ಜಿಲ್ಲಾ

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ : ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ : ಮೀನುಗಾರರಿಗೆ ಮುನ್ನೆಚ್ಚರಿಕೆ

ಮಂಗಳೂರು : ಹವಾಮಾನ ಮುನ್ಸೂಚನೆಯಂತೆ ಜೂ. 6ರಿಂದ 11ರವರೆಗೆ ಬಿಪೊರ್ ಜಾಯ್ ಚಂಡಮಾರುತದಿಂದಾಗಿ ಅರಬ್ಬಿ ಸಮುದ್ರವು ಪ್ರಕ್ಷುಬ್ಧಗೊಂಡಿದ್ದು, ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಸೂಚಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ …

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ : ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ : ಮೀನುಗಾರರಿಗೆ ಮುನ್ನೆಚ್ಚರಿಕೆ Read More »

ಉಡುಪಿ ಜಿಲ್ಲೆಯಲ್ಲಿ ಹೆಚ್ಚಿದ ಸೈಬರ್ ಕ್ರೈಂ : ವರ್ಷದಲ್ಲಿ 60ಕ್ಕೂ ಅಧಿಕ ಜನರ ಅಕೌಂಟಿನಿಂದ ಹಣ ಕಣ್ಮರೆ

ಉಡುಪಿ : ಜಿಲ್ಲೆಯಲ್ಲಿ ಸುಮಾರು 60ಕ್ಕೂ ಅಧಿಕ ಜನರ ಅಕೌಂಟಿನಿಂದ ಹಣ ಕಣ್ಮರೆಯಾಗಿದ್ದು. ರಾಜ್ಯದಲ್ಲಿಯೇ ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಳ್ಳುವ ಉಡುಪಿ ಜಿಲ್ಲೆಯಲ್ಲಿ ಇಂದಿಗೂ ಕೂಡ ಇಂತಹ ಸೈಬರ್ ಕ್ರೈಂಗಳು ದಿನ ನಿತ್ಯವೂ ನಡೆಯುತ್ತಿದೆ. ಹಾಗಂತ ಅವಿದ್ಯಾವಂತರು ಈ ಪ್ರಕರಣದ ವ್ಯಕ್ತಿಗಳಲ್ಲ, ಬಹುತೇಕ ವಿದ್ಯಾವಂತರೆ ಇಂತಹ ಪ್ರಕರಣಗಲ್ಲಿ ಬಲಿಯಾಗುತ್ತಿರುವುದು ಶೋಚನೀಯ. ಉಡುಪಿ ಪೊಲೀಸ್ ಇಲಾಖೆ ನಿರಂತರವಾಗಿ ಸೈಬರ್ ಕ್ರೈಂ ವಿಚಾರದಲ್ಲಿ ಅಗತ್ಯ ಕ್ರಮಗಳ ಜೊತೆಗೆ ಮುನ್ನೆಚ್ಚರಿಕೆ ಮೂಡಿಸುವಂತಹ ಕಾರ್ಯಕ್ರಮಗಳನ್ನು ರೂಪಿಸುತ್ತಾ ಬಂದಿದೆ. ಆದರೂ ಕಳೆದ ಒಂದು ವರ್ಷದಲ್ಲಿ …

ಉಡುಪಿ ಜಿಲ್ಲೆಯಲ್ಲಿ ಹೆಚ್ಚಿದ ಸೈಬರ್ ಕ್ರೈಂ : ವರ್ಷದಲ್ಲಿ 60ಕ್ಕೂ ಅಧಿಕ ಜನರ ಅಕೌಂಟಿನಿಂದ ಹಣ ಕಣ್ಮರೆ Read More »

ಪ್ರಧಾನಿ ಮೋದಿ ಭೇಟಿಯಾದ ಕಾರ್ಕಳದ ಬೀದಿ ವ್ಯಾಪಾರಿ

ಕಾರ್ಕಳ : ಪಿಎಂ – ಸ್ವನಿಧಿ ಫಲಾನುಭವಿ ಕಾರ್ಕಳದ ಬೀದಿಬದಿ ವ್ಯಾಪಾರಿ ಪ್ರಸಾದ್‌ ಬಿ.ಹೆಚ್.‌ ಅವರು ದೆಹಲಿಯಲ್ಲಿ ಜೂ. 1ರಂದು ನಡೆದ ಪಿಎಂ – ಸ್ವನಿಧಿ ವಾರ್ಷಿಕ ಮಹೋತ್ಸವದಲ್ಲಿ ಭಾಗವಹಿಸಲು ಅವಕಾಶ ಪಡೆದು ಪ್ರಧಾನಿ ಮೋದಿ ಅವರನ್ನು ಭೇಟಿಯಾದರು. ಬೀದಿ ಬದಿ ವ್ಯಾಪಾರಕ್ಕಾಗಿ ಮೊದಲ ಬಾರಿಗೆ ಪಿಎಂ ಸ್ವನಿಧಿ ಯೋಜನೆಯಡಿ ರಾಷ್ಟ್ರೀಕೃತ ಬ್ಯಾಂಕ್‌ನಿಂದ 10 ಸಾವಿರ ರೂ. ಸಾಲ ಪಡೆದ ಪ್ರಸಾದ್‌ ಅದನ್ನು ಅವಧಿಗೆ ಸರಿಯಾಗಿ ಅಂದರೆ 6 ತಿಂಗಳಲ್ಲಿ ಮರುಪಾವತಿ ಮಾಡಿದ್ದರು. ಬಳಿಕ ಯೋಜನೆಯಂತೆ 20 …

ಪ್ರಧಾನಿ ಮೋದಿ ಭೇಟಿಯಾದ ಕಾರ್ಕಳದ ಬೀದಿ ವ್ಯಾಪಾರಿ Read More »

ಯುವಕರಿಂದ ಅಸಭ್ಯ ವರ್ತನೆ : ನ್ಯಾಯಕ್ಕಾಗಿ ಮಗುವಿನೊಂದಿಗೆ ಅರ್ಧರಾತ್ರಿವರೆಗೂ ಠಾಣೆಯಲ್ಲಿ ಕುಳಿತ ಮಹಿಳೆ!

ಚಿಕ್ಕಮಗಳೂರು : ನ್ಯಾಯಕ್ಕಾಗಿ ಮಹಿಳೆಯೊಬ್ಬರು 4 ವರ್ಷದ ಮಗುವಿನೊಂದಿಗೆ ಅರ್ಧರಾತ್ರಿಯವರೆಗೂ ಪೊಲೀಸ್ ಠಾಣೆಯಲ್ಲಿ ಕುಳಿತ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ನಡೆದಿದೆ. ಪಕ್ಕದ ಮನೆಯ ಯುವಕರು ತನ್ನೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದು, ಗಂಡನಿಗೆ ಜೀವ ಬೆದರಿಕೆ ಹಾಕಿದ್ದಾರೆಂದು 2 ದಿನಗಳ ಹಿಂದೆ ಮಹಿಳೆ ಕುದುರೆಮುಖ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಯುವಕರ ದುರ್ವತನೆ ಕುರಿತ ವಿಡಿಯೋವನ್ನು ನೀಡಿದರೂ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಠಾಣೆಗೆ ತೆರಳಿ 4 ವರ್ಷದ ಮಗುವಿನೊಂದಿಗೆ ಅರ್ಧರಾತ್ರಿವರಗೂ ಠಾಣೆಯಲ್ಲಿ ಕುಳಿತಿದ್ದಾರೆ. ಎಫ್ಐಆರ್ ದಾಖಲಾಗದ ಹೊರತು …

ಯುವಕರಿಂದ ಅಸಭ್ಯ ವರ್ತನೆ : ನ್ಯಾಯಕ್ಕಾಗಿ ಮಗುವಿನೊಂದಿಗೆ ಅರ್ಧರಾತ್ರಿವರೆಗೂ ಠಾಣೆಯಲ್ಲಿ ಕುಳಿತ ಮಹಿಳೆ! Read More »

ಅಥ್ಲೆಟಿಕ್ಸ್, ವಾಲಿಬಾಲ್, ವೇಟ್‍ಲಿಫ್ಟಿಂಗ್, ಮಲ್ಲಕಂಬದಲ್ಲಿ ಹಲವು ಪದಕ

ಖೇಲೋ ಇಂಡಿಯಾ ಆಳ್ವಾಸ್‍ಗೆ ಪದಕಗಳ ಸರಮಾಲೆ ಮೂಡುಬಿದಿರೆ : ಲಕ್ನೋದಲ್ಲಿ ನಡೆಯುತ್ತಿರುವ 3ನೇ ಖೇಲೋ ಇಂಡಿಯಾ ಯುನಿರ್ವಸಿಟಿ ಗೇಮ್ಸ್-2023ರ ಅಥ್ಲೆಟಿಕ್ಸ್, ವಾಲಿಬಾಲ್, ವೇಟ್‍ಲಿಫ್ಟಿಂಗ್ ಹಾಗೂ ಮಲ್ಲಕಂಬದಲ್ಲಿ ಮಂಗಳೂರು ವಿಶ್ವವಿದ್ಯಾಲಯವು ಅತ್ಯುತ್ತಮ ಸಾಧನೆ ಮಾಡಿದ್ದು, ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ 60 ಕ್ರೀಡಾಪಟುಗಳ ಪೈಕಿ 49 ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ಜೂ.1ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪೈಕಿ ಅಥ್ಲೆಟಿಕ್ಸ್ ಮಹಿಳಾ ವಿಭಾಗದಲ್ಲಿ ವಿಶ್ವವಿದ್ಯಾಲಯವು ಸತತ …

ಅಥ್ಲೆಟಿಕ್ಸ್, ವಾಲಿಬಾಲ್, ವೇಟ್‍ಲಿಫ್ಟಿಂಗ್, ಮಲ್ಲಕಂಬದಲ್ಲಿ ಹಲವು ಪದಕ Read More »

ರಾಚನಬೆಟ್ಟು ಶ್ರೀ ಜಟ್ಟಿಗೇಶ್ವರ ಭಜನಾ ಮಂಡಳಿ – ಎಸ್ಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಉಡುಪಿ : ಜನ್ನಾಡಿ ರಾಚನಬೆಟ್ಟು ಶ್ರೀ ಜಟ್ಟಿಗೇಶ್ವರ ಭಜನಾ ಮಂಡಳಿ ವತಿಯಿಂದ ತಂಡದಲ್ಲಿರುವ ಎಸ್ಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಮೇ 29 ರಂದು ಜರುಗಿತು. 2022-2023 ಶೈಕ್ಷಣಿಕ ಸಾಲಿನಲ್ಲಿ ಶೇ.85 ಅಂಕ ಪಡೆದಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ ಕಟ್ಟೆಯ ವಿದ್ಯಾರ್ಥಿಗಳಾದ ತೃಪ್ತಿ ಕೆ.ಬಿ., ಸೌಮ್ಯ, ನಿಶಾ, ಶ್ರಾವ್ಯ, ಸುದರ್ಶನ್, ವಿನಯ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ತಾಲೂಕು ಭಜನಾ ಒಕ್ಕೂಟದ ಗೌರವಾಧ್ಯಕ್ಷ ಜೈಕರ್ ಪೂಜಾರಿ ಗುಲ್ವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ …

ರಾಚನಬೆಟ್ಟು ಶ್ರೀ ಜಟ್ಟಿಗೇಶ್ವರ ಭಜನಾ ಮಂಡಳಿ – ಎಸ್ಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ Read More »

ಸಿಆರ್‌ಝಡ್‌ ಮರಳುಗಾರಿಕೆ ಅ.15ರವರೆಗೆ ನಿಷೇಧ

ಮಂಗಳೂರು : ಸಿಆರ್‌ಝಡ್‌ ಪ್ರದೇಶದಲ್ಲಿ ಮರಳುಗಾರಿಕೆ ಮಳೆಗಾಲ ಆರಂಭವಾಗುವ ಎರಡು ತಿಂಗಳ ಮೊದಲೇ ಪೂರ್ಣಗೊಂಡಿದೆ. ಚುನಾವಣೆ ಕಾರಣದಿಂದಾಗಿ ಮತ್ತೆ ಪರಿಸರ ಇಲಾಖೆಯ ಕ್ಲಿಯರೆನ್ಸ್‌ ಪಡೆಯುವ ಪ್ರಕ್ರಿಯೆಗಳು ತಡವಾಗಿರುವ ಕಾರಣ ಈ ಬಾರಿ ಸಿಆರ್‌ಝಡ್‌ ಮರಳುಗಾರಿಕೆ ಇನ್ನೇನಿದ್ದರೂ ಮಳೆಗಾಲದ ಬಳಿಕವೇ ನಡೆಯಬೇಕಷ್ಟೆ. ಪರವಾನಿಗೆಯ ಅವಧಿ ಪೂರ್ಣ ಗೊಂಡ ಹಿನ್ನೆಲೆಯಲ್ಲಿ ಮಾ. 4ಕ್ಕೇ ಸಿಆರ್‌ಝಡ್‌ ವ್ಯಾಪ್ತಿಯ ಮರಳು ದಿಣ್ಣೆಗಳಲ್ಲಿ ಮರಳುಗಾರಿಕೆ ನಿಂತಿದೆ. ಆ ಬಳಿಕ ಇಸಿ ಮತ್ತೆ ಪಡೆಯುವುದಕ್ಕೆ ಬೇಕಾದ ಬೆಥಮೆಟ್ರಿ ಸರ್ವೇ ಪೂರ್ಣಗೊಂಡಿದೆ. ಆದರೆ ವರದಿ ಬರಲು ಬಾಕಿ …

ಸಿಆರ್‌ಝಡ್‌ ಮರಳುಗಾರಿಕೆ ಅ.15ರವರೆಗೆ ನಿಷೇಧ Read More »

ಜ್ಞಾನಸುಧಾದಲ್ಲಿ ನೀಟ್ ಲಾಂಗ್‌ಟರ್ಮ್ ನೋಂದಣಿ ಆರಂಭ – ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ

ಕಾರ್ಕಳ : ಕಾರ್ಕಳ ಹಾಗೂ ಉಡುಪಿಯಲ್ಲಿ ಕಾರ್ಯಾಚರಿಸುತ್ತಿರುವ ಜ್ಞಾನಸುಧಾ ವಿದ್ಯಾಸಂಸ್ಥೆಯು ನೀಟ್ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗಾಗಿ ಮಣಿಪಾಲದಲ್ಲಿ ಪರಿಣಿತ ಉಪನ್ಯಾಸಕರಿಂದ ತರಬೇತಿ ನೀಡಲಿದೆ. ಕಳೆದ ಎರಡು ವರ್ಷಗಳಲ್ಲಿ ಉತ್ತಮ ಫಲಿತಾಂಶದೊಂದಿಗೆ 186 ವಿದ್ಯಾರ್ಥಿಗಳು ನೀಟ್ ಪರೀಕ್ಷೆಯ ಮೂಲಕ ಎಂಬಿಬಿಎಸ್‌ಗೆ ಪ್ರವೇಶ ಪಡೆದಿರುವುದು ಗಮನಾರ್ಹವಾಗಿದೆ. ಪ್ರಸಕ್ತ ಸಾಲಿನ ತರಬೇತಿಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು 8762280555 ಅಥವಾ 8762095555 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಸಂಸ್ಥೆ ಪ್ರಕಟನೆಯಲ್ಲಿ …

ಜ್ಞಾನಸುಧಾದಲ್ಲಿ ನೀಟ್ ಲಾಂಗ್‌ಟರ್ಮ್ ನೋಂದಣಿ ಆರಂಭ – ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ Read More »

ಮೂಡಬಿದಿರೆ ಆಳ್ವಾಸ್ ಕೇಂದ್ರೀಯ ಶಾಲೆ : ಸಿಬಿಎಸ್‌ಸಿ 10ನೇ ತರಗತಿ ಶೇ.100 ಫಲಿತಾಂಶ

ಮೂಡುಬಿದಿರೆ : ಸಿಬಿಎಸ್‌ಸಿ 10ನೇ ತರಗತಿಯ ಫಲಿತಾಂಶದಲ್ಲಿ ಆಳ್ವಾಸ್ ಕೇಂದ್ರೀಯ ಶಾಲೆಯು ಸತತ ಮೂರನೇ ವರ್ಷವೂ ಶೇ.100 ಪ್ರತಿಶತ ಫಲಿತಾಂಶ ಪಡೆದಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಪ್ರಕಟನೆಯಲ್ಲಿ ತಿಳಿಸಿದರು. 173 ಬಾಲಕರು ಮತ್ತು 71 ಬಾಲಕಿಯರು ಸೇರಿದಂತೆ ಒಟ್ಟು 244 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ತೇರ್ಗಡೆಯಾಗಿದ್ದಾರೆ. 8 ವಿದ್ಯಾರ್ಥಿಗಳು ಶೇ.95ಕ್ಕಿಂತಲೂ ಅಧಿಕ ಅಂಕ ಪಡೆದಿದ್ದಾರೆ. ನಿರೀಕ್ಷಾ 480, ಪ್ರಜ್ವಲ್ ಕಾಖಂಡ್ಕಿ 479, ಅಹ್ಮದ್ ಸಾಜಿಲ್, ಧನುಶ್ ಸಂಜೀವ, ಚಿತ್ರಾಕ್ಷಿ …

ಮೂಡಬಿದಿರೆ ಆಳ್ವಾಸ್ ಕೇಂದ್ರೀಯ ಶಾಲೆ : ಸಿಬಿಎಸ್‌ಸಿ 10ನೇ ತರಗತಿ ಶೇ.100 ಫಲಿತಾಂಶ Read More »

ಮೇ8 ರಿಂದ ಬಹಿರಂಗ ಪ್ರಚಾರಕ್ಕೆ ತೆರೆ : ನಾಳೆ ಸಂಜೆ 5ರಿಂದ ಮೇ10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧ

ಬೆಂಗಳೂರು : ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆ ತೀವ್ರ ಜಿದ್ದಾಜಿದ್ದಿಯಿಂದ ಕೂಡಿದೆ. ಮತದಾನಕ್ಕೆ 3 ದಿನ ಮಾತ್ರ ಬಾಕಿ ಉಳಿದಿದೆ. ಮೇ10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ಆರಂಭವಾಗುತ್ತದೆ. ಈ ಸಂಬಂಧ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ನಡೆಸಿವೆ. ಆದರೆ ಮೇ8ರ ಸಂಜೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಆದರೆ ಮನೆ ಮನೆ ಪ್ರಚಾರಕ್ಕೆ ಅವಕಾಶವಿರುತ್ತದೆ. ಈ ಹಿನ್ನೆಲೆ ಸೋಮವಾರ ಸಂಜೆ 5ರಿಂದ ಮೇ 10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧಿಸಲಾಗಿದೆ. ಮತ ಎಣಿಕೆ …

ಮೇ8 ರಿಂದ ಬಹಿರಂಗ ಪ್ರಚಾರಕ್ಕೆ ತೆರೆ : ನಾಳೆ ಸಂಜೆ 5ರಿಂದ ಮೇ10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧ Read More »

error: Content is protected !!
Scroll to Top