• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕಾರ್ಕಳ ಸುದ್ದಿ

ಕಾರ್ಕಳ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಸಭೆ

ಕಾರ್ಕಳ : ಕನ್ನಡ ಸಾಹಿತ್ಯ ಪರಿಷತ್ ಕಾರ್ಕಳ ತಾಲೂಕು ಘಟಕದ ಪದಾಧಿಕಾರಿಗಳ ಸಭೆ ಆ.7ರಂದು ಹೋಟೆಲ್ ಪ್ರಕಾಶ್‌ನಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆ ವಹಿಸಿದ್ದ ಕಸಾಪ ತಾಲೂಕು ಘಟಕದ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಮಾತನಾಡಿ, ಕಾರ್ಕಳ ತಾಲೂಕಿನ ಜನರ ಸಾಹಿತ್ಯಾಸಕ್ತಿ ಹಾಗೂ ಕಾರ್ಯಕ್ರಮಗಳಿಗೆ ನೀಡುತ್ತಿರುವ ಸಹಕಾರ ಶ್ಲಾಘನೀಯವಾಗಿದೆ. ಇದುವರೆಗೆ ನಡೆದ ಎಲ್ಲ ಸಾಹಿತ್ಯ ಸಮ್ಮೇಳನಗಳು ಅಭೂತಪೂರ್ವ ಯಶಸ್ಸು ಕಂಡಿದ್ದು, ನಾಡು-ನುಡಿ ಸೇವೆಯಲ್ಲಿ ಕಸಾಪ ಸದಸ್ಯರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದರು. ಸಭೆಯಲ್ಲಿ ಕಸಾಪದ ಆಜೀವ ಸದಸ್ಯರ ತಾಲೂಕು ಸಮಾವೇಶ ಆಯೋಜಿಸುವುದು,

ಕಾರ್ಕಳ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಸಭೆ Read More »

ಮಲ್ಲಿಕಾರ್ಜುನ ಖರ್ಗೆ ರ‍್ಯಾಲಿ ನಡೆಸಿದ ಸ್ಥಳ ‘ಶುದ್ಧೀಕರಣ’ ದಲಿತ ವಿರೋಧಿ ಮನಸ್ಥಿತಿಯ ಪ್ರತೀಕ : ಕಾರ್ಕಳ ಕಾಂಗ್ರೆಸ್ ಆಕ್ರೋಶ

ಕಾರ್ಕಳ : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಬಳಿಕ, ಅದೇ ಸ್ಥಳದಲ್ಲಿ ಬಿಜೆಪಿ ಪರವಾದ ಸಂಘಟನೆಗಳಿಂದ ಪೂಜೆ ಹಾಗೂ ಹವನ ನಡೆಸಿ ‘ಶುದ್ಧೀಕರಣ’ ಮಾಡಿರುವ ಘಟನೆ ಖಂಡನೀಯ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದರು ಎನ್ನುವ ಏಕೈಕ ಕಾರಣಕ್ಕೆ ಬಿಜೆಪಿ ಪರ ಸಂಘಟನೆಗಳು ಸ್ಥಳವನ್ನು

ಮಲ್ಲಿಕಾರ್ಜುನ ಖರ್ಗೆ ರ‍್ಯಾಲಿ ನಡೆಸಿದ ಸ್ಥಳ ‘ಶುದ್ಧೀಕರಣ’ ದಲಿತ ವಿರೋಧಿ ಮನಸ್ಥಿತಿಯ ಪ್ರತೀಕ : ಕಾರ್ಕಳ ಕಾಂಗ್ರೆಸ್ ಆಕ್ರೋಶ Read More »

ಬಸ್‌ ನಿಲ್ದಾಣದಿಂದ ನಿಧಾನಗತಿಯಾಗಿ ಸಾಗುವ ಬಸ್‌ಗಳು – ಸಂಚಾರಕ್ಕೆ ದುಸ್ತರ

ನೇತಾಡಿಕೊಂಡೇ ಪ್ರಯಾಣಿಸುವ ವಿದ್ಯಾರ್ಥಿಗಳು – ರಸ್ತೆಯಲ್ಲೇ ತರಕಾರಿ ವ್ಯಾಪಾರ ಕಾರ್ಕಳ : ಉಡುಪಿ ಕಡೆಯಿಂದ ಶರವೇಗದಲ್ಲೇ ಕಾರ್ಕಳ ಬಸ್‌ ನಿಲ್ದಾಣ ಆಗಮಿಸುವ ಖಾಸಗಿ ಬಸ್‌ಗಳು ಬಳಿಕ ಅಲ್ಲಿಂದ ತೆರಳುವ ಅನಂತಶಯನವರೆಗೆ ಆಮೆಗತಿಯಲ್ಲಿ ಸಾಗುವುದು ಸಾಮಾನ್ಯವಾಗಿದೆ. ಬಸ್‌ ನಿಲ್ದಾಣದಿಂದ ಅನಂತಶಯನದವರೆಗೆ ಪ್ಯಾಸೆಂಜರ್‌ ಹತ್ತಿಸಿಕೊಳ್ಳುವ ಉದ್ದೇಶದಿಂದ ಬಸ್‌ಗಳು ಅತ್ಯಂತ ನಿಧಾನಗತಿಯಲ್ಲಿ ಮುಂದುವರಿಯುತ್ತಿದೆ. ಪ್ಯಾಸೆಂಜರ್‌ ಸಿಕ್ಕಲ್ಲಿ ಅಲ್ಲೇ ಬಸ್‌ಗೆ ಬ್ರೇಕ್‌ ಹೊಡೆಯಲಾಗುತ್ತಿದ್ದು, ಇದರಿಂದ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ, ಅಲ್ಲದೇ ರಸ್ತೆ ಅಪಘಾತಕ್ಕೂ ಕಾರಣವಾಗುತ್ತಿದೆ. ಕಾರ್ಕಳ ಬಸ್‌ ನಿಲ್ದಾಣಕ್ಕೆ ಟ್ರಾಫಿಕ್‌ ನಿಯಮವನ್ನು

ಬಸ್‌ ನಿಲ್ದಾಣದಿಂದ ನಿಧಾನಗತಿಯಾಗಿ ಸಾಗುವ ಬಸ್‌ಗಳು – ಸಂಚಾರಕ್ಕೆ ದುಸ್ತರ Read More »

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ದೇಶ ಭಕ್ತಿ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಿರುವುದು ಖಂಡನೀಯ – ಕಾರ್ಕಳ ಹಿಂಜಾವೇ

ಕಾರ್ಕಳ : ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭ ಹಿಂದು ಜಾಗರಣ ವೇದಿಕೆಯು ದೇಶ ಭಕ್ತಿಯನ್ನು ಜಾಗೃತಗೊಳಿಸುವ ಉದ್ದೇಶದಿಂದ ಆಯೋಜಿಸಿರುವ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅನಗತ್ಯ ನಿರ್ಬಂಧ ಹೇರಿರುವುದನ್ನು ಕಾರ್ಕಳ ಹಿಂದು ಜಾಗರಣ ವೇದಿಕೆ ತೀವ್ರವಾಗಿ ಖಂಡಿಸುತ್ತದೆ ಎಂದು ಹಿಂಜಾವೇ ತಾಲೂಕು ಸಂಯೋಜಕ ಸುಜಿತ್ ಸಪಲಿಗ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರವು ಉದ್ದೇಶಪೂರ್ವಕವಾಗಿ ಹಿಂದುಗಳ ಧಾರ್ಮಿಕ ಹಾಗೂ ರಾಷ್ಟ್ರಭಕ್ತಿ ಕಾರ್ಯಕ್ರಮಗಳಿಗೆ ಅಡ್ಡಿಪಡಿಸುತ್ತಿದೆ. ಹಿಂದು ಮುಖಂಡರು ಮತ್ತು ಕಾರ್ಯಕರ್ತರಿಂದ ಮಾತನಾಡುವ ಸ್ವಾತಂತ್ರ್ಯ, ಸಂಘಟಿಸುವ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಿರುವ

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ದೇಶ ಭಕ್ತಿ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಿರುವುದು ಖಂಡನೀಯ – ಕಾರ್ಕಳ ಹಿಂಜಾವೇ Read More »

ಅಖಂಡ ಭಾರತ ಸಂಕಲ್ಪ ದಿನ : ನಿರ್ಬಂಧದ ಬಗ್ಗೆ ಹಿಂದೂ ಜಾಗರಣ ವೇದಿಕೆ ಅಸಮಾಧಾನ

ಉಡುಪಿ : 80ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಕಾರ್ಕಳ ಹಾಗೂ ಕಾಪು-ಶಿರ್ವದಲ್ಲಿ ಆಯೋಜಿಸಲಾಗಿರುವ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಕೆಲ ಪ್ರಮುಖ ಭಾಷಣಕಾರರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿರ್ಬಂಧ ವಿಧಿಸಿರುವ ಜಿಲ್ಲಾಡಳಿತದ ಕ್ರಮದ ಬಗ್ಗೆ ಹಿಂದೂ ಜಾಗರಣ ವೇದಿಕೆ ಅಸಮಾಧಾನ ವ್ಯಕ್ತಪಡಿಸಿದೆ. ಕಾರ್ಕಳದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮಂಗಳೂರು ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಶೆಟ್ಟಿ ಮಾಣಿ ಹಾಗೂ ಕಾಪು-ಶಿರ್ವದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಬಜರಂಗದಳದ ಪುನೀತ್ ಪಂಪ್‌ವೆಲ್ ಆಗಮಿಸಬೇಕಿತ್ತು. ಆದರೆ ಇಬ್ಬರಿಗೂ ಜಿಲ್ಲೆಗೆ

ಅಖಂಡ ಭಾರತ ಸಂಕಲ್ಪ ದಿನ : ನಿರ್ಬಂಧದ ಬಗ್ಗೆ ಹಿಂದೂ ಜಾಗರಣ ವೇದಿಕೆ ಅಸಮಾಧಾನ Read More »

ಕಾರ್ಕಳ ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ

ಕಾರ್ಕಳ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ ಇದರ ಕಾರ್ಕಳ ವಲಯದ 31ನೇ ವಾರ್ಷಿಕ ಸಭೆ ಹೋಟೆಲ್ ಪ್ರಕಾಶ್‌ನಲ್ಲಿ ನಡೆಯಿತು. ಎಸ್‌ಕೆಪಿಎ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಅಧ್ಯಕ್ಷ ನವೀನ್ ರೈ ಪಂಜಾಳ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಅಸೋಸಿಯೇಷನ್‌ನ ವಿವಿಧ ಯೋಜನೆಗಳನ್ನು ಸದಸ್ಯರು ಸದುಪಯೋಗಪಡಿಸಿಕೊಳ್ಳಬೇಕು. ವಿಶೇಷವಾಗಿ ಛಾಯಾ ಸಾಂತ್ವನ ಯೋಜನೆಗೆ ಎಲ್ಲರೂ ಕೈಜೋಡಿಸುವ ಮೂಲಕ ಆಪತ್ಕಾಲದಲ್ಲಿ ಸದಸ್ಯರಿಗೆ ನೆರವಾಗುವಂತೆ ಸಹಕರಿಸಬೇಕು ಎಂದರು. ಕಾರ್ಯಕ್ರಮದ

ಕಾರ್ಕಳ ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ Read More »

ಕಾರ್ಕಳ ರಿಲಯನ್ಸ್ ಸ್ಮಾರ್ಟ್ ಬಜಾರ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿಶೇಷ ಆಫರ್‌

ಕಾರ್ಕಳ : ಕಾರ್ಕಳ ರಿಲಯನ್ಸ್ ಸ್ಮಾರ್ಟ್ ಬಜಾರ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಗಸ್ಟ್ 12 ರಿಂದ 16 ರವರೆಗೆ ವಿಶೇಷ ಆಫರ್‌ – ಫುಲ್‌ ಪೈಸಾ ವಸೂಲ್ ಸೇಲ್ ನಡೆಯಲಿದೆ.ಬಿಸ್ಕಿಟ್ಸ್‌ ಮತ್ತು ಸ್ನಾಕ್ಸ್, ಜ್ಯೂಸ್, ಟೀ-ಕಾಫಿ, ಹೆಲ್ದೀ ಡ್ರಿಂಕ್ಸ್‌, ಡ್ರೈ ಫ್ರುಟ್ಸ್‌, ಮಸಾಲೆ ಪದಾರ್ಥಗಳು, ಅಕ್ಕಿ, ಬೇಳೆಕಾಳುಗಳು, ಹಣ್ಣುಗಳು, ತರಕಾರಿಗಳು, ಪೂಜಾ ಸಾಮಗ್ರಿಗಳು, ಡೈರಿ ಮತ್ತು ಫ್ರೋಜನ್ ಉತ್ಪನ್ನಗಳು, ಶೂಟ್‌ಕೇಸ್‌, ಮಹಿಳೆಯರ, ಪುರುಷರ ಮತ್ತು ಮಕ್ಕಳ ಉಡುಪುಗಳು ಸೇರಿದಂತೆ ಇನ್ನಿತರ ಖರೀದಿಯ ಮೇಲೆ ಆಫರ್‌ ಇರಲಿದೆ.

ಕಾರ್ಕಳ ರಿಲಯನ್ಸ್ ಸ್ಮಾರ್ಟ್ ಬಜಾರ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿಶೇಷ ಆಫರ್‌ Read More »

ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಜೀವನ ಆಧಾರಿತ ಕಥೆ ಮತ್ತೆ ತೆರೆಗೆ

ʼಪೊಲೀಸ್ ಕಂಪನಿ’ ಸಿನಿಮಾ ಘೋಷಿಸಿದ ಆರ್​ಜಿವಿ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಮತ್ತೊಂದು ಕುತೂಹಲಕಾರಿ ಸಿನಿಮಾ ‘ಪೊಲೀಸ್ ಕಂಪನಿ’ ಘೋಷಿಸಿದ್ದಾರೆ. ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಅವರ ರಿಯಲ್ ಜೀವನದ ಪಾತ್ರದಿಂದ ಈ ಕಥೆ ಪ್ರೇರಿತವಾಗಿದೆ. ದಯಾ ನಾಯಕ್ ಪಾತ್ರದಲ್ಲಿ ಪ್ರಸಿದ್ಧ ನಟ ಹರ್ಷವರ್ಧನ್ ರಾಣೆ ಅಭಿನಯಿಸಲಿದ್ದಾರೆ. ದಯಾ ನಾಯಕ್ ಅವರು ಮುಂಬೈ ಪೊಲೀಸ್ ಇಲಾಖೆಯ ಅತ್ಯಂತ ಪ್ರಸಿದ್ಧ ಎನ್‌ಕೌಂಟರ್ ಸ್ಪೆಷಲಿಸ್ಟ್ ಮತ್ತು ನಿವೃತ್ತ ಸಹಾಯಕ ಪೊಲೀಸ್ ಆಯುಕ್ತರಾಗಿದ್ದಾರೆ. ಕಾರ್ಕಳ ತಾಲೂಕಿನ ಎಣ್ಣೆಹೊಳೆಯವರಾದದ ಇವರು ಮುಂಬೈನ

ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಜೀವನ ಆಧಾರಿತ ಕಥೆ ಮತ್ತೆ ತೆರೆಗೆ Read More »

ಆ. 15 : ಕೌಡೂರು ಯುವಸಂಗಮ – 4ನೇ ವರ್ಷದ ಕೆಸರ್‌ದ ಕಸರತ್ತ್‌

ತಾಲೂಕು ಮಟ್ಟದ ಪುರುಷರ ಹಗ್ಗಜಗ್ಗಾಟ ಕಾರ್ಕಳ : ಕೌಡೂರು ಯುವ ಸಂಗಮ ವತಿಯಿಂದ 4ನೇ ವರ್ಷದ ಕೆಸರ್‌ದ ಕಸರತ್ತ್‌ ಕಾರ್ಯಕ್ರಮ ಆ. 15ರಂದು ಕೌಡೂರು ಬಾಣಾಲ್‌ ಶ್ರೀ ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ಸ್ಥಾನದ ಮುಂಭಾಗದ ಗದ್ದೆಯಲ್ಲಿ ನೆರವೇರಲಿದೆ. ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಸ್ಪರ್ಧೆಗಳು ನಡೆಯಲಿದೆ. ಈ ಸಂದರ್ಭ ಪ್ರಗತಿ ಪರ ಕೃಷಿಕ ಸುಧಾಕರ್‌ ಪೂಜಾರಿಯವರನ್ನು ಸನ್ಮಾನಿಸಲಾಗುವುದು. ದಿ. ಕೃಷ್ಣರಾಜ ಹೆಗ್ಡೆಯವರ ಸ್ಮರಣಾರ್ಥ ತಾಲೂಕು ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದ್ದು, ಪ್ರಥಮ ವಿಜೇತರಿಗೆ 9,999 ರೂ. ನಗದು ಮತ್ತು

ಆ. 15 : ಕೌಡೂರು ಯುವಸಂಗಮ – 4ನೇ ವರ್ಷದ ಕೆಸರ್‌ದ ಕಸರತ್ತ್‌ Read More »

ಬೈಲೂರು ಶ್ರೀ ವಿನಾಯಕ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ – ಆಟಿಡೊಂಜಿ ದಿನ

ಕಾರ್ಕಳ : ಬೈಲೂರು ಶ್ರೀ ವಿನಾಯಕ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ಶಾಲಿನಿ ಸುಕೇಶ್ ಪೂಜಾರಿ, ಕಾರ್ಕಳ ಸಂಗಮ ಸಂಜೀವಿನಿ ತಾಲೂಕು ಮಟ್ಟದ ಅಧ್ಯಕ್ಷ ರೇವತಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ, ಸಂಜೀವಿನಿ ಸದಸ್ಯೆ ನೀರೆ ಬೈಲೂರಿನ ಮಾಲಿನಿ ಜೆ. ಶೆಟ್ಟಿ, ಜೀವನೋಪಾಯ ಸಮಿತಿಯ ಅಧ್ಯಕ್ಷ ತಸ್ವಿನ್ ಹಾಗೂ ಕಾರ್ಯದರ್ಶಿ ಸರೋಜ ಇವರೆಲ್ಲರೂ ಉಪಸ್ಥಿತರಿದ್ದರು. ಸುಜಾತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಚೇತನಾ ಸ್ವಾಗತಿಸಿದರು. ಸಂಜೀವಿನಿ ಸದಸ್ಯರಾದ

ಬೈಲೂರು ಶ್ರೀ ವಿನಾಯಕ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ – ಆಟಿಡೊಂಜಿ ದಿನ Read More »

error: Content is protected !!
Scroll to Top