ಹೆಬ್ರಿ ಸುದ್ದಿ

hebri news, newskarkala, karkala news

ಮುದ್ರಾಡಿ : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ನಿರಂತರ ಪ್ರಯತ್ನ – ಪರಿಶ್ರಮದಿಂದ ಯಶಸ್ಸು : ರಾಮಕೃಷ್ಣ ಆಚಾರ್ಯ ಹೆಬ್ರಿ : ನಿರಂತರ ಪ್ರಯತ್ನ, ಪರಿಶ್ರಮದಿಂದ ವಿದ್ಯಾರ್ಥಿಗಳು ಯಶಸ್ಸನ್ನು ಪಡೆಯಲು ಸಾಧ್ಯವಾಗುವುದು. ಕನ್ನಡ ಮಾಧ್ಯಮದಲ್ಲಿ ಉತ್ತಮ ಸಾಧನೆ ತೋರಿ ಸಂಸ್ಥೆಗೆ, ಊರಿಗೆ ಕೀರ್ತಿ ತಂದುಕೊಟ್ಟ ಮುದ್ರಾಡಿ ಫ್ರೌಡಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಕಾರ್ಯ ಅಭಿನಂದನೀಯ ಎಂದು ಹೆಬ್ರಿ ರೋಟರಿ ಸಮುದಾಯ ದಳದ ಅಧ್ಯಕ್ಷ ಎಚ್.‌ ರಾಮಕೃಷ್ಣ ಆಚಾರ್ಯ ಹೇಳಿದರು.ಅವರು ಮೆ 3ರಂದು ಮುದ್ರಾಡಿ ಎಂ.ಎನ್‌.ಡಿ.ಎಸ್.ಎಂ. ಅನುದಾನಿತ ಫ್ರೌಡಶಾಲೆಯ 2022-23ನೇ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮತ್ತು …

ಮುದ್ರಾಡಿ : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ Read More »

ವರಂಗ : ದೀಪಾಶ್ರೀ ಜ್ಞಾನವಿಕಾಸ ಕೇಂದ್ರದಲ್ಲಿ ಮಾಹಿತಿ ಕಾರ್ಯಾಗಾರ

ಹಬ್ಬಗಳ ಆಚರಣೆಯಲ್ಲಿ ಸಂಸ್ಕೃತಿಯ ಉಳಿವು – ಚಂದ್ರಶೇಖರ ಭಟ್ ಹೆಬ್ರಿ : ಆಧುನಿಕ ಜೀವನ ಶೈಲಿಯ ಭರಾಟೆಯ ಮಧ್ಯೆ ನಮ್ಮ ಧಾರ್ಮಿಕ ಪರಂಪರೆ ಮತ್ತು ಸಂಸ್ಕೃತಿಯ ಉಳಿವಿನಲ್ಲಿ ಹಬ್ಬಗಳ ಆಚರಣೆಯು ಮಹತ್ವದ್ದಾಗಿದೆ. ಹಬ್ಬಗಳು, ಧಾರ್ಮಿಕ ಆಚರಣೆಗಳು ನಮ್ಮ ಪೂರ್ವಜರು ಪ್ರಕೃತಿಯೊಂದಿಗೆ ಹೊಂದಿದ್ದ ಸಂಬಂಧ ಮತ್ತು ಅವರ ಜೀವನ ಶೈಲಿಯನ್ನು ನಮಗೆ ಕಟ್ಟಿಕೊಡುತ್ತದೆ. ಈ ನಿಟ್ಟಿನಲ್ಲಿ ಮುಂದಿನ ಪೀಳಿಗೆಗೆ ಹಬ್ಬಗಳ ಮಹತ್ವತೆಯನ್ನು ತಿಳಿಸುವುದು ಅವಶ್ಯ ಎಂದು ಮುದ್ರಾಡಿ ಪ್ರೌಢಶಾಲೆಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ತಿಳಿಸಿದರು. ಅವರು ಮೇ …

ವರಂಗ : ದೀಪಾಶ್ರೀ ಜ್ಞಾನವಿಕಾಸ ಕೇಂದ್ರದಲ್ಲಿ ಮಾಹಿತಿ ಕಾರ್ಯಾಗಾರ Read More »

ಜೂ. 6 : ಹೆಬ್ರಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಹೆಬ್ರಿ : ಜೂ. 6 ರಂದು 110/33/11 ಕೆವಿ ವಿದ್ಯುತ್‌ ಉಪಕೇಂದ್ರ ಹಿರಿಯಡ್ಕದಲ್ಲಿ ನಿರ್ವಹಣೆಯ ಕಾಮಗಾರಿ ನಡೆಯಲಿರುವುದರಿಂದ, ಆ ಸ್ಥಾವರದಿಂದ ಹೊರಡುವ 33 ಕೆವಿ ಹೆಬ್ರಿ ಫೀಡರ್‌ನಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ಅಡಚಣೆಯಾಗಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬೇಳಂಜೆ, ಕಳ್ತೂರು, ಸಂತೆಕಟ್ಟೆ, ಕರ್ಜೆ, ಮುಂಡಾಡಿಜೆಡ್ಡು, ಕುರ್ಪಾಡಿ, ಚಾರ, ಶಿವಪುರ, ಕನ್ಯಾನ, ನಾಡ್ಪಾಲು, ಸೋಮೇಶ್ವರ, ಸೀತಾನದಿ, ಮಡಾಮಕ್ಕಿ, ಕಾಸನಮಕ್ಕಿ, ಮುದ್ರಾಡಿ, ವರಂಗ, ಮುನಿಯಾಲು, ಕಬ್ಬಿನಾಲೆ, ಕರಬೆಟ್ಟು, ಹೊಸುರು, ಬಚ್ಚಪ್ಪು, ಹೆಬ್ರಿ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ …

ಜೂ. 6 : ಹೆಬ್ರಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ Read More »

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಹೆಬ್ರಿ ಶಾಖೆ

ಜೂ. 17ರಂದು ವಾರ್ಷಿಕ ಮಹಾಸಭೆ ಹಾಗೂ ರಾಜ್ಯ ಸರಕಾರಿ ನೌಕರರ ದಿನಾಚರಣೆ ಹೆಬ್ರಿ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಹೆಬ್ರಿ ಶಾಖೆಯ ತೃತೀಯ ವರ್ಷದ ವಾರ್ಷಿಕ ಮಹಾಸಭೆ ಹಾಗೂ ದ್ವಿತೀಯ ವರ್ಷದ ರಾಜ್ಯ ಸರಕಾರಿ ನೌಕರರ ದಿನಾಚರಣೆ ಜೂ. 17 ರಂದು ಹೆಬ್ರಿ ಗ್ರಾ. ಪಂ. ಸಮಾಜ ಮಂದಿರದಲ್ಲಿ ಮಧ್ಯಾಹ್ನ 2 ಗಂಟೆಗೆ ಜರುಗಲಿದೆ.ಅಂದು 2022 ನೇ ಎಪ್ರಿಲ್‌ ನಿಂದ 2023 ನೇ ಮಾರ್ಚ್‌ ವರೆಗೆ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಕರ್ತವ್ಯ ಸಲ್ಲಿಸಿ ಸೇವಾ …

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಹೆಬ್ರಿ ಶಾಖೆ Read More »

ಮೇ 31 : ಹೆಬ್ರಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಹೆಬ್ರಿ : 33/11 ಕೆವಿ ಹೆಬ್ರಿ ಉಪವಿದ್ಯುತ್‌ ಸ್ಥಾವರದಿಂದ ಹೊರಡುವ 11ಕೆವಿ ಶಿವಪುರ ಫೀಡರ್‌ನಲ್ಲಿ ಮೇ 31 ರಂದು ವ್ಯವಸ್ಥಾಪನಾ ಕಾಮಗಾರಿ ನಡೆಯಲಿರುವುದರಿಂದ ಅಂದು ಬೆಳಿಗ್ಗೆ 8.30 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಶಿವಪುರ, ಕೆರೆಬೆಟ್ಟು, ಭಟ್ಟಂಪಳ್ಳಿ, ಪಾಂಡುಕಲ್ಲು, ಎಳ್ಳಾರೆ, ಶಂಕರಲಿಂಗೇಶ್ವರ ದೇವಸ್ಥಾನದ ಬಳಿ, ಮುಳ್ಳುಗುಡ್ಡೆ, ಕನ್ಯಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

CSEET ಪರೀಕ್ಷೆಯಲ್ಲಿ ಅಮೃತಭಾರತಿಯ 7 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ : ಇನ್ಸಿಟ್ಯೂಟ್‌ ಆಫ್‌ ಕಂಪೆನಿ ಸೆಕ್ರೆಟರಿ ಆಫ್‌ ಇಂಡಿಯಾ ನಡೆಸಿದ CSEET (ಕಂಪೆನಿ ಸೆಕ್ರೆಟರಿ ಎಕ್ಸ್ಯುಟಿವ್‌ ಎಂಟ್ರೆನ್ಸ್‌ ಟೆಸ್ಟ್‌) ಪರೀಕ್ಷೆಯಲ್ಲಿ ಪಾಂಡುರಂಗ ರಮಣ ನಾಯಕ್‌ ಅಮೃತ ಭಾರತಿ ಪಿಯು ಕಾಲೇಜಿನ 07 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.ವಿದ್ಯಾರ್ಥಿಗಳಾದ ಪ್ರಜ್ಞಾ, ಮೇಘಾ ಜಿ. ಶೆಟ್ಟಿ, ಸಂಜಯ್‌ ಟಿ., ಉಜ್ವಲ್‌ ಹೆಗ್ಡೆ, ಪ್ರತೀಕಾ, ಸಿರಿ ಎಸ್.‌, ಎಮ್‌. ಎಸ್.‌ ಶ್ರೀಲತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದು, ಈ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ.

ಎಳ್ಳಾರೆ ಜ್ಞಾನವಿಕಾಸ ಕೇಂದ್ರದಲ್ಲಿ ಸಂಸ್ಕೃತಿ – ಸಂಸ್ಕಾರ ಕುರಿತು ಮಾಹಿತಿ ಕಾರ್ಯಾಗಾರ

ಹೆಬ್ರಿ : ಜೀವನದಲ್ಲಿ ಸಂಸ್ಕಾರಯುತ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರಿಂದ ಮಾನಸಿಕ ನೆಮ್ಮದಿಯೊಂದಿಗೆ ಬದುಕಿಗೆ ಭದ್ರತೆ ಒದಗುತ್ತದೆ. ಈ ನಿಟ್ಟಿನಲ್ಲಿ ಮೌಲ್ಯಾಧಾರಿತ ಚಟುವಟಿಕೆಗಳೊಂದಿಗೆ ಸಹಕಾರ, ಸೌಹಾರ್ದತೆಯ ವಾತಾವರಣ ನಿರ್ಮಾಣ ಹಾಗೂ ಆತ್ಮವಿಶ್ವಾಸವನ್ನು ಮೂಡಿಸುವ ಮೂಲಕ ಕಾರ್ಯನಿರ್ವಹಿಸುವ ಜ್ಞಾನವಿಕಾಸ ಯೋಜನೆ ಸಮಾಜದಲ್ಲಿ ಮಾದರಿಯಾಗಿದೆ ಎಂದು ವಾಗ್ಮಿ ದೀಪಿಕಾ ಶೆಟ್ಟಿ ಚಾರ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಮೇ 21 ರಂದು ಎಳ್ಳಾರೆ ಶಿಶು ಮಂದಿರದಲ್ಲಿ ಅಭಿವೃದ್ಧಿ ಜ್ಞಾನವಿಕಾಸ ಕೇಂದ್ರದ ಸದಸ್ಯೆಯರಿಗೆ ನಡೆದ ಸಂಸ್ಕೃತಿ – ಸಂಸ್ಕಾರ ಕುರಿತು ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ …

ಎಳ್ಳಾರೆ ಜ್ಞಾನವಿಕಾಸ ಕೇಂದ್ರದಲ್ಲಿ ಸಂಸ್ಕೃತಿ – ಸಂಸ್ಕಾರ ಕುರಿತು ಮಾಹಿತಿ ಕಾರ್ಯಾಗಾರ Read More »

ಹೆಬ್ರಿಯಲ್ಲಿ ಬಿಜೆಪಿ ವಿಜಯೋತ್ಸವ – ಅಭಿನಂದನಾ ಕಾರ್ಯಕ್ರಮ

ಗ್ಯಾರಂಟಿ ಯೋಜನೆಗಳನ್ನು ಜನತೆಗೆ ನೀಡದಿದ್ದಲ್ಲಿ ಬಿಜೆಪಿಯಿಂದ ಹೋರಾಟ – ಸುನಿಲ್‌ ಕುಮಾರ್‌ ಹೆಬ್ರಿ : ಐದು ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಆ ಭರವಸೆಗಳನ್ನು ಈಡೇರಿಸದೆ ಇದ್ದಲ್ಲಿ ಬಿಜೆಪಿಯಿಂದ ತೀವ್ರ ಸ್ವರೂಪದ ಹೋರಾಟ ನಡೆಯಲಿದೆ ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ತಿಳಿಸಿದರು. ಅವರು ಮೇ 21 ರಂದು ಹೆಬ್ರಿ ಬಸ್‌ ನಿಲ್ದಾಣದಲ್ಲಿ ನಡೆದ ಬಿಜೆಪಿ ವಿಜಯೋತ್ಸವ, ಮತದಾರರಿಗೆ ವಂದನೆ ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಮಾಣ ವಚನ ಸ್ವೀಕರಿಸಿದ ಮೊದಲ ದಿನವೇ …

ಹೆಬ್ರಿಯಲ್ಲಿ ಬಿಜೆಪಿ ವಿಜಯೋತ್ಸವ – ಅಭಿನಂದನಾ ಕಾರ್ಯಕ್ರಮ Read More »

ನಾಳೆ ಹೆಬ್ರಿಯಲ್ಲಿ ವಿಜಯೋತ್ಸವ ಮತ್ತು ಅಭಿನಂದನಾ ಕಾರ್ಯಕ್ರಮ

ಹೆಬ್ರಿ : ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ 4ನೇ ಬಾರಿಗೆ ವಿ. ಸುನಿಲ್‌ ಕುಮಾರ್ ಶಾಸಕರಾಗಿ ಆಯ್ಕೆಯಾದ ನಿಟ್ಟಿನಲ್ಲಿ ಬಿಜೆಪಿ ವತಿಯಿಂದ ಮೇ 21 ರಂದು ಸಂಜೆ 4 ಗಂಟೆಗೆ ಹೆಬ್ರಿಯಲ್ಲಿ ಮತದಾರರಿಗೆ ವಂದನೆ ಕಾರ್ಯಕರ್ತರಿಗೆ ಅಭಿನಂದನೆ ಕಾರ್ಯಕ್ರಮ ಜರುಗಲಿದೆ. ಈ ಪ್ರಯುಕ್ತ ಅಂದು ಅನಂತ ಪದ್ಮನಾಭ ದೇವಸ್ಥಾನದಿಂದ ಹೆಬ್ರಿ ಪೇಟೆಯವರೆಗೆ ವಿಜಯೋತ್ಸವ ಮೆರವಣಿಗೆ ನಡೆಯಲಿದೆ.

ಮಾವಿನಕಾಯಿ ಲೋಡ್‌ ತುಂಬಿದ್ದ ಗೂಡ್ಸ್‌ ವಾಹನ ಪಲ್ಟಿ

ಹೆಬ್ರಿ : ಮಾವಿನಕಾಯಿ ಲೋಡ್‌ ತುಂಬಿದ್ದ ಗೂಡ್ಸ್‌ ವಾಹನ ಪಲ್ಟಿಯಾದ ಘಟನೆ ನಾಡ್ಪಾಲು ಗ್ರಾಮದ ಆಗುಂಬೆ ಘಾಟಿಯಲ್ಲಿ ಮೇ 17 ರಂದು ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ರಮೇಶ್‌ ಎಂಬುವವರು ಚಾಲಕ ಅಶೋಕ್‌ ಮತ್ತು ಮನೋಹರರವರೊಂದಿಗೆ ಗೂಡ್ಸ್‌ ವಾಹನದಲ್ಲಿ ಮಾವಿನ ಕಾಯಿ ಲೋಡ್‌ ಮಾಡಿಕೊಂಡು ಉಡುಪಿ ಕಡೆಗೆ ಬರುತ್ತಿರುವಾಗ ನಾಡ್ಪಾಲು ಗ್ರಾಮದ ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಪರಿಣಾಮವಾಗಿ, ವಾಹನದ ಮುಂದಿನ ಗ್ಲಾಸ್‌ ಜಖಂಗೊಂಡಿದೆ. ಚಾಲಕ ಅಶೋಕ್‌ ಮತ್ತು ಮನೋಹರ …

ಮಾವಿನಕಾಯಿ ಲೋಡ್‌ ತುಂಬಿದ್ದ ಗೂಡ್ಸ್‌ ವಾಹನ ಪಲ್ಟಿ Read More »

error: Content is protected !!
Scroll to Top