• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕಾರ್ಕಳ ಸುದ್ದಿ

ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

ಕಾರ್ಕಳ : ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಸಾವನಪ್ಪಿದ ದುರ್ಘಟನೆ ಮೇ 17ರಂದು ಬೋಳ ಗ್ರಾಮದ ಬಿಟ್ಟಿಂಗೇರಿಯಲ್ಲಿ ನಡೆದಿದೆ. ಅಜಿತ್ ಪ್ರಸಾದ್ ಹೆಗ್ಡೆ (73) ಮೃತದುರ್ದೈವಿ. ಇವರು ಕೃಷಿ ಕೆಲಸ ಮತ್ತು ನಂದಳಿಕೆಯ ಶ್ರೀ ಲಕ್ಷ್ಮೀ ಜನಾರ್ಧನ ಶಾಲೆಯಲ್ಲಿ ಸೆಕ್ಯುರಿಟಿ ಕೆಲಸ ಮಾಡಿಕೊಂಡಿದ್ದರು. ಆದಿತ್ಯವಾರ ಬೆಳಗ್ಗೆ ತಮ್ಮ ತೋಟಕ್ಕೆ ನೀರು ಬಿಡಲು ಬಾವಿಯ ಹತ್ತಿರ ಹೋದವರು ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ […]

ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು Read More »

ಹೆಂಡತಿಯಿಂದ ಗಂಡನಿಗೆ ಚೂರಿ ಇರಿತ

ಕಾರ್ಕಳ : ಹೆಂಡತಿ ಗಂಡನಿಗೆ ಚೂರಿಯಿಂದ ಇರಿದ ಘಟನೆ ಮೇ 18ರಂದು ಕಸಬಾ ಗ್ರಾಮದ ಮಟನ್‌ಸ್ಟಾಲ್‌ ಬಳಿಯಿರುವ ಮನೆಯಲ್ಲಿ ನಡೆದಿದೆ. ಆಪಾದಿತಳಾದ ನಾಗಮ್ಮ ತನ್ನ ಗಂಡ ಧನಪಾಲ ಅವರಿಗೆ ʼನೀನು ಕೆಲಸ ಮಾಡುವುದಿಲ್ಲ, ನನ್ನ ಸಂಬಳದಲ್ಲಿ ನಾನು ನಿನ್ನನ್ನು ಸಾಕುವುದು, ನನಗೆ ವಿಚ್ಚೇಧನ ನೀಡು, ನಿನ್ನ ಮಕ್ಕಳನ್ನು ಕರೆದುಕೊಂಡು ಮನೆ ಬಿಟ್ಟು ಹೋಗುʻ ಎಂದು ಹೇಳಿ ಚೂರಿಯಿಂದ ಕುತ್ತಿಗೆ ಹಾಗೂ ಕೆನ್ನೆಗೆ ತಿವಿದಿದ್ದಾಳೆ. ಅಲ್ಲದೆ ಆಕೆಯ ತಮ್ಮ ಆಪಾದಿತ ಗಣೇಶನು ಧನಪಾಲರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ

ಹೆಂಡತಿಯಿಂದ ಗಂಡನಿಗೆ ಚೂರಿ ಇರಿತ Read More »

ಬೋಳಾಸ್‌ ಹಾಗೂ ವಿಕಾಸ ಸೇವಾ ಸಂಸ್ಥೆ ವತಿಯಿಂದ ಸಂಜೀವಿನಿ ಮಹಿಳೆಯರಿಗೆ ಹೊಲಿಗೆ ಯಂತ್ರ – ಚೆಂಡೆ ವಿತರಣೆ

​ಕಾರ್ಕಳ : ಸ್ವರ್ಣ ಕಾರ್ಕಳ ಕಲ್ಪನೆಯಡಿ ಪ್ರವಾಸೋದ್ಯಮ, ಸಾಹಿತ್ಯ, ಸಾಂಸ್ಕೃತಿಕ ಹೀಗೆ ಎಲ್ಲ ಆಯಾಮಗಳಲ್ಲಿ ಕ್ಷೇತ್ರದ ಪ್ರತಿಯೊಬ್ಬ ಪುರುಷ ಮತ್ತು ಮಹಿಳೆಯರು ಆರ್ಥಿಕವಾಗಿ ವೃದ್ಧಿಯಾಗಬೇಕು. ಕ್ಷೇತ್ರದ ಕೊನೆಯ ಮನೆಯೂ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಬೇಕೆನ್ನುವುದೇ ನಮ್ಮ ಆಶಯ ಎಂದು ಶಾಸಕ ವಿ. ಸುನಿಲ್ ಕುಮಾರ್ ಅಭಿಪ್ರಾಯಪಟ್ಟರು.​ಮೇ 17ರಂದು ಶಾಸಕರ ವಿಕಾಸ ಕಚೇರಿಯಲ್ಲಿ ಬೋಳಾಸ್ ಆಗ್ರೋ ಪ್ರೈವೆಟ್ ಲಿಮಿಟೆಡ್ ಹಾಗೂ ವಿಕಾಸ ಸೇವಾ ಸಂಸ್ಥೆ ಕಾರ್ಕಳ ಇದರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಕಳ ಮತ್ತು ಹೆಬ್ರಿ ಸಂಜೀವಿನಿ ಒಕ್ಕೂಟದ ಮಹಿಳೆಯರ ತಂಡದ

ಬೋಳಾಸ್‌ ಹಾಗೂ ವಿಕಾಸ ಸೇವಾ ಸಂಸ್ಥೆ ವತಿಯಿಂದ ಸಂಜೀವಿನಿ ಮಹಿಳೆಯರಿಗೆ ಹೊಲಿಗೆ ಯಂತ್ರ – ಚೆಂಡೆ ವಿತರಣೆ Read More »

ಜಿಲ್ಲಾ ಕೆಡಿಪಿ ಸಭೆಯಲ್ಲಿ ಕಾರ್ಕಳ ತಾಲೂಕು ಆಸ್ಪತ್ರೆ ಅವ್ಯವಸ್ಥೆ ಕುರಿತು ಪ್ರಸ್ತಾಪ

ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಉಡುಪಿ : ಮುಂಗಾರು ಮಳೆಗಾಲದಲ್ಲಿ ಅತಿವೃಷ್ಠಿಯಿಂದಾಗಿ ಜನಸಾಮಾನ್ಯರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.‌ ಮೇ 16ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮುಂಬರುವ ಮುಂಗಾರು ಮಳೆಗಾಲದಲ್ಲಿ ಹೆಚ್ಚು ಮಳೆಯಿಂದಾಗಿ ಜನಸಾಮಾನ್ಯರ ದೈನಂದಿನ ಚಟುವಟಿಕೆಗಳಿಗೆ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಮಳೆಯಿಂದ

ಜಿಲ್ಲಾ ಕೆಡಿಪಿ ಸಭೆಯಲ್ಲಿ ಕಾರ್ಕಳ ತಾಲೂಕು ಆಸ್ಪತ್ರೆ ಅವ್ಯವಸ್ಥೆ ಕುರಿತು ಪ್ರಸ್ತಾಪ Read More »

ಸಂಸ್ಕಾರಯುತ ಶಿಕ್ಷಣದಿಂದ ಉತ್ತಮ ಸಮಾಜ ನಿರ್ಮಾಣ : ಮಹಾವೀರ ಜೈನ್ ಬಜಗೋಳಿ

ಕಾರ್ಕಳ : ಸಂಸ್ಕಾರಯುತ ಶಿಕ್ಷಣ ನೀಡುವುದರಿಂದ ಉತ್ತಮ ಸಮಾಜ ನಿರ್ಮಾಣವಾಗಲಿದೆ. ಹೀಗಾಗಿ ಮಕ್ಕಳಿಗೆ ಎಳೆವೆಯಲ್ಲೇ ಮೌಲ್ಯಯುತ, ಸಂಸ್ಕಾರಯುತ ಶಿಕ್ಷಣ ದೊರೆಯುವಂತಾಗಬೇಕೆಂದು ಉದ್ಯಮಿ ಮಹಾವೀರ ಜೈನ್ ಬಜಗೋಳಿ ಅಭಿಪ್ರಾಯಪಟ್ಟರು. ಅವರು ಮೇ 16ರಂದು ಬಜಗೋಳಿ ಗಣಪತಿ ಸಭಾಂಗಣದಲ್ಲಿ ಎಸ್‌ಕೆಡಿಆರ್‌ಡಿಪಿ ವತಿಯಿಂದ ನಡೆದ ವಲಯ ಮಟ್ಟದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ ಉದ್ಘಾಟಿಸಿ ಮಾತನಾಡಿದರು. ರೂಪಾ ಶೆಟ್ಟಿ, ಪ್ರವೀಣ್ ಹೆಗ್ಡೆ, ಅನಿಲ್ ಎಸ್. ಪೂಜಾರಿ, ಸೌಮ್ಯ, ಜಯಶ್ರೀ, ಹಿತೇಶ್ ಶೆಟ್ಟಿ, ಸರಸ್ವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹರಿಶ್ಚಂದ್ರ

ಸಂಸ್ಕಾರಯುತ ಶಿಕ್ಷಣದಿಂದ ಉತ್ತಮ ಸಮಾಜ ನಿರ್ಮಾಣ : ಮಹಾವೀರ ಜೈನ್ ಬಜಗೋಳಿ Read More »

ಬೈಲೂರು; ಗೂಡ್ಸ್ ವಾಹನ ಢಿಕ್ಕಿ; ಇಬ್ಬರಿಗೆ ಗಂಭೀರ ಗಾಯ

ಕಾರ್ಕಳ: ಇಲ್ಲಿನ ಪರಶುರಾಮ ಥೀಮ್ ಪಾರ್ಕ್ ಬಳಿ ಮೇ 14ರಂದು ರಾತ್ರಿ ಗೂಡ್ಸ್ ವಾಹನ ಮತ್ತು ಮೋಟಾರ್ ಸೈಕಲ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.​ದೀಕ್ಷಿತ್ ಹಾಗೂ ಸಹ ಸವಾರ ಸಂಜೀವ ಪೂಜಾರಿ ಸಂಚರಿಸುತ್ತಿದ್ದ ಬೈಕ್‌ಗೆ, ಅತಿ ವೇಗವಾಗಿ ಬಂದ ಗೂಡ್ಸ್ ವಾಹನ ಢಿಕ್ಕಿ ಹೊಡೆದಿದೆ. ಮೂಳೆ ಮುರಿತಕ್ಕೊಳಗಾದ ಇಬ್ಬರನ್ನೂ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಎಸಗಿದ ಚಾಲಕನ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಲೂರು; ಗೂಡ್ಸ್ ವಾಹನ ಢಿಕ್ಕಿ; ಇಬ್ಬರಿಗೆ ಗಂಭೀರ ಗಾಯ Read More »

ಮೇ 16 : ಪಳ್ಳಿಯಲ್ಲಿ ಹೊನಲು ಬೆಳಕಿನ ಬಂಟರ ಕ್ರಿಡೋತ್ಸವ

ಕಾರ್ಕಳ : ಪಳ್ಳಿ ನಿಂಜೂರು ವಲಯ ಬಂಟರ ಸಂಘದ ನೇತೃತ್ವದಲ್ಲಿ ಬಂಟರ ಸಂಘ ಕಾರ್ಕಳ, ಕಾಪು ಹಾಗೂ ಹೆಬ್ರಿ ತಾಲೂಕಿನ ಸಹಯೋಗದಲ್ಲಿ ಹೊನಲು ಬೆಳಕಿನ ಬಂಟರ ಕ್ರಿಡೋತ್ಸವ ಮೇ 16ರಂದು ಸಂಜೆ 3 ಗಂಟೆಯಿಂದ ಪಳ್ಳಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಸಂಜೆ 5 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮವನ್ನು ವಿಧಾನ ಪರಿಷತ್‌ ಶಾಸಕ ಮಂಜುನಾಥ್‌ ಭಂಡಾರಿ ಉದ್ಘಾಟಿಸಲಿದ್ದು, ಪಳ್ಳಿ ನಿಂಜೂರು ವಲಯ ಬಂಟರ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ

ಮೇ 16 : ಪಳ್ಳಿಯಲ್ಲಿ ಹೊನಲು ಬೆಳಕಿನ ಬಂಟರ ಕ್ರಿಡೋತ್ಸವ Read More »

ಕಾರ್ಕಳ ತಾಲೂಕು ಜನಜಾಗೃತಿ ವೇದಿಕೆ ನೂತನ ಅಧ್ಯಕ್ಷರಾಗಿ ವೃಷಭರಾಜ ಕಡಂಬ

ಕಾರ್ಕಳ : ಕಾರ್ಕಳ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನೂತನ ಅಧ್ಯಕ್ಷರಾಗಿ ವೃಷಭರಾಜ ಕಡಂಬ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 15ರಂದು ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ಜನಜಾಗೃತಿ ವೇದಿಕೆಯ ತ್ರೈಮಾಸಿಕ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ವೃಷಭರಾಜ ಕಡಂಬ ಅವರು ಜೇಸಿಐ ಕಾರ್ಕಳದ ಪೂರ್ವಾಧ್ಯಕ್ಷರಾಗಿ, ಜೇಸಿ ಎಜ್ಯುಕೇಶನ್‌ ಸೊಸೈಟಿಯ ನಿರ್ದೇಶಕರಾಗಿ, ಶ್ರೀ ದುರ್ಗಾಪರಮೇಶ್ವರಿ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ, ಶತಮಾನ ಕಂಡ ಶ್ರೀ ದುರ್ಗಾ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಂದೂರು ಇದರ ಹಳೆವಿದ್ಯಾರ್ಥಿ ಸಂಘ

ಕಾರ್ಕಳ ತಾಲೂಕು ಜನಜಾಗೃತಿ ವೇದಿಕೆ ನೂತನ ಅಧ್ಯಕ್ಷರಾಗಿ ವೃಷಭರಾಜ ಕಡಂಬ Read More »

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ – ಕೇಂದ್ರ ಸರ್ಕಾರದ ಸಂಪೂರ್ಣ ವೈಫಲ್ಯ

ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟ ಸಲ್ಲದು – ಉದಯ ಶೆಟ್ಟಿ ಮುನಿಯಾಲು ಕಾರ್ಕಳ : ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಕೇಂದ್ರ ಸರ್ಕಾರದ ಸಂಪೂರ್ಣ ವೈಫಲ್ಯವನ್ನು ಸೂಚಿಸುತ್ತದೆ. ದೇಶದ ಅತ್ಯುನ್ನತ ಪ್ರವೇಶ ಪರೀಕ್ಷೆ ಅಂದುಕೊಂಡಿರುವ ನೀಟ್ ಪರೀಕ್ಷಾ ವ್ಯವಸ್ಥೆಯ ಭದ್ರತೆಯನ್ನೇ ಕಾಪಾಡುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರ ಇನ್ನು ದೇಶದ ಭದ್ರತೆಯನ್ನು ಕಾಪಾಡಲು ಸಾಧ್ಯವೇ ಎಂದು ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಆತಂಕ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮಪಟ್ಟು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ – ಕೇಂದ್ರ ಸರ್ಕಾರದ ಸಂಪೂರ್ಣ ವೈಫಲ್ಯ Read More »

ನೀಟ್‌ ಪ್ರಶ್ನಾಪತ್ರಿಕೆ ಸೋರಿಕೆಗೆ ಮೋದಿ ಸರಕಾರದ ಬಂಡವಾಳಶಾಹಿ ಪ್ರಾಯೋಜಿತ ಬೇಜವಾಬ್ದಾರಿ ಆಡಳಿತವೇ ನೇರ ಕಾರಣ – ಬಿಪಿನ್‌ಚಂದ್ರಪಾಲ್‌ ನಕ್ರೆ

ಕಾರ್ಕಳ : ದೇಶದ ಲಕ್ಷಾಂತರ ವೈದ್ಯಕೀಯ ಶಿಕ್ಷಣಾಕಾಂಕ್ಷಿ ಪರೀಕ್ಷಾರ್ಥಿಗಳ ಪರಿಶ್ರಮಕ್ಕೆ ಕೊಳ್ಳಿ ಇಟ್ಟು ಅವರ ಕನಸನ್ನು ಭಗ್ನಗೊಳಿಸಿದ ನೀಟ್‌ ಪ್ರಶ್ನಾಪತ್ರಿಕೆ ಸೋರಿಕೆ ಹಗರಣಕ್ಕೆ ಪ್ರಧಾನಿ ಮೋದಿ ಸರಕಾರದ ಬಂಡವಾಳಶಾಹಿ ಪ್ರಾಯೋಜಿತ ಬೇಜವಾಬ್ದಾರಿ ಆಡಳಿತವೇ ನೇರ ಕಾರಣವಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್‌ಚಂದ್ರಪಾಲ್‌ ನಕ್ರೆ ಆರೋಪಿಸಿದೆ. ಭ್ರಷಾಚಾರದ ಸ್ಪಷ್ಟ ಸಂದೇಶಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿಯವರ ಮಹತ್ವಾಕಾಂಕ್ಷೆಯ ಸಿಇಟಿಯಿಂದ ಗ್ರಾಮೀಣ ಪರಿಸರದ ಕಡು ಬಡವರೂ ವೈದ್ಯರಾಗುವ ಅವಕಾಶವನ್ನು ಪಡೆದಿದ್ದರು. ಆದರೆ ಕೇಂದ್ರದ ಬಿಜೆಪಿ ಸರಕಾರ ಖಾಸಗೀ ವೈದ್ಯಕೀಯ

ನೀಟ್‌ ಪ್ರಶ್ನಾಪತ್ರಿಕೆ ಸೋರಿಕೆಗೆ ಮೋದಿ ಸರಕಾರದ ಬಂಡವಾಳಶಾಹಿ ಪ್ರಾಯೋಜಿತ ಬೇಜವಾಬ್ದಾರಿ ಆಡಳಿತವೇ ನೇರ ಕಾರಣ – ಬಿಪಿನ್‌ಚಂದ್ರಪಾಲ್‌ ನಕ್ರೆ Read More »

error: Content is protected !!
Scroll to Top