• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕಾರ್ಕಳ ಸುದ್ದಿ

ಮೆಹಂದಿ ಕಾರ್ಯಕ್ರಮದಲ್ಲಿ ಹರಡಿತು ಮಾರಕ ಕೊರೊನಾ-ನವವಧು ಸೇರಿ 8 ಮಂದಿಗೆ ಪಾಸಿಟಿವ್‌

ಉಡುಪಿ : ಸರಕಾರವೇನೂ ಸೀಮಿತ ಜನರು ಭಾಗವಹಿಸಬೇಕೆಂಬ  ಷರತ್ತು ವಿಧಿಸಿ ಮದುವೆ, ನಿಶ್ಚಿತಾರ್ಥ ಮತ್ತಿತರ ಶುಭ ಕಾರ್ಯಗಳಿಗೆ ಅನುಮತಿ ನೀಡುತ್ತದೆ. ಆದರೆ ಜನರು ಮಾತ್ರ ಸರಕಾರ ವಿಧಿಸಿದ ಷರತ್ತುಗಳನ್ನು ಗಾಳಿಗೆ ತೂರಿ ತಮ್ಮಿಷ್ಟದಂತೆ ಕಾರ್ಯಕ್ರಮ ನಡೆಸುತ್ತಾರೆ. ಉಡುಪಿ ಜಿಲ್ಲೆಯಲ್ಲಿ ಹೀಗೆ ಒಂದು ಮದುವೆ ಕಾರ್ಯಕ್ರಮ ನಡೆಸಿ ಈಗ ಹಲವು ಮಂದಿ ಕೊರೊನಾ ಸೋಂಕಿಗೆ ತುತ್ತಾಗಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.  ನವವಧು ಸೇರಿದಂತೆ ಮೆಹಂದಿಗೆ ಬಂದಿದ್ದ 7 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಮದುವೆಗೆ ಬಂದಿದ್ದ ಜನರೀಗ […]

ಮೆಹಂದಿ ಕಾರ್ಯಕ್ರಮದಲ್ಲಿ ಹರಡಿತು ಮಾರಕ ಕೊರೊನಾ-ನವವಧು ಸೇರಿ 8 ಮಂದಿಗೆ ಪಾಸಿಟಿವ್‌ Read More »

ದಕ್ಷಿಣ ಕನ್ನಡ ಲಾಕ್ ಡೌನ್ ಗೆ ಮಾರ್ಗಸೂಚಿ ಬಿಡುಗಡೆ

ಮಂಗಳೂರು : ಕೊರೊನಾ ಸೋಂಕು ಸೋಂಕು ಹರಡುವಿಕೆಯ ಸರಪಣಿಯನ್ನು ತುಂಡರಿಸಲು ದ.ಕ. ಜಿಲ್ಲಾಡಳಿತ ಮತ್ತೆ ಲಾಕ್ ಡೌನ್ ಮೊರೆ ಹೋಗಿದೆ. ಜಿಲ್ಲೆಯಾದ್ಯಂತ ಕೋವಿಡ್ 19 ಸೋಂಕಿನ ಹಬ್ಬುವಿಕೆ ಏರುಗತಿಯಲ್ಲಿದೆ. ಇದರನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 16 ರಾತ್ರಿ 8ರಿಂದ ಜುಲೈ 23ರ ಬೆಳಿಗ್ಗೆ 5 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೆಲವೊಂದು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಏನಿರುತ್ತೆ? :* ಜನರಿಗೆ ಅಗತ್ಯ

ದಕ್ಷಿಣ ಕನ್ನಡ ಲಾಕ್ ಡೌನ್ ಗೆ ಮಾರ್ಗಸೂಚಿ ಬಿಡುಗಡೆ Read More »

ಉಡುಪಿ ಗಡಿ ಸೀಲ್‌ ಡೌನ್‌

ಉಡುಪಿ : ಮುಂದಿನ 14 ದಿನಗಳ ಕಾಲ ಉಡುಪಿ ಜಿಲ್ಲೆಯ ಗಡಿಭಾಗ ಸಂಪೂರ್ಣ ಸೀಲ್ ಡೌನ್.ಅಗತ್ಯ ಕೆಲಸಕ್ಕಾಗಿ ಜಿಲ್ಲೆಯಿಂದ ಹೊರ ಹೋಗುವವರಿಗೆ ನಾಳೆ ರಾತ್ರಿ 8 ಗಂಟೆಯ ಒಳಗೆ ಅಂತರ್ಜಿಲ್ಲಾ ಪ್ರಯಾಣಕ್ಕೆ ಅವಕಾಶ ಕೊಡಲಾಗಿದೆ. ಬಳಿಕ ಉಡುಪಿ ಗಡಿ ಪ್ರಯಾಣ ಸಂಪೂರ್ಣ ಬಂದ್ ಆಗಲಿದೆ.

ಉಡುಪಿ ಗಡಿ ಸೀಲ್‌ ಡೌನ್‌ Read More »

ಮಂಗಳೂರಲ್ಲಿ ಗ್ಯಾಂಗ್ ನಿಂದ ಹಲ್ಲೆ – ಮೂವರು ಯುವಕರಿಗೆ ಗಂಭೀರ ಗಾಯ

ಮಾದಕ ವಸ್ತು ಸೇವಿಸಿದ ಗ್ಯಾಂಗ್ ನ ಕೃತ್ಯ ಎಂದು ಸ್ಥಳೀಯರ ಆರೋಪ ಮಂಗಳೂರು: ನಗರದ ಬಜಿಲಕೇರಿಯಲ್ಲಿ  ಸೋಮವಾರ ತಡರಾತ್ರಿ ಮಾರಕಾಯುಧಗಳನ್ನು ಹೊಂದಿದ್ದ ಗ್ಯಾಂಗ್‌ ಮೂವರು ಯುವಕರ ಮೇಲೆ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿದೆ  ಮಾರಕ ಆಯುಧ ಹೊಂದಿದ್ದ ಗ್ಯಾಂಗ್ ಮೂವರು ಯುವಕರ ಮೇಲೆ ಹಲ್ಲೆ ನಡೆಸಿದೆ. ಕ್ಷುಲ್ಲಕ ಕಾರಣಗಳಿಂದ ಈ ದಾಳಿ ನಡೆದಿದೆ ಎನ್ನಲಾಗಿದೆ. ಗಾಯಗೊಂಡ ಮೂವರು ಇಲ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಅಪರಾಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಗ್ಯಾಂಗ್ ಕೃತ್ಯ ನಡೆಸಿದ್ದ ಸ್ಥಳದಲ್ಲಿನ

ಮಂಗಳೂರಲ್ಲಿ ಗ್ಯಾಂಗ್ ನಿಂದ ಹಲ್ಲೆ – ಮೂವರು ಯುವಕರಿಗೆ ಗಂಭೀರ ಗಾಯ Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರದಿಂದ ಒಂದು ವಾರ ಲಾಕ್‌ ಡೌನ್‌

ಮಂಗಳೂರು:ಕೊರೊನಾ ಸೋಂಕು ಅಂಕೆ ಮೀರಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಮ ಒಂದು ವಾರ  ಸಂಪೂರ್ಣ ಲಾಕ್‌ ಡೌನ್‌  ಮಾಡಲು ನಿರ್ಧರಿಸಲಾಗಿದೆ. ದಕ್ಷಿಣ ಕನ್ನಡ ಪೂರ್ತಿ ಬಂದ್‌ ಆಗಲಿದೆ.   ಇಂದು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಜಿಲ್ಲೆಗಳ ಕೊರೊನಾ ನಿಯಂತ್ರಣದ ಕುರಿತು ಮಾಹಿತಿ ಪಡೆದರು. ಸಂಪೂರ್ಣ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಂಗಳೂರು ಸಂಸದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಜಿಲ್ಲಾಡಳಿತ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರದಿಂದ ಒಂದು ವಾರ ಲಾಕ್‌ ಡೌನ್‌ Read More »

ಬೆಳ್ಮಣ್ ಗ್ರಾಮ ಪಂಚಾಯತಿ ಸದಸ್ಯರಿಗೆ ಕೊರೊನಾ ಪಾಸಿಟಿವ್‌

ಬೆಳ್ಮಣ್ :‌  ಕೊರೊನಾ ವೈರಸ್‌ ಈಗ ಗ್ರಾಮೀಣ ಪ್ರದೇಶಗಳಲ್ಲೂ ಹರಡಲು ಶುರುವಾಗಿದೆ.ಇದೀಗ ಬೆಳ್ಮಣ್ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಕೊರೊನಾ ವೈರಸ್‌ ಸೋಂಕಿತರಾಗಿದ್ದಾರೆ. ಬೆಳ್ಮಣ್ ಗ್ರಾಮ ಪಂಚಾಯತಿಯ ಸಿಬ್ಬಂದಿಗಳಿಗೆ ಹಾಗೂ ಸದಸ್ಯರಿಗೆ ಇತ್ತೀಚೆಗೆ ಕೋವಿಡ್-19 ಪರೀಕ್ಷೆ ಮಾಡಲಾಗಿದ್ದು ಇದರಲ್ಲಿ ಜಂತ್ರ ಪುನಾರು ನಿವಾಸಿ ಸದಸ್ಯರೊಬ್ಬರ ವರದಿ  ಪಾಸಿಟಿವ್ ಬಂದಿದೆ. ಈ ಹಿನ್ನಲೆಯಲ್ಲಿ ಅವರನ್ನು ಕಾರ್ಕಳ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಸಿಟಿವ್ ಬಂದ ವ್ಯಕ್ತಿ ಬೆಳ್ಮಣ್ ಪೇಟೆ ಪರಿಸರ ಸುತ್ತಾಡಿರುವುದರಿಂದ ಬೆಳ್ಮಣ್ ಭಾಗದ ಜನರಲ್ಲಿ ಆತಂಕ ಎದುರಾಗಿದೆ.

ಬೆಳ್ಮಣ್ ಗ್ರಾಮ ಪಂಚಾಯತಿ ಸದಸ್ಯರಿಗೆ ಕೊರೊನಾ ಪಾಸಿಟಿವ್‌ Read More »

ಗ್ರಾಮ ಪಂಚಾಯತ್ ಸದಸ್ಯನ ಕೊಲೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್ ಗ್ರಾಮ ಪಂಚಾಯತ್ ಸದಸ್ಯ ಯಾಕೂಬ್ ಮೇಲೆ ನಿನ್ನೆ ಸಂಜೆ ಒಂದು ತಂಡದಿಂದ ದಾಳಿ ನಡೆದಿದ್ದು ಗಂಭೀರ ಗಾಯಗೊಂಡು ನಂತರ ಹೈ ಲ್ಯಾಂಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ತಂಡವೊಂದು ನಿನ್ನೆ ಸಂಜೆ ಅಡ್ಯಾರ್ ಸಮೀಪ ಯಾಕೂಬ್ ಮೇಲೆ ದಾಳಿ ನಡೆಸಿದ್ದು ಯಾಕೂಬ್ ರಿಕ್ಷಾದಲ್ಲಿ ಹೈ ಲ್ಯಾಂಡ್ ಆಸ್ಪತ್ರೆಗೆ ತೆರಳಿದ್ದರು.ಅಲ್ಲಿ ಸಾವನ್ನಪ್ಪಿದ್ದಾರೆ.ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಯಾಕೂಬ್ ಅಡ್ಯಾರ್ ಪಂಚಾಯತ್ ಬಿಜೆಪಿ

ಗ್ರಾಮ ಪಂಚಾಯತ್ ಸದಸ್ಯನ ಕೊಲೆ Read More »

ನೇತ್ರಾವತಿ ನದಿಯಲ್ಲಿ ಆತ್ಮಹತ್ಯೆ ? ನದಿಗೆ ಜಿಗಿದ ಬಂಟ್ವಾಳದ ಮಹಿಳೆ

ಬಂಟ್ವಾಳ : ಜೀವನದಲ್ಲಿ ನೊಂದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಹಿಳೆಯೊಬ್ಬರು ಪಾಣೆಮಂಗಳೂರು ನೂತನ ಸೇತುವೆ ಬಳಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಸ್ಥಳೀಯ ಮುಳುಗುತಜ್ಞರಿಂದ ಮಹಿಳೆಗಾಗಿ ನದಿಯಲ್ಲಿ ಹುಡುಕಾಟ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ನಿವಾಸಿಯಾಗಿರುವ ಮಹಿಳೆಯೋರ್ವರು ಅನಾರೋಗ್ಯದಿಂದ ಬಳಲುತ್ತಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿರಬೇಕು ಎಂದು ಶಂಕಿಸಲಾಗಿದೆ. ಆ ಮಹಿಳೆಯು ಬಿಸಿರೋಡಿನ ಚಿಕ್ಕಯ್ಯಮಠ ಎಂಬಲ್ಲಿರುವ ಅಕ್ಕನ ಮನೆಯಲ್ಲಿ  ಕೆಲದಿನಗಳಿಂದ ತಂಗಿದ್ದರು.ಶುಕ್ರವಾರ ರಾತ್ರಿ ಎಂದಿನಂತೆ ಊಟ

ನೇತ್ರಾವತಿ ನದಿಯಲ್ಲಿ ಆತ್ಮಹತ್ಯೆ ? ನದಿಗೆ ಜಿಗಿದ ಬಂಟ್ವಾಳದ ಮಹಿಳೆ Read More »

ಕೊರೊನಾ ಕಾವಳ :ಮಂಗಳೂರಿನಲ್ಲಿ 5 ದಿನ ಜ್ಯುವೆಲ್ಲರಿ ಶಾಪ್‌ಗಳು ಸ್ವಯಂ ಬಂದ್

ಮಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಸಾಗುತ್ತಿದ್ದು, ಮುಂಜಾಗ್ರತೆಗಾಗಿ‌ ಮಂಗಳೂರಿನ ಜ್ಯುವೆಲ್ಲರಿ ಶಾಪ್‌ಗಳು ನಾಳೆ(ಜು.5)ಯಿಂದ 5 ದಿನಗಳ ಕಾಲ ಸ್ವಯಂ ಬಂದ್‌ಗೆ ನಿರ್ಧರಿಸಿದೆ. ಮಂಗಳೂರಿನಲ್ಲಿ ಹಲವು ಶಾಪ್‌ಗಳು‌ ಸ್ವಯಂಪ್ರೇರಿತ ವಾಗಿ ಬಂದ್ ಆಗುತ್ತಿದೆ. ಇದೇ ನಿರ್ಧಾರವನ್ನು ಇನ್ನಷ್ಟು ಸಂಸ್ಥೆಗಳು ತೆಗೆದುಕೊಳ್ಳುವ ಸಾಧ್ಯತೆ ಇದೆ.

ಕೊರೊನಾ ಕಾವಳ :ಮಂಗಳೂರಿನಲ್ಲಿ 5 ದಿನ ಜ್ಯುವೆಲ್ಲರಿ ಶಾಪ್‌ಗಳು ಸ್ವಯಂ ಬಂದ್ Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಇಂದು ಮೂವರು ಬಲಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಮೂವರನ್ನು ಕೊರೊನಾ ಸೋಂಕು ಬಲಿ ಪಡೆದಿದೆ.ಇಬ್ಬರು ವೃದ್ಧೆಯರು,ಒಬ್ಬ ವ್ಯಕ್ತಿ ಸೋಂಕಿಗೆ ಪ್ರಾಣ ಕಳೆದುಕೊಂಡಿದ್ದಾರೆ. ದ.ಕ ಜಿಲ್ಲೆಯಲ್ಲಿ ಮುಂದುವರೆದ ಕೊರೊನಾ ಮರಣ ಮೃದಂಗ.ಮಾರಕ ಕೊರೊನಾಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮೂವರು ಬಲಿಯಾಗಿದ್ದಾರೆ. ಸುಳ್ಯ ತಾಲೂಕಿನ ಕೆರೆಮೂಲೆ ನಿವಾಸಿ ವೃದ್ದೆ ಕೊರೊನಾಗೆ ಇಂದು ಬೆಳಿಗ್ಗೆ ಬಲಿಯಾಗಿದ್ದರು. ಇದೀಗ ಮತ್ತೆ ಇಬ್ಬರು ಸೇರಿ ಇಂದು ಒಟ್ಟು ಮೂವರು ಬಲಿಯಾಗಿದ್ದಾರೆ.ಇನ್ನೋರ್ವ ಮಹಿಳೆ ಹಾಗೂ ಪುರುಷ ಕೊರೋನಾಗೆ ಬಲಿಯಾಗಿದ್ದಾರೆ ಎನ್ನಲಾಗಿದೆ. ದಕ್ಷಿಣ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಇಂದು ಮೂವರು ಬಲಿ Read More »

error: Content is protected !!
Scroll to Top