• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕಾರ್ಕಳ ಸುದ್ದಿ

ಸರಳ ಮೋಟರ್ಸ್ ಮಾಲಕ ಎಂ. ಕೆ. ರತ್ನಾಕರ್‌ ನಿಧನ

ಕಾರ್ಕಳ : ಸರಳ ಮೋಟಾರ್ಸ್‌ ಮಾಲಕ, ಕಾರ್ಕಳ ದಾನಶಾಲೆ ನಿವಾಸಿ ಎಂ.ಕೆ. ರತ್ನಾಕರ್‌ (82) ಎ. 19ರಂದು ನಿಧನ ಹೊಂದಿದರು. ಕಾರ್ಕಳದ ಗ್ರಾಮೀಣ ಪ್ರದೇಶಗಳಿಗೆ ಪ್ರಥಮವಾಗಿ ಬಸ್‌ ಸೇವೆ ಕಲ್ಪಿಸಿದ ರತ್ನಾಕರ್‌ ಅವರು ತನ್ನ ಧಾರ್ಮಿಕ, ಸಾಮಾಜಿಕ ಕಾರ್ಯಗಳಿಂದಾಗಿ ಜನಾನುರಾಗಿಯಾಗಿದ್ದರು. ಬಾಹುಬಲಿ ಮಹಾಮಸ್ತಕಾಭಿಷೇಕ ಸಂದರ್ಭವೂ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು. ಮೃತರು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸಾರ್ವಜನಿಕರು ಮೃತರ ಅಂತಿಮ ದರ್ಶನ ಪಡೆಯಲು ಕಾರ್ಕಳ ದಾನಶಾಲೆಯ ಮನೆಯಲ್ಲಿ ಬೆಳಿಗ್ಗೆ 10 ಗಂಟೆಯವರೆಗೆ ಅವಕಾಶವಿದ್ದು, ತದನಂತರ ಮರೋಡಿಯಲ್ಲಿ 1 ಗಂಟೆಗೆ ಅಂತ್ಯಕ್ರಿಯೆ […]

ಸರಳ ಮೋಟರ್ಸ್ ಮಾಲಕ ಎಂ. ಕೆ. ರತ್ನಾಕರ್‌ ನಿಧನ Read More »

ಸಿಬಿಎಸ್‌ಇ ಫಲಿತಾಂಶ – ರವಿಶಂಕರ ವಿದ್ಯಾಮಂದಿರದ ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ

ಕಾರ್ಕಳ : 2025–26ರ ಸಿಬಿಎಸ್‌ಇ ಹತ್ತನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರವು ಸತತವಾಗಿ ಶೇ. 100 ಫಲಿತಾಂಶ ದಾಖಲಿಸಿಕೊಂಡು ಬಂದಿದೆ. ಈ ಬಾರಿ ಪರೀಕ್ಷೆಗೆ ಹಾಜರಾದ 40 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ಮನಸ್ವಿ ಎಂ. ದೇವಾಡಿಗ 92.6% ಅಂಕದೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.ಅನನ್ಯ ನಾಯಕ್ 91.4% ಅಂಕ ಗಳಿಸುವುದರೊಂದಿಗೆ ಶಾಲೆಗೆ ದ್ವಿತೀಯ ಸ್ಥಾನಿಯಾಗಿದ್ದಾರೆ. ಸ್ವಪ್ನಿಲ್ ಶೆಟ್ಟಿ 91%, ಪರೀಕ್ಷಿತ್ ಬಿ. ಶೆಟ್ಟಿಗಾರ್ 90.8%, ವೃದ್ಧಿ ಪೈ 89.8%, ವಿಯೋನ್ ಶನಲ್ ಡಿ.

ಸಿಬಿಎಸ್‌ಇ ಫಲಿತಾಂಶ – ರವಿಶಂಕರ ವಿದ್ಯಾಮಂದಿರದ ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ Read More »

ನನಗೂ ಪ್ರಧಾನಿಗೂ ಪತ್ನಿ ಸಮಸ್ಯೆ ಇಲ್ಲ – ಸದನವನ್ನು ನಗೆಗಡಲಲ್ಲಿ ತೇಲಿಸಿದ ರಾಹುಲ್‌

ನವದೆಹಲಿ : ಸಂಸತ್‌ ಅಧಿವೇಶನ ಶುಕ್ರವಾರ ಕೆಲ ಸ್ವಾರಸ್ಯಕರ ಘಟನೆಗಳಿಗೆ ಸಾಕ್ಷಿಯಾಗಿದ್ದು ವಿಪಕ್ಷ ನಾಯಕ ರಾಹುಲ್ ಗಾಂಧಿ ತಮ್ಮ ಮಾತುಗಳ ಮೂಲಕ ಇಡೀ ಸದನವನ್ನು ಕೆಲಕಾಲ ನಗೆಗಡಲಲ್ಲಿ ತೇಲಿಸಿದರು.ಮಹಿಳಾ ಕೋಟಾ ಕಾನೂನಿಗೆ ತಿದ್ದುಪಡಿ ಸೇರಿದಂತೆ ಮೂರು ಮಸೂದೆಗಳ ಕುರಿತು ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನನಗೂ-ಪ್ರಧಾನಿ ಮೋದಿಗೂ ಪತ್ನಿ ಸಮಸ್ಯೆ ಇಲ್ಲ. ಹಾಗಾಗಿ ನಮಗೆ ಆ ಮಾಹಿತಿ ಸಿಗುವುದಿಲ್ಲ. ಆದರೆ, ನಮಗೆ ನಮ್ಮ ತಾಯಂದಿರು ಮತ್ತು ಸಹೋದರಿಯರು ಇದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ

ನನಗೂ ಪ್ರಧಾನಿಗೂ ಪತ್ನಿ ಸಮಸ್ಯೆ ಇಲ್ಲ – ಸದನವನ್ನು ನಗೆಗಡಲಲ್ಲಿ ತೇಲಿಸಿದ ರಾಹುಲ್‌ Read More »

ಮಾರಕಾಸ್ತ್ರದೊಂದಿಗೆ ಹೊಂಚು ಹಾಕುತ್ತಿದ್ದ ಇಬ್ಬರ ಬಂಧನ

ಕಾರ್ಕಳ: ಸಾರ್ವಜನಿಕ ಸ್ಥಳದಲ್ಲಿ ಮುಖಕ್ಕೆ ಬಟ್ಟೆ ಕಟ್ಟಿ, ಮಾರಕಾಸ್ತ್ರದೊಂದಿಗೆ ಅನುಮಾನಾಸ್ಪದವಾಗಿ ಹೊಂಚು ಹಾಕುತ್ತಿದ್ದ ಇಬ್ಬರು ಆರೋಪಿಗಳನ್ನು ಕಾರ್ಕಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.​ಕೊಪ್ಪಳ ಜಿಲ್ಲೆಯ ಗಂಗಾವತಿಯ ಹನುಮಪ್ಪ (29) ಹಾಗೂ ಕನಕಗಿರಿ ತಾಲೂಕಿನ ಮರಿಯಪ್ಪ (32) ಬಂಧಿತ ಆರೋಪಿಗಳು.​ಘಟನೆಯ ವಿವರ:​ಗುರುವಾರ ರಾತ್ರಿ ನಗರ ಪೊಲೀಸ್ ಉಪನಿರೀಕ್ಷಕ ಮುರಳೀಧರ ನಾಯ್ಕ್ ಹಾಗೂ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಈ ಕಾರ್ಯಾಚರಣೆ ನಡೆದಿದೆ. ರಾತ್ರಿ 8:10ರ ಸುಮಾರಿಗೆ ಕಾರ್ಕಳ ಬಸ್‌ ನಿಲ್ದಾಣದ ಸಮೀಪವಿರುವ ಹೂವಿನ ಅಂಗಡಿಯ ಎದುರಿನ ಗೂಡಂಗಡಿಯ ಹಿಂಭಾಗದಲ್ಲಿ ಈ ಇಬ್ಬರು

ಮಾರಕಾಸ್ತ್ರದೊಂದಿಗೆ ಹೊಂಚು ಹಾಕುತ್ತಿದ್ದ ಇಬ್ಬರ ಬಂಧನ Read More »

ಅಂಬೇಡ್ಕರ್ ಜಯಂತಿ ಆಚರಣೆಗೆ ಶಾಸಕರ ಗೈರು : ದಲಿತ ಮುಖಂಡರ ಬೇಸರ

ಕಾರ್ಕಳ : ಕಾಬೆಟ್ಟುವಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಂಬೇಡ್ಕರ್ ಭವನದಲ್ಲಿ ಕಾರ್ಕಳ ತಾಲೂಕು ಆಡಳಿತ ವತಿಯಿಂದ ಮೊದಲ ಬಾರಿಗೆ ಹಮ್ಮಿಕೊಳ್ಳಲಾದ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆಗೆ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಗೈರು ಹಾಜರಾಗಿರುವುದಕ್ಕೆ ದಲಿತ ಸಮಾಜದ ಮುಖಂಡರು ಬೇಸರ ವ್ಯಕ್ತಪಡಿಸಿರುತ್ತಾರೆ. ಶಾಸಕರು ತನ್ನ ಪಕ್ಷದ ಕಚೇರಿಯಲ್ಲಿದ್ದರೂ ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸದೇ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಮಾತ್ರವಲ್ಲ ಇಡೀ ದಲಿತ ಸಮಾಜವನ್ನು ಅವಮಾನಿಸಿದ್ದಾರೆ. ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಶಾಸಕರ ಮೊದಲ ಕರ್ತವ್ಯವಾಗಿದೆ. ಅವರು ತಮ್ಮ

ಅಂಬೇಡ್ಕರ್ ಜಯಂತಿ ಆಚರಣೆಗೆ ಶಾಸಕರ ಗೈರು : ದಲಿತ ಮುಖಂಡರ ಬೇಸರ Read More »

ಅಂಬೇಡ್ಕರ್ ಮೆರವಣಿಗೆ ಮೇಲೆ ಕಾರು ಚಲಾಯಿಸಿದ ಮದ್ಯ ವ್ಯಸನಿ- ಮಗು ಸಾವು

ಚಿಕ್ಕಮಗಳೂರು : ಅಂಬೇಡ್ಕರ್ ಮೆರವಣಿಗೆಯಲ್ಲಿದ್ದವರ ಮೇಲೆ ಕಾರು ಹರಿದು 7 ವರ್ಷದ ಮಗು ಸಾನ್ವಿ ಸಾವನ್ನಪ್ಪಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಬಿಳೇಕಲ್ಲು ಗ್ರಾಮದಲ್ಲಿ ಮಂಗಳವಾರ ರಾತ್ರಿ‌ 11.30ರ ವೇಳೆಗೆ ಸಂಭವಿಸಿದೆ. ಘಟನೆಯಿಂದ 7 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಚಾಲಕ ಮದ್ಯವ್ಯಸನ ಮಾಡಿ ಕಾರು ಚಲಾಯಿಸಿರುವುದು ದುರ್ಘಟನೆಗೆ ಕಾರಣ ಎನ್ನಲಾಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿದ್ದಾರೆ. ಅಪಘಾತದ ಬಳಿಕ ಕಾರಿನಲ್ಲಿದ್ದ ಮತ್ತೋರ್ವ ಪರಾರಿಯಾಗಿದ್ದಾನೆ.ಘಟನೆ ಬಳಿಕ ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಮುಂಭಾಗ ಪ್ರಕ್ಷುಬ್ಧ ವಾತಾವರಣ

ಅಂಬೇಡ್ಕರ್ ಮೆರವಣಿಗೆ ಮೇಲೆ ಕಾರು ಚಲಾಯಿಸಿದ ಮದ್ಯ ವ್ಯಸನಿ- ಮಗು ಸಾವು Read More »

ಮಾಳ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್‌ ಜಯಂತಿ

ಕಾರ್ಕಳ : ಮಾಳ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್‌ ಜಯಂತಿ ಆಚರಿಸಲಾಯಿತು. ಮುಖ್ಯ ಶಿಕ್ಷಕಿ ಪೂರ್ಣಿಮಾ ಶೆಣೈ, ಸಹ ಶಿಕ್ಷಕಿ ಪ್ರತೀಕ್ಷಾ ಅವರು ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಬಗ್ಗೆ ಮಾಹಿತಿ ನೀಡಿದರು. ಅನುಪಮಾ, ಮಕ್ಕಳು, ಶಿಕ್ಷಕರು ಉಪಸ್ಥಿತರಿದ್ದರು.

ಮಾಳ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್‌ ಜಯಂತಿ Read More »

ವಿಕಾಸ ಜನಸೇವಾ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಕಾರ್ಕಳ : ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಕಾರ್ಕಳ ಶಾಸಕರ ಜನಸೇವಾ ಕಚೇರಿಯಲ್ಲಿ ಆಚರಿಸಲಾಯಿತು. ಮಾಜಿ ಸಚಿವ, ಶಾಸಕ ವಿ. ಸುನಿಲ್‌ ಕುಮಾರ್‌ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.ಪಕ್ಷದ ವಕ್ತಾರ, ನ್ಯಾಯವಾದಿ ರವಿಂದ್ರ ಮೊಯ್ಲಿಯವರು ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಕೇವಲ ಒಂದು ಸಮುದಾಯದ ನಾಯಕರಲ್ಲ, ಅವರು ಇಡೀ ರಾಷ್ಟ್ರದ ಆಸ್ತಿ. ಸಮಾನತೆ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯದ ಕುರಿತಾದ ಅವರ ಆಶಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ತಿಳಿಸಿದರು.ಬಿಜೆಪಿ

ವಿಕಾಸ ಜನಸೇವಾ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ Read More »

ಗೂಡ್ಸ್ ವಾಹನ ಡಿಕ್ಕಿ; ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿ ಸಾವು

ಹೆಬ್ರಿ: ರಸ್ತೆ ದಾಟುತ್ತಿದ್ದ ಶಾಲಾ ವಿದ್ಯಾರ್ಥಿನಿಯರಿಗೆ ಅತಿವೇಗವಾಗಿ ಬಂದ ಮಿನಿ ಗೂಡ್ಸ್‌ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ. ಮೃತಳನ್ನು ಪ್ರೀತಿ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ಅರ್ಪಣಾ ಎಂಬ ಮತ್ತೊಬ್ಬ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾರೆ.​ರಾಷ್ಟ್ರೀಯ ಹೆದ್ದಾರಿ 169A ರ ಹೆಬ್ರಿ ಎಸ್.ಆರ್. ಶಾಲೆಯ ಮುಂಭಾಗ ಈ ದುರ್ಘಟನೆ ಸಂಭವಿಸಿದೆ. ಉಡುಪಿ ಕಡೆಯಿಂದ ಬಸ್‌ನಲ್ಲಿ ಬಂದಿದ್ದ ವಿದ್ಯಾರ್ಥಿನಿಯರು ಶಾಲೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ, ಅದೇ ದಿಕ್ಕಿನಿಂದ ವಿರುದ್ಧ ದಿಕ್ಕಿನಲ್ಲಿ ಅತಿವೇಗವಾಗಿ

ಗೂಡ್ಸ್ ವಾಹನ ಡಿಕ್ಕಿ; ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿ ಸಾವು Read More »

ಪತ್ನಿಗೆ ಪತಿ ಹಾಗೂ ಅತ್ತೆ-ಮಾವನಿಂದ ದೈಹಿಕ, ಮಾನಸಿಕ ಕಿರುಕುಳ; ಪ್ರಕರಣ ದಾಖಲು

ಅಜೆಕಾರು: ಮೊಬೈಲ್ ಚಾಟಿಂಗ್ ವಿಷಯವಾಗಿ ಪ್ರಶ್ನಿಸಿದ್ದಕ್ಕೆ ಪತ್ನಿಗೆ ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆ ನೀಡಿ, ಜೀವ ಬೆದರಿಕೆ ಹಾಕಿದ ಆರೋಪದಡಿ ಪತಿ ಮತ್ತು ಅತ್ತೆ-ಮಾವನ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ದೀಪ್ತಿ (24) ಎಂಬುವವರು ದೂರು ನೀಡಿದ್ದು, ಆರೋಪಿಗಳನ್ನು ಪತಿ ದೀಪಕ್ ಶೆಟ್ಟಿ, ಅತ್ತೆ ಶೋಭ ಮತ್ತು ಮಾವ ನಾರಾಯಣ ಶೆಟ್ಟಿ ಎಂದು ಗುರುತಿಸಲಾಗಿದೆ. ಮದುವೆಯಾದ ಬಳಿಕ ಅಜೆಕಾರಿನಲ್ಲಿ ವಾಸವಿದ್ದಾಗ ಪತಿ ಸಮಾಜಿಕ ಜಾಲತಾಣಗಳಲ್ಲಿ ಅನ್ಯರೊಂದಿಗೆ ಚಾಟ್ ಮಾಡುತ್ತಿದ್ದನ್ನು ದೀಪ್ತಿ ಪ್ರಶ್ನಿಸಿದ್ದರು. ಈ

ಪತ್ನಿಗೆ ಪತಿ ಹಾಗೂ ಅತ್ತೆ-ಮಾವನಿಂದ ದೈಹಿಕ, ಮಾನಸಿಕ ಕಿರುಕುಳ; ಪ್ರಕರಣ ದಾಖಲು Read More »

error: Content is protected !!
Scroll to Top