• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ನಿಧನ

ಹೆಬ್ರಿ ಪೊಲೀಸ್ ಠಾಣೆಯಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದ ಮಹಿಳೆ

ಚಿಕಿತ್ಸೆಗಾಗಿ ಆಸ್ಪತ್ರೆ ಸಾಗಿಸುವಾಗ ಮೃತ್ಯು ಹೆಬ್ರಿ : ಹೆಬ್ರಿ ಪೊಲೀಸ್ ಠಾಣೆಗೆ ಅರ್ಜಿ ವಿಚಾರಣೆಗಾಗಿ ಬಂದ ಮಹಿಳೆಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಜೂ. 28ರಂದು ಬೆಳಗ್ಗೆ ನಡೆದಿದೆ.ಮೃತರನ್ನು ಶಿವಪುರ ಗ್ರಾಮದ ಸುಶೀಲಾ (74) ಎಂದು ಗುರುತಿಸಲಾಗಿದೆ. ಇವರು ತನ್ನ ಇಬ್ಬರು ಮಕ್ಕಳು ಹಾಗೂ ಸೊಸೆಯೊಂದಿಗೆ ಅರ್ಜಿ ವಿಚಾರಣೆ ಸಲುವಾಗಿ ಹೆಬ್ರಿ ಪೊಲೀಸ್ ಠಾಣೆಗೆ ಬಂದಿದ್ದರು. ಈ ವೇಳೆ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಚಿಕಿತ್ಸೆಗಾಗಿ ಹೆಬ್ರಿ ಹೆಲ್ತ್‌ ಕೇರ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ […]

ಹೆಬ್ರಿ ಪೊಲೀಸ್ ಠಾಣೆಯಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದ ಮಹಿಳೆ Read More »

ರವಳನಾಥ ಪ್ರಭು ನಿಧನ

ಕಾರ್ಕಳ : ಎಳ್ಳುಜ್ಯೂಸ್‌ ರವಳನಾಥ ಎಂದೇ ಖ್ಯಾತರಾಗಿದ್ದ ಕಾರ್ಕಳದ ರವಳನಾಥ ಪ್ರಭು (84) ಅವರು ಜೂ. 17ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಕಾರ್ಕಳದಲ್ಲಿ ಪ್ರಥಮವಾಗಿ ಎಳ್ಳುಜ್ಯೂಸ್‌ ಪರಿಚಯಿಸಿದ ಅವರು ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದರು. ಕೊಡುಗೈ ದಾನಿಯಾಗಿದ್ದ ಇವರು ದೇವಸ್ಥಾನಗಳಿಗೆ, ಸಂಘ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಾಗಿಯೂ ಯಾವುದೇ ಪ್ರಚಾರ ಬಯಸಿದವರಲ್ಲ. ಮೃತರು ಪುತ್ರರಾದ ವಿನಾಯಕ ಪ್ರಭು, ವಿಜೇಂದ್ರ ಪ್ರಭು, ವಿದ್ಯಾನಂದ ಪ್ರಭು ಅವರನ್ನು ಅಗಲಿದ್ದಾರೆ.

ರವಳನಾಥ ಪ್ರಭು ನಿಧನ Read More »

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೂ. 16ರಂದು ನಡೆದಿದೆ. ಮುಂಡ್ಕೂರು ಗ್ರಾಮದ ರಮೇಶ್ ಸಫಲಿಗ (59) ನೇಣಿಗೆ ಶರಣಾದವರು. ಇವರು ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಬಾತ್ ರೂಮ್‌ನ ಮೇಲ್ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಕಾರ್ಕಳ : ಮರದಿಂದ ಬಿದ್ದು ಗಾಯಗೊಂಡಿದ್ದ ಕಾಂತಾವರ ಗ್ರಾಮದ ಸುನೀಲ್ ಪೂಜಾರಿ (39) ಎಂಬವರು ಅನಾರೋಗ್ಯದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ಇವರು 2025ರ ಮಾ.21ರಂದು ದೂಪದಕಟ್ಟೆ ಎಂಬಲ್ಲಿ ಕೂಲಿ ಕೆಲಸ ಮಾಡುವಾಗ ಮರದಿಂದ ಬಿದ್ದು ಗಾಯಗೊಂಡಿದ್ದರು. ನಂತರ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಎ.21ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದರು. ಕಳೆದ 10 ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾದ ಇವರು, ಜೂ.15ರಂದು ರಾತ್ರಿ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು Read More »

ಗೋಪಾಲಕೃಷ್ಣ ಪ್ರಭು ನಿಧನ‌

ಕಾರ್ಕಳ : ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಸ್ವಯಂ ಸೇವಕ, ಬಿಜೆಪಿ ಕಾರ್ಯಕರ್ತ, ಕುಕ್ಕುಂದೂರು ಜಯಂತಿನಗರ ಎರಡನೇ ವಾರ್ಡಿನ ಬೂತ್‌ ಕಾರ್ಯದರ್ಶಿ ಗೋಪಾಲಕೃಷ್ಣ ಪ್ರಭು ಅವರು ಜೂ. 15ರಂದು ರಾತ್ರಿ ಅಸೌಖ್ಯದಿಂದ ನಿಧನರಾದರು. ಶ್ರೀ ಮಂಜುನಾಥ ಪೈ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸದಸ್ಯರಾಗಿ ಹಾಗೂ ಇತರೆ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಅವರು ಬಾಲ್ಯದಿಂದಲೂ ಕಾಲಿಗೆ ಚಪ್ಪಲಿ ಧರಿಸದೇ ಸಮಾಜಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಶಾಸಕ ಸುನಿಲ್‌ ಕುಮಾರ್‌ ಸಂತಾಪನಿಸ್ವಾರ್ಥ ಸೇವೆ, ಸರಳ ವ್ಯಕ್ತಿತ್ವ ಮತ್ತು ಭಾರತೀಯ ಜನತಾ ಪಾರ್ಟಿ

ಗೋಪಾಲಕೃಷ್ಣ ಪ್ರಭು ನಿಧನ‌ Read More »

ತೆಂಗಿನಕಾಯಿ ಬಿದ್ದು ಕಂಕುಳಿನಲ್ಲಿದ್ದ ಮಗು ಸಾವು

ಉಡುಪಿ : ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ ಸಮೀಪ ಹೆರಂಜೆಯಲ್ಲಿ ಸಂಭವಿಸಿದೆ. ಹೆರಂಜೆಯ ಪ್ರಶಾಂತ್ ಪೂಜಾರಿ ಹಾಗೂ ಸುಚಿತ್ರ ಪೂಜಾರಿ ದಂಪತಿಯ ಪುತ್ರ ದಕ್ಷ್ ಪೂಜಾರಿ (1.5) ಮೃತ ಮಗು. ಮಾಹಿತಿಗಳ ಪ್ರಕಾರ ಮಂಗಳವಾರ ಬೆಳಿಗ್ಗೆ ಸುಮಾರು 8.15 ಗಂಟೆಯ ವೇಳೆ ಈ ದುರ್ಘಟನೆ ಸಂಭವಿಸಿದೆ. 6 ವರ್ಷದ ಮಗಳು ದಿಯಾಳನ್ನು ಶಾಲಾ ಬಸ್ಸಿಗೆ ಕಳುಹಿಸಲು ಸುಚಿತ್ರ ಪೂಜಾರಿ ಅವರು ಮಗ ದಕ್ಷ್‌ನನ್ನು

ತೆಂಗಿನಕಾಯಿ ಬಿದ್ದು ಕಂಕುಳಿನಲ್ಲಿದ್ದ ಮಗು ಸಾವು Read More »

ಕುಸಿದು ಬಿದ್ದು ವ್ಯಕ್ತಿ ಸಾವು

ಹೆಬ್ರಿ : ವ್ಯಕ್ತಿಯೋರ್ವರು ಕುಸಿದು ಬಿದ್ದು ಸಾವನಪ್ಪಿದ ಘಟನೆ ಜೂ. 7ರಂದು ಹೆಬ್ರಿ ಶಿವಪುರದಲ್ಲಿ ನಡೆದಿದೆ. ವಿಜಯ ಶೆಟ್ಟಿ (52) ಮೃತ ವ್ಯಕ್ತಿ. ಇವರು 2 ವರ್ಷಗಳಿದ ಬಿಪಿ ಖಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆಯಲ್ಲಿದ್ದರು. ಆದಿತ್ಯವಾರ ರಾತ್ರಿ 7:30ಕ್ಕೆ ಮನೆಯಲ್ಲಿ ಹಠಾತ್ತಾಗಿ ಕುಸಿದು ಬಿದ್ದಿದ್ದು ಅವರನ್ನು ಚಿಕಿತ್ಸೆಗಾಗಿ ಹೆಬ್ರಿಯ ರಾಘವೇಂದ್ರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹೆಬ್ರಿಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿಯ ವೈದ್ಯರು ಪರೀಕ್ಷಿಸಿ ಈಗಾಗಲೇ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ. ಮೃತರು ಹೃದಯಾಘಾತದಿಂದ

ಕುಸಿದು ಬಿದ್ದು ವ್ಯಕ್ತಿ ಸಾವು Read More »

ಶಾಂಭವಿ ನದಿಗೆ ಬಿದ್ದು ವ್ಯಕ್ತಿ ಸಾವು

ಕಾರ್ಕಳ : ಶಾಂಭವಿ ನದಿಗೆ ಬಿದ್ದು ವ್ಯಕ್ತಿಯೋರ್ವರು ಸಾವನಪ್ಪಿದ ದುರ್ಘಟನೆ ಮೇ 25ರಂದು ನಡೆದಿದೆ. ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಇಷಾನ್ ಪಾಶಾ (40) ಮೃತಪಟ್ಟವರು. ಮೂಲತ: ಮೈಸೂರು ಜಿಲ್ಲೆ ಪಿರಿಯಾಪಟ್ಟಣದವರಾದ ಇಷಾನ್ ಪಾಶಾ ತನ್ನ ಮೊದಲನೇ ಪತ್ನಿ ಮೃತಪಟ್ಟ ನಂತರ ಏಳು ತಿಂಗಳ ಹಿಂದೆ ಶಮೀನ್ ಎಂಬವರನ್ನು ಮದುವೆಯಾಗಿ ಜಾರಿಗೆಕಟ್ಟೆಯಲ್ಲಿ ವಾಸವಾಗಿದ್ದು, ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದರು. ಇವರು ಮದ್ಯಪಾನದ ಚಟ ಹೊಂದಿದ್ದು, ಹೆಂಡತಿಯೊಂದಿಗೆ ಆಗಾಗ ಜಗಳವಾಡುತ್ತಿದ್ದರು. ಮೇ 25ರಂದು ಮಂಗಳೂರಿನ ಜೋಕಟ್ಟೆಯ

ಶಾಂಭವಿ ನದಿಗೆ ಬಿದ್ದು ವ್ಯಕ್ತಿ ಸಾವು Read More »

ಕಣಜಾರು ಮೂಡುಬೆಟ್ಟು ವಿಠಲ ಶೆಟ್ಟಿ ನಿಧನ

ಕಾರ್ಕಳ : ಕಣಜಾರು ಮೂಡುಬೆಟ್ಟು ವಿಠಲ ಶೆಟ್ಟಿ (81) ಅವರು ಮೇ 26ರ ರಾತ್ರಿ ನಿಧನ ಹೊಂದಿದರು. ನೀರೆ ಬೈಲೂರು ವ್ಯವಸಾಯ ಸಹಕಾರಿ ಸಂಘದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿರುವ ಇವರು ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಮಧ್ಯಾಹ್ನ 2 ಗಂಟೆಗೆ ಸ್ವಗೃಹದಲ್ಲಿ ನಡೆಯಲಿದೆ.

ಕಣಜಾರು ಮೂಡುಬೆಟ್ಟು ವಿಠಲ ಶೆಟ್ಟಿ ನಿಧನ Read More »

ವಿನೋದಾ ಎಸ್. ಶೆಟ್ಟಿ ನಿಧನ

ಕಾರ್ಕಳ : ಡಾ. ದಿ. ಸುನೇತ್ರ ಶೆಟ್ಟಿ ಅವರ ಪತ್ನಿ ವಿನೋದಾ ಎಸ್. ಶೆಟ್ಟಿ (81) ಮೇ 25ರ ರಾತ್ರಿ ಸ್ವಗೃಹ ತೆಳ್ಳಾರು ರಸ್ತೆ ಮನೆಯಲ್ಲಿ ನಿಧನ ಹೊಂದಿದರು. ಮೃತರು ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಬಡವರ ಬಂಧು ಕಾರ್ಯಕ್ರಮದ ಮೂಲಕ ಅನೇಕ ಬಡ ಹೆಣ್ಣು ಮಕ್ಕಳ ಮದುವೆಗೆ ಸಹಕಾರ ನೀಡಿರುತ್ತಾರೆ. ಮೃತರ ಅಂತ್ಯ ಸಂಸ್ಕಾರ ಮಧ್ಯಾಹ್ನ 12 ಗಂಟೆಗೆ ಕೌಡೂರು ವಿಠಲ ಸದನದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವಿನೋದಾ ಎಸ್. ಶೆಟ್ಟಿ ನಿಧನ Read More »

error: Content is protected !!
Scroll to Top