾಯಗೊಂಡಿದ್ದ ಕಾರ್ಕಳ ತಾಲೂಕು ಹೋಬಳಿ ಕಂದಾಯ ನಿರೀಕ್ಷಕ‌ (RI) ಶಿವಪ್ರಸಾದ್‌ ರಾವ್‌ (58 ವ) ಶುಕ್ರವಾರ ನಿಧನ ಹೊಂದಿದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಇಬ್ಬರೂ ಮಕ್ಕಳು ಇಂಜಿನಿಯರ್‌ ಉದ್ಯೋಗಿಗಳಾಗಿದ್ದಾರೆ. ಮೂಲತಃ ಕಾರ್ಕಳ ನಂದಳಿಕೆಯ ಶಿವಪ್ರಸಾದ್‌ ರಾವ್ ಅವರು ಹಾಸನದಲ್ಲಿ ಬಿಇ (ಎಲೆಕ್ಟ್ರೀಕಲ್‌ ಇಂಜಿನೀಯರಿಂಗ್‌) ಪೂರೈಸಿದ್ದರು.ತಾಯಿ ಶಿಕ್ಷಕಿಯಾಗಿದ್ದು ಕರ್ತವ್ಯದ ವೇಳೆಯೇ ನಿಧನರಾದ ಹಿನ್ನೆಲೆಯಲ್ಲಿ ಶಿವಪ್ರಸಾದ್‌ ರಾವ್‌ ಅವರಿಗೆ ಅನುಕಂಪದ

ಕಂದಾಯ ನಿರೀಕ್ಷಕ ಶಿವಪ್ರಸಾದ್‌ ರಾವ್ ನಿಧನ Read More »

ಮುನಿಯಾಲಿನ ನಾಗೇಶ್ ನಾಯಕ್ ಹೃದಯಾಘಾತದಿಂದ ನಿಧನ

ಕಾರ್ಕಳ : ಮುನಿಯಾಲು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರರಾಗಿದ್ದ ನಾಗೇಶ್ ನಾಯಕ್ (65) ಅವರು ಜು.10ರಂದು ಹೃದಯಾಘಾತದಿಂದ ನಿಧನರಾದರು. ಅವರು ಧಾರ್ಮಿಕ, ಸಾಮಾಜಿಕ ಹಾಗೂ ಜನಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಸೊಸೆ, ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಮುನಿಯಾಲಿನ ನಾಗೇಶ್ ನಾಯಕ್ ಹೃದಯಾಘಾತದಿಂದ ನಿಧನ Read More »

ಉದ್ಯಮಿ ರಾಮಕೃಷ್ಣ ಶೆಟ್ಟಿ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಶ್ರದ್ಧಾಂಜಲಿ

ಕಾರ್ಕಳ: ಬೈಲೂರಿನ ಪ್ರಸಿದ್ಧ ಉದ್ಯಮಿ ಹಾಗೂ ಸಮಾಜಸೇವಕ ಲಯನ್ ರಾಮಕೃಷ್ಣ ಶೆಟ್ಟಿಯವರ ನಿಧನಕ್ಕೆ ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.​ವ್ಯವಹಾರ ಕ್ಷೇತ್ರದ ಸಾಧನೆಯೊಂದಿಗೆ ಲಯನ್ಸ್ ಸಂಸ್ಥೆಯ ಮೂಲಕ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದ ರಾಮಕೃಷ್ಣ ಶೆಟ್ಟಿಯವರ ನಿಧನವು ತೀವ್ರ ದುಃಖ ತಂದಿದೆ ಎಂದು ಮುನಿಯಾಲು ಹೇಳಿದ್ದಾರೆ. ಅವರ ಸರಳ ವ್ಯಕ್ತಿತ್ವ, ಸೇವಾ ಮನೋಭಾವ ಬೈಲೂರು ಹಾಗೂ ಕಾರ್ಕಳ ಭಾಗಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ಈ ದುಃಖ

ಉದ್ಯಮಿ ರಾಮಕೃಷ್ಣ ಶೆಟ್ಟಿ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಶ್ರದ್ಧಾಂಜಲಿ Read More »

ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ರಾಮಕೃಷ್ಣ ಶೆಟ್ಟಿ ನಿಧನ

ಕಾರ್ಕಳ : ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ನೀರೆ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ, ಉದ್ಯಮಿ ರಾಮಕೃಷ್ಣ ಶೆಟ್ಟಿ (70 ವ) ಅವರು ಜು. 9ರಂದು ಬೆಳಿಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ರಾಮಕೃಷ್ಣ ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದರು. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದ ರಾಮಕೃಷ್ಣ ಅವರು ಮೈತ್ರಿ ಸೇವಾ ಸಂಘದ ಅಧ್ಯಕ್ಷರಾಗಿ, ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ರಾಮಕೃಷ್ಣ ಶೆಟ್ಟಿ ನಿಧನ Read More »

ಕಂಬಳ ವೀಕ್ಷಕ ವಿವರಣೆಗಾರ ನಿರಂಜನ್ ರೈ ನಿಧನ

ಭೂ ನ್ಯಾಯ ಮಂಡಳಿ ಕಲಾಪದಲ್ಲಿ ಭಾಗವಹಿಸಿದ್ದಾಗ ಹೃದಯಾಘಾತ ಪುತ್ತೂರು : ಕಾಂಗ್ರೆಸ್ ಮುಖಂಡ, ಕಂಬಳ ಕ್ಷೇತ್ರದ ಸಕ್ರಿಯ ಸಂಘಟಕರಾಗಿದ್ದ ನಿರಂಜನ ರೈ (60) ಮಠಂತಬೆಟ್ಟು ಬುಧವಾರ ತಾಲೂಕು ಕಚೇರಿಯಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಹಾಯಕ ಆಯುಕ್ತರ ಕಚೇರಿಯಲ್ಲಿ ನಡೆಯುತ್ತಿದ್ದ ಭೂನ್ಯಾಯ ಮಂಡಳಿ ಕೋರ್ಟ್ ಕಲಾಪದಲ್ಲಿ ಭಾಗವಹಿಸಿದ್ದ ಅವರು ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಉಪ್ಪಿನಂಗಡಿ ಸಮೀಪದ ಮಠಂತಬೆಟ್ಟು ನಿವಾಸಿಯಾಗಿದ್ದ ನಿರಂಜನ

ಕಂಬಳ ವೀಕ್ಷಕ ವಿವರಣೆಗಾರ ನಿರಂಜನ್ ರೈ ನಿಧನ Read More »

ಹೆಬ್ರಿ ಪೊಲೀಸ್ ಠಾಣೆಯಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದ ಮಹಿಳೆ

ಚಿಕಿತ್ಸೆಗಾಗಿ ಆಸ್ಪತ್ರೆ ಸಾಗಿಸುವಾಗ ಮೃತ್ಯು ಹೆಬ್ರಿ : ಹೆಬ್ರಿ ಪೊಲೀಸ್ ಠಾಣೆಗೆ ಅರ್ಜಿ ವಿಚಾರಣೆಗಾಗಿ ಬಂದ ಮಹಿಳೆಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಜೂ. 28ರಂದು ಬೆಳಗ್ಗೆ ನಡೆದಿದೆ.ಮೃತರನ್ನು ಶಿವಪುರ ಗ್ರಾಮದ ಸುಶೀಲಾ (74) ಎಂದು ಗುರುತಿಸಲಾಗಿದೆ. ಇವರು ತನ್ನ ಇಬ್ಬರು ಮಕ್ಕಳು ಹಾಗೂ ಸೊಸೆಯೊಂದಿಗೆ ಅರ್ಜಿ ವಿಚಾರಣೆ ಸಲುವಾಗಿ ಹೆಬ್ರಿ ಪೊಲೀಸ್ ಠಾಣೆಗೆ ಬಂದಿದ್ದರು. ಈ ವೇಳೆ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಚಿಕಿತ್ಸೆಗಾಗಿ ಹೆಬ್ರಿ ಹೆಲ್ತ್‌ ಕೇರ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ

ಹೆಬ್ರಿ ಪೊಲೀಸ್ ಠಾಣೆಯಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದ ಮಹಿಳೆ Read More »

ರವಳನಾಥ ಪ್ರಭು ನಿಧನ

ಕಾರ್ಕಳ : ಎಳ್ಳುಜ್ಯೂಸ್‌ ರವಳನಾಥ ಎಂದೇ ಖ್ಯಾತರಾಗಿದ್ದ ಕಾರ್ಕಳದ ರವಳನಾಥ ಪ್ರಭು (84) ಅವರು ಜೂ. 17ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಕಾರ್ಕಳದಲ್ಲಿ ಪ್ರಥಮವಾಗಿ ಎಳ್ಳುಜ್ಯೂಸ್‌ ಪರಿಚಯಿಸಿದ ಅವರು ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದರು. ಕೊಡುಗೈ ದಾನಿಯಾಗಿದ್ದ ಇವರು ದೇವಸ್ಥಾನಗಳಿಗೆ, ಸಂಘ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಾಗಿಯೂ ಯಾವುದೇ ಪ್ರಚಾರ ಬಯಸಿದವರಲ್ಲ. ಮೃತರು ಪುತ್ರರಾದ ವಿನಾಯಕ ಪ್ರಭು, ವಿಜೇಂದ್ರ ಪ್ರಭು, ವಿದ್ಯಾನಂದ ಪ್ರಭು ಅವರನ್ನು ಅಗಲಿದ್ದಾರೆ.

ರವಳನಾಥ ಪ್ರಭು ನಿಧನ Read More »

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೂ. 16ರಂದು ನಡೆದಿದೆ. ಮುಂಡ್ಕೂರು ಗ್ರಾಮದ ರಮೇಶ್ ಸಫಲಿಗ (59) ನೇಣಿಗೆ ಶರಣಾದವರು. ಇವರು ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಬಾತ್ ರೂಮ್‌ನ ಮೇಲ್ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top