ಪಡು ತಿರುಪತಿ ಕೀರ್ತಿಯ ಕಾರ್ಕಳದಲ್ಲಿ ರವಿವಾರ ಮುಂಜಾನೆ ವಿಶ್ವರೂಪ ದರ್ಶನ : ಭಕ್ತಿ ಭಾವಗಳ ಪರಾಕಾಷ್ಠೆಯ ಆರಾಧನೆ
‘ಪಡು ತಿರುಪತಿ’ಎಂದೇ ಕೀರ್ತಿ ಪಡೆದ ಕಾರ್ಕಳದಲ್ಲಿ ಈ ರವಿವಾರ(ನ. 19) ಮುಂಜಾನೆ ಸೂರ್ಯೋದಯಕ್ಕೂ ಮೊದಲು ‘ವಿಶ್ವರೂಪ ದರ್ಶನ ‘ ನೆರವೇರಲಿದೆ. ಕಾರ್ಕಳದ ಭಕ್ತರು ಜಾತಿ, ಮತ, ಪಂಥಗಳ ಭೇದವಿಲ್ಲದೆ ಭಾಗವಹಿಸುವ ಉತ್ಸವ ಇದು. ಕಾರ್ತಿಕ ಮಾಸ ಬಂತೆಂದರೆ ಪಂಡರಾಪುರದ ವಿಠ್ಠಲ ದೇವಸ್ಥಾನಕ್ಕೆ ಸಾವಿರಾರು ಭಜಕರು ಭಾರತದ ಮೂಲೆಮೂಲೆಗಳಿಂದ ಬಂದು ಸೇರಿ ಕುಣಿತ ಭಜನೆ ಮಾಡುವುದು, ವಿಠ್ಠಲ ವಿಠ್ಠಲ ಎಂದು ತಾಳ ಬಡಿಯುತ್ತಾ ಹಾಡುವುದು ತುಂಬಾ ಅದ್ಭುತ. ಆಷಾಢ, ಕಾರ್ತಿಕ ಮಾಸಗಳಲ್ಲಿ ಪಂಡರಾಪುರದ ದೇವಸ್ಥಾನವು ಭೂ ವೈಕುಂಠ ಆಗಿ







