• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ನಿಧನ

ನಿವೃತ್ತ ಶಿಕ್ಷಕ ಕೃಷ್ಣ ಶೆಟ್ಟಿ ಚಿಕ್ಕಾಡಿ ನಿಧನ

ಕಾರ್ಕಳ : ನಿವೃತ್ತ ಶಿಕ್ಷಕ ಅಂಡಾರು ಚಿಕ್ಕಾಡಿ ಕೃಷ್ಣ ಶೆಟ್ಟಿ (74) ಅವರು ಡಿ. 25ರಂದು ನಿಧನ ಹೊಂದಿದರು. ಮೂಲತ: ಶಿರ್ಲಾಲು ಗ್ರಾಮದವರಾದ ಇವರು 32 ವರ್ಷಗಳ ಕಾಲ ಅಧ್ಯಾಪಕರಾಗಿ ಹಾಗೂ ಮುಖ್ಯೋಪಾಧ್ಯಾಯರಾಗಿ ಕಾರ್ಯ ನಿರ್ವಹಿಸಿದ್ದರು. ಧಾರ್ಮಿಕವಾಗಿ ಮತ್ತು ಸಾಮಾಜಿಕವಾಗಿ ವಿವಿಧ ಸಂಘ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ನಿವೃತ್ತ ಶಿಕ್ಷಕ ಕೃಷ್ಣ ಶೆಟ್ಟಿ ಚಿಕ್ಕಾಡಿ ನಿಧನ Read More »

ಕೆಸರುಗದ್ದೆಗೆ ಬಿದ್ದು ವ್ಯಕ್ತಿ ಉಸಿರುಗಟ್ಟಿ ಸಾವು

ಕಾರ್ಕಳ : ಕೆಸರುಗದ್ದೆಗೆ ಬಿದ್ದ ವ್ಯಕ್ತಿ ಉಸಿರುಗಟ್ಟಿ ಸಾವನಪ್ಪಿದ ಘಟನೆ ಡಿ.13ರಂದು ನಡೆದಿದೆ. ಹಿರ್ಗಾನ ಗ್ರಾಮದ ದಯಾನಂದ ಮೂಲ್ಯ (52) ಮೃತ ವ್ಯಕ್ತಿ. ಇವರು ತಮ್ಮ ಮನೆಯ ಹತ್ತಿರದಲ್ಲೇ ಸಣ್ಣ ಕ್ಯಾಂಟೀನ್‌ ಅನ್ನು ಇಟ್ಟುಕೊಂಡು ಜೀವನ ನಡೆಸುತ್ತಿದ್ದು, ಕಳೆದ 25 ವರ್ಷಗಳಿಂದ ಮದ್ಯ ಸೇವಿಸುವ ಚಟ ಹೊಂದಿದ್ದರು. ಡಿ. 13ರಂದು ಕ್ಯಾಂಟೀನ್‌ನಿಂದ ಕೆಲಸ ಮುಗಿಸಿ ಮದ್ಯಪಾನ ಮಾಡಿಕೊಂಡು ಮನೆಗೆ ಹೋಗುವಾಗ ದಾರಿಯ ಬಳಿ ಇರುವ ಕೆಸರುಗದ್ದೆಯಲ್ಲಿ ಬಿದ್ದು ಉಸಿರುಗಟ್ಟಿ ಮೃತಪಟ್ಟಿರುತ್ತಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌

ಕೆಸರುಗದ್ದೆಗೆ ಬಿದ್ದು ವ್ಯಕ್ತಿ ಉಸಿರುಗಟ್ಟಿ ಸಾವು Read More »

ಕೇಂದ್ರದ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ವಿಧಿವಶ

ಮುಂಬಯಿ : ಕೇಂದ್ರದ ಮಾಜಿ ಗೃಹ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ (90) ಅವರು ಶುಕ್ರವಾರ ಬೆಳಿಗ್ಗೆ ಮಹಾರಾಷ್ಟ್ರದ ಲಾತೂರ್‌ನಲ್ಲಿ ನಿಧನರಾದರು. ವಯೋಸಹಜ ಕಾಯಿಲೆಗಳಿಂದ ಉಂಟಾದ ದೀರ್ಘಕಾಲದ ಅನಾರೋಗ್ಯದಿಂದಾಗಿ, ಪಾಟೀಲ್ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಶಿವರಾಜ್ ಪಾಟೀಲ್ ಅವರು 1980, 1984, 1989, 1991, 1996, 1998 ಮತ್ತು 1999 ರಲ್ಲಿ ಗೆಲುವು ಸಾಧಿಸಿದ್ದರು. ನಂತರ 2004 ರಲ್ಲಿ ಬಿಜೆಪಿಯ ರೂಪತೈ ​​ಪಾಟೀಲ್ ನೀಲಂಗೇಕರ್ ವಿರುದ್ಧ ಸೋತರು. 1972 ಮತ್ತು 1978 ರಲ್ಲಿ

ಕೇಂದ್ರದ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ವಿಧಿವಶ Read More »

ಕಾರು ಡಿಕ್ಕಿ – ಪಾದಚಾರಿ ಸಾವು

ಕಾರ್ಕಳ : ಕಾರು ಡಿಕ್ಕಿಯಾಗಿ ಪಾದಚಾರಿ ಸಾವನಪ್ಪಿದ ದುರ್ಘಟನೆ ಡಿ. 10ರಂದು ಕುಕ್ಕುಂದೂರಿನಲ್ಲಿ ಸಂಭವಿಸಿದೆ. ದಿನಕರ ಪೂಜಾರಿ (50) ಮೃತ ದುರ್ದೈವಿ. ಅವರು ಅಯ್ಯಪ್ಪನಗರ ಕಡೆಯಿಂದ ಜಾರ್ಕಳ ಕಡೆಗೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಗ್ರೀನ್‌ಲ್ಯಾಂಡ್‌ ಫ್ಯಾಕ್ಟರಿ ಬಳಿ ಕಾರ್ಕಳ ಕಡೆಯಿಂದ ಉಡುಪಿ ಕಡೆಗೆ ನಾಗೇಶ್‌ ಪೈ ಅವರು ಚಲಾಯಿಸಿಕೊಂಡು ಬರುತ್ತಿದ್ದ ಇನ್ನೋವಾ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ದಿನಕರ ಪೂಜಾರಿಯವರು ಡಾಮಾರು ರಸ್ತೆಗೆ ಬಿದ್ದು ಗಾಯಗೊಂಡಿರುತ್ತಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಕಾರು ಡಿಕ್ಕಿ – ಪಾದಚಾರಿ ಸಾವು Read More »

ಮಮತಾ ನಾಯಕ್‌ ನಿಧನ

ಕಾರ್ಕಳ : ಗೌತಮ್‌ ಐಸ್‌ಕ್ರೀಮ್‌ ಮಾಲಕ ಗಣೇಶ್‌ ನಾಯಕ್‌ ಅವರ ಪತ್ನಿ ಮಮತಾ ನಾಯಕ್‌ (59) ಅವರು ಡಿ. 9ರಂದು ನಿಧನ ಹೊಂದಿದರು. ಸೋಮವಾರ ರಾತ್ರಿ ಹಠಾತ್‌ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದ ಮಮತಾ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯವಾಗ ಹೃದಯ ವೈಫಲ್ಯದಿಂದ ಕೊನೆಯುಸಿರೆಳೆದಿದ್ದಾರೆ. ಮೃತರು ಪತಿ ಗಣೇಶ್‌ ನಾಯಕ್‌, ಪುತ್ರ ಗೌತಮ್‌ ನಾಯಕ್‌ ಹಾಗೂ ಪುತ್ರಿ ನಿಖಿತಾರನ್ನು ಅಗಲಿದ್ದಾರೆ.

ಮಮತಾ ನಾಯಕ್‌ ನಿಧನ Read More »

ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು

ಕಾರ್ಕಳ : ಅಡಿಕೆ ಮರದಿಂದ ಬಿದ್ದು ವ್ಯಕ್ತಿಯೋರ್ವರು ಸಾವನಪ್ಪಿದ ದುರ್ಘಟನೆ ಡಿ. 9ರಂದು ಶಿರ್ಲಾಲಿನಲ್ಲಿ ಸಂಭವಿಸಿದೆ. ಕೆರ್ವಾಶೆಯ ನಾರಾಯಣ ಆರ್. ಮೃತ ದುರ್ದೈವಿ. ನಾರಾಯಣ ಆರ್. ತೆಂಗಿನಕಾಯಿ ಮತ್ತು ಅಡಿಕೆ ಕೊಯ್ಯುವ ಕೆಲಸ ಮಾಡಿಕೊಂಡಿದ್ದು, ಮಂಗಳವಾರದಂದು ಶಿರ್ಲಾಲು ಗ್ರಾಮದ ಜಯಪ್ರಕಾಶ್ ಅರಿಗ ಎಂಬವರ ತೋಟದಲ್ಲಿ ಅಡಿಕೆ ಕೀಳುತ್ತಿದ್ದಾಗ ಆಕಸ್ಮಿಕವಾಗಿ ಮರದಿಂದ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಚಿಕೆತ್ಸೆಗಾಗಿ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ನಾರಾಯಣ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತರು ಹೆಂಡತಿ ಮತ್ತು

ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು Read More »

ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಸಜೀವ ದಹನ

ಧಾರವಾಡ : ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಕಳೆದ ರಾತ್ರಿ ಮುರ್ಗೋಡಿನಲ್ಲಿರುವ ತಮ್ಮ ನಿವಾಸಕ್ಕೆ ಹಿಂತಿರುಗುತ್ತಿದ್ದಾಗ ಅಣ್ಣಿಗೇರಿ ಬಳಿ ತಮ್ಮ ಕಾರಿನಲ್ಲಿ ಸಜೀವ ದಹನಗೊಂಡು ಮೃತಪಟ್ಟ ಘಟನೆ ನಡೆದಿದೆ. ಹಾವೇರಿಯಲ್ಲಿ ಕೆಲಸ ಮಾಡುತ್ತಿದ್ದ ಪಂಚಾಕ್ಷರಿ ಮನೆಗೆ ತಮ್ಮದೇ ಕಾರಿನಲ್ಲಿ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ವೇಳೆ ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದು, ಇಂಧನ ಟ್ಯಾಂಕ್‌ಗೆ ಹಾನಿಯಾಗಿ ಕಿಡಿ ಬೆಂಕಿ ಹೊತ್ತಿಕೊಂಡು ಉರಿಯಿತು. ಪೊಲೀಸ್ ಇನ್ಸ್‌ಪೆಕ್ಟರ್ ಕಾರಿನಿಂದ ಜಿಗಿದು ಬಚಾವಾಗಲು ಸಾಧ್ಯವಾಗಲಿಲ್ಲ. ಅಧಿಕಾರಿಯನ್ನು ಉಳಿಸಲು ದಾರಿಹೋಕರು ತಮ್ಮ

ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಸಜೀವ ದಹನ Read More »

ಮದ್ಯವೆಂದು ವಿಷ ಪದಾರ್ಥ ಸೇವನೆ – ವ್ಯಕ್ತಿ ಸಾವು

ಕಾರ್ಕಳ : ಮದ್ಯವೆಂದು ವಿಷ ಪದಾರ್ಥ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನಪ್ಪಿದ ಘಟನೆ ಡಿ. 2ರಂದು ಮುದ್ರಾಡಿಯ ಬಲ್ಲಾಡಿಯಲ್ಲಿ ಸಂಭವಿಸಿದೆ. ಹೆಬ್ರಿ ಗ್ರಾಮದ ತಮ್ಮು ಪೂಜಾರಿ (78) ಮೃತ ದುರ್ದೈವಿ. ಇವರಿಗೆ ಮದ್ಯಪಾನದ ಅಭ್ಯಾಸವಿದ್ದು, ನ.20ರಂದು ಮಧ್ಯಾಹ್ನ ಮನೆಯಲ್ಲಿದ್ದ ವಾಹನದ ಬ್ರೇಕ್‌ ಪ್ಯೂಡ್‌ ಆಯಿಲ್‌ (ವಿಷ ಪದಾರ್ಥ)ನ್ನು ಮದ್ಯಪಾನವೆಂದು ಬಾವಿಸಿ ಸೇವಿಸಿದ್ದರು. ಅಸ್ವಸ್ಥಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್‌ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಡಿ. 2ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಹೆಬ್ರಿ

ಮದ್ಯವೆಂದು ವಿಷ ಪದಾರ್ಥ ಸೇವನೆ – ವ್ಯಕ್ತಿ ಸಾವು Read More »

ಕ್ರೈಸ್ಟ್‌ಕಿಂಗ್‌ ವಿದ್ಯಾರ್ಥಿನಿ ಏಂಜೆಲ್‌ ನಿಧನ

ಕಾರ್ಕಳ : ಕ್ರೈಸ್ಟ್‌ಕಿಂಗ್‌ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ, ಹೆಬ್ರಿ ತಾಲೂಕು ಮುದ್ರಾಡಿಯ ಏಂಜೆಲ್‌ ಆಲ್ಫನ್ಸಾ ಜೇಮ್ಸ್‌ (17) ನ. 27ರಂದು ಮೃತಪಟ್ಟಿದ್ದಾಳೆ. ನ. 26ರಂದು ಸ್ಥಳೀಯ ಕ್ರೈಸ್ಟ್‌ಕಿಂಗ್‌ ಚರ್ಚ್‌ನ ವಾರ್ಷಿಕ ಹಬ್ಬವಿದ್ದ ಕಾರಣ ಕ್ರೈಸ್ಟ್‌ಕಿಂಗ್‌ ವಿದ್ಯಾಸಂಸ್ಥೆಗೆ ರಜೆ ಸಾರಲಾಗಿತ್ತು. ಹೀಗಾಗಿ ಏಂಜೆಲ್‌ ಮನೆಯಲ್ಲೇ ಇದ್ದು, ಆಕೆಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದ ಕಾರಣ ಹೆತ್ತವರು ಹೆಬ್ರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿರದ್ದು, ಅಲ್ಲಿ ವೈದ್ಯರು ಇಂಜೆಕ್ಷನ್ ನೀಡಿರುತ್ತಾರೆ. ಮನೆಗೆ ಬಂದ ಬಳಿಕ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಮತ್ತೆ

ಕ್ರೈಸ್ಟ್‌ಕಿಂಗ್‌ ವಿದ್ಯಾರ್ಥಿನಿ ಏಂಜೆಲ್‌ ನಿಧನ Read More »

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ

ಬೆಂಗಳೂರು : ಕಲಬುರಗಿಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ. ಮಹಾಂತೇಶ್ ಬೀಳಗಿ ನಿನ್ನೆ ಕುಟುಂಬಸ್ಥರ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಕಲಬರುಗಿಯ ಜೇವರ್ಗಿ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇದೀಗ ಅವರ ಮೃತದೇಹವನ್ನು ಕಲಬುರಗಿಯಿಂದ ಬೆಳಗಾವಿಯ ರಾಮದುರ್ಗಕ್ಕೆ ತಲುಪಿಸಲಾಗಿದ್ದು, ಕುಟುಂಬಸ್ಥರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಪಾರ್ಥೀವ

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ Read More »

error: Content is protected !!
Scroll to Top