• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ದೇಶ

ಜೈಲು ಪಾಲಾದ್ರೆ CM, PM ಕುರ್ಚಿ ಖಾಲಿ: ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಹೈಡ್ರಾಮಾ ಫಿಕ್ಸ್..!

ನವದೆಹಲಿ: ನ್ಯಾಯಾಂಗ ಬಂಧನದಲ್ಲಿರುವ ಪ್ರಧಾನಿ ಹಾಗೂ ಮುಖ್ಯಮಂತ್ರಿಗಳನ್ನು ಅನರ್ಹಗೊಳಿಸುವ ಉದ್ದೇಶದ 130ನೇ ಸಂವಿಧಾನ ತಿದ್ದುಪಡಿ ಮಸೂದೆ ಮತ್ತೆ ಸಂಸತ್ತಿನಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.ಈ ವಿವಾದಾತ್ಮಕ ಮಸೂದೆಯನ್ನು ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿ (JPC) ತನ್ನ ವರದಿಯನ್ನು ಅಂತಿಮಗೊಳಿಸುವ ಹಂತದಲ್ಲಿದ್ದು, ಪ್ರಸಕ್ತ ಸಾಲಿನ ಮುಂಗಾರು ಅಧಿವೇಶನದಲ್ಲೇ ಮಸೂದೆಯನ್ನು ಸರ್ಕಾರ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಜುಲೈ 20ರಿಂದ 27ರೊಳಗೆ ಆರಂಭವಾಗುವ ನಿರೀಕ್ಷೆಯಿರುವ ಮುಂಗಾರು ಅಧಿವೇಶನದಲ್ಲಿ ಈ ಮಸೂದೆಗೆ ಆದ್ಯತೆ ನೀಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ […]

ಜೈಲು ಪಾಲಾದ್ರೆ CM, PM ಕುರ್ಚಿ ಖಾಲಿ: ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಹೈಡ್ರಾಮಾ ಫಿಕ್ಸ್..! Read More »

ಜು. 20ರಿಂದ ಸಂಸತ್ ಮುಂಗಾರು ಅಧಿವೇಶನ ಸಾಧ್ಯತೆ

ದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 20ರಿಂದ ಆಗಸ್ಟ್ 13ರವರೆಗೆ ನಡೆಯುವ ಸಾಧ್ಯತೆ ಇದ್ದು, ಈ ಕುರಿತು ಕೇಂದ್ರ ಸರ್ಕಾರ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸುವ ನಿರೀಕ್ಷೆಯಿದೆ. ಸುಮಾರು ನಾಲ್ಕು ವಾರಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಹಲವು ಮಹತ್ವದ ಮಸೂದೆಗಳು ಕುರಿತು ಚರ್ಚೆ ನಡೆಯಲಿದೆ. ಈ ಬಾರಿಯ ಅಧಿವೇಶನದಲ್ಲಿ ಮಹಿಳೆಯರಿಗೆ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ 33% ಮೀಸಲಾತಿ ಜಾರಿಗೊಳಿಸುವ ಸಂವಿಧಾನ ತಿದ್ದುಪಡಿ ಮಸೂದೆ ಹಾಗೂ ಅದಕ್ಕೆ ಸಂಬಂಧಿಸಿದ ಕ್ಷೇತ್ರ ಪುನರ್‌ವಿಂಗಡನೆ ಮಸೂದೆಯನ್ನು ಕೇಂದ್ರ ಸರ್ಕಾರ

ಜು. 20ರಿಂದ ಸಂಸತ್ ಮುಂಗಾರು ಅಧಿವೇಶನ ಸಾಧ್ಯತೆ Read More »

2027ರ ಹಜ್ ಯಾತ್ರೆಗೆ ಅರ್ಜಿ ಸಲ್ಲಿಕೆ – ಜುಲೈ 20 ಕೊನೆ ದಿನ

ಬೆಂಗಳೂರು : 2027ರ ಪವಿತ್ರ ಹಜ್ ಯಾತ್ರೆಯ ಅರ್ಜಿ ನಮೂನೆಗಳನ್ನು ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಭಾರತದ ಹಜ್ ಸಮಿತಿಯ ಮಾಹಿತಿಯ ಪ್ರಕಾರ, ಅರ್ಜಿಗಳ ಸಲ್ಲಿಕೆಗೆ ಜುಲೈ 20 ಕೊನೆಯ ದಿನವಾಗಿದೆ. ಆದುದರಿಂದ, 2027ರಲ್ಲಿ ಹಜ್ಗೆ ಹೋಗಲು ಉದ್ದೇಶಿಸಿರುವವರು ನಿಗದಿತ ಸಮಯಕ್ಕಿಂತ ಮೊದಲು ತಮ್ಮ ಅರ್ಜಿಗಳನ್ನು ಆನ್ ಲೈನ್ ನಲ್ಲಿ ಸಲ್ಲಿಸಲು ರಾಜ್ಯ ಹಜ್ ಸಮಿತಿ ಅಧ್ಯಕ್ಷ ಝುಲ್ಫಿಕಾರ್ ಅಹ್ಮದ್ ಖಾನ್ ವಿನಂತಿಸಿದ್ದಾರೆ. ಅರ್ಜಿ ಸಲ್ಲಿಸಲು ಬಯಸುವವರು ಅಂತಾರಾಷ್ಟ್ರೀಯ ಪಾಸ್ಪೋರ್ಟ್ ಹೊಂದಿರುವುದು ಅವಶ್ಯಕ. ನಿಮ್ಮ ಬಳಿ ಪಾಸ್ ಪೋರ್ಟ್

2027ರ ಹಜ್ ಯಾತ್ರೆಗೆ ಅರ್ಜಿ ಸಲ್ಲಿಕೆ – ಜುಲೈ 20 ಕೊನೆ ದಿನ Read More »

ಇಂದಿನಿಂದ ʼವಿಬಿ-ಜಿ ರಾಮ್‌ ಜಿʼ ಜಾರಿ – 125 ದಿನಗಳ ಕೆಲಸ

ದೆಹಲಿ : ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಕಾಯ್ದೆಯ (ನರೇಗಾ) ಬದಲಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ– ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯು ದೇಶದಾದ್ಯಂತ ಇಂದಿನಿಂದಲೇ (ಜು. 1) ಅನುಷ್ಠಾನಕ್ಕೆ ಬರಲಿದೆ. ಹೊಸ ಕಾಯ್ದೆಯಡಿ ಪರಿಷ್ಕೃತ ವೇತನ ದರಗಳನ್ನು ಮಂಗಳವಾರ ಪ್ರಕಟಿಸಲಾಗಿದೆ. ರಾಷ್ಟ್ರೀಯ ಸರಾಸರಿ ವೇತನ, ನರೇಗಾ ಅಡಿಯಲ್ಲಿ ದಿನಕ್ಕೆ ₹298.8ಗಳಿಂದ ಈಗ ವಿಬಿ-ಜಿ ರಾಮ್ ಜಿ ಅಡಿಯಲ್ಲಿ ದಿನಕ್ಕೆ 327.4ಗಳಿಗೆ ಏರಿಕೆ ಮಾಡಲಾಗಿದೆ. ಅಂದರೆ

ಇಂದಿನಿಂದ ʼವಿಬಿ-ಜಿ ರಾಮ್‌ ಜಿʼ ಜಾರಿ – 125 ದಿನಗಳ ಕೆಲಸ Read More »

ವಾಣಿಜ್ಯ ಬಳಕೆಯ ಎಲ್‌ಪಿಜಿ ದರದಲ್ಲಿ ಇಳಿಕೆ

ದೆಹಲಿ : ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ಕೇಂದ್ರ ಇಂದಿನಿಂದ ಜಾರಿಗೆ ಬರುವಂತೆ ದರದಲ್ಲಿ 183.50 ರೂ. ಇಳಿಕೆ ಮಾಡಿದೆ. ಇಂದಿನಿಂದ (ಜು. 1) ಜಾರಿಗೆ ಬರುವಂತೆ 19 ಕೆ.ಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 183.50 ರೂ. ಇಳಿಕೆ ಮಾಡಲಾಗಿದೆ. ಈ ಮೂಲಕ 3,113.50 ರೂ. ಇದ್ದ ಸಿಲಿಂಡರ್ ಬೆಲೆ ಈಗ 2,930 ರೂ.ಗೆ ಇಳಿದಿದೆ. ಆದರೆ ತೈಲ ಕಂಪನಿಗಳು ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ವಾಣಿಜ್ಯ ಬಳಕೆಯ ಎಲ್‌ಪಿಜಿ ದರದಲ್ಲಿ ಇಳಿಕೆ Read More »

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಮುಸ್ಲಿಂ ಇದ್ದಿದ್ರೆ ಇಷ್ಟೊತ್ತಿಗೆ ಎನ್‌ಕೌಂಟರ್‌ ಮಾಡ್ತಿದ್ರು : ಓವೈಸಿ ವಾಗ್ದಾಳಿ

ದೆಹಲಿ : ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಶ್ಚಿಮ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಓವೈಸಿ, ರಾಮಮಂದಿರ ಟ್ರಸ್ಟ್‌ನಲ್ಲಿ ಮುಸ್ಲಿಂ ಇದ್ದಿದ್ದರೆ, ಸರ್ಕಾರವು ಈಗ ಅವನನ್ನು ಎನ್‌ಕೌಂಟರ್‌ನಲ್ಲಿ ಗುಂಡಿಕ್ಕಿ ಕೊಂದು ಮನೆಯನ್ನು ನೆಲಸಮ ಮಾಡುತ್ತಿತ್ತು ಎಂದು ವ್ಯಂಗ್ಯವಾಡಿದ್ದಾರೆ. ಪ್ರಕರಣದಲ್ಲಿ ಕ್ರಮಕೈಗೊಳ್ಳಲು ಪೊಲೀಸರು ವಿಳಂಬ ಮಾಡುತ್ತಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳನ್ನು ಕಸ್ಟಡಿಗೆ ಪಡೆಯಲು ಪ್ರಯತ್ನಿಸುತ್ತಿಲ್ಲ. ಅವರು ಒಬ್ಬ ಮುಸಲ್ಮಾನನನ್ನು ಟ್ರಸ್ಟ್‌ನಲ್ಲಿ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಮುಸ್ಲಿಂ ಇದ್ದಿದ್ರೆ ಇಷ್ಟೊತ್ತಿಗೆ ಎನ್‌ಕೌಂಟರ್‌ ಮಾಡ್ತಿದ್ರು : ಓವೈಸಿ ವಾಗ್ದಾಳಿ Read More »

ಪಾಸ್ಪೋರ್ಟ್ ಪೌರತ್ವದ ಪುರಾವೆಯಲ್ಲ – ಕೇಂದ್ರ ಸರಕಾರ

ದೆಹಲಿ : ಭಾರತೀಯ ಪಾಸ್ಪೋರ್ಟ್ ಪೌರತ್ವದ ನಿರ್ಣಾಯಕ ಪುರಾವೆಯಲ್ಲ ಎಂದು ಕೇಂದ್ರ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಈ ಹೇಳಿಕೆ ಹೊಸದೇನಲ್ಲ. ಹಲವು ದಶಕಗಳಿಂದಲೂ ಸರ್ಕಾರ ಹಾಗೂ ನ್ಯಾಯಾಲಯಗಳು ಇದೇ ಕಾನೂನು ನಿಲುವನ್ನು ಅನುಸರಿಸುತ್ತಿದ್ದು, ಪೌರತ್ವವನ್ನು ಸಾಬೀತುಪಡಿಸಲು ಯಾವ ದಾಖಲೆಗಳು ಮಾನ್ಯ ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಕಳೆದ ಕೆಲವು ತಿಂಗಳುಗಳಿಂದ ಭಾರತೀಯ ಪೌರತ್ವದ ಪ್ರಶ್ನೆ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಈ ಹಿನ್ನೆಲೆಯಲ್ಲಿ ಪಾಸ್ಪೋರ್ಟ್ ಕುರಿತು ಕೇಂದ್ರ ಸರ್ಕಾರ ತನ್ನ ಹಳೆಯ ನಿಲುವನ್ನೇ ಪುನರುಚ್ಚರಿಸಿದೆ. ಅತ್ಯಂತ ಕಟ್ಟುನಿಟ್ಟಿನ

ಪಾಸ್ಪೋರ್ಟ್ ಪೌರತ್ವದ ಪುರಾವೆಯಲ್ಲ – ಕೇಂದ್ರ ಸರಕಾರ Read More »

ಜೂ.28 – ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

ಉಡುಪಿ : 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ ಜೂ.28 ರಂದು ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ) ಅಭಿಯಾನ ನಡೆಯಲಿದೆ. ಭಾರತವು ಕಳೆದ 14 ವರ್ಷಗಳಿಗೂ ಮೇಲ್ಪಟ್ಟು ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ, ಜಗತ್ತಿನ ಕೆಲವು ಭಾಗಗಳಲ್ಲಿ ಹಾಗೂ ಭಾರತದ ನೆರೆ ರಾಷ್ಟ್ರಗಳಲ್ಲಿ ವೈಲ್ಡ್ ಪೋಲಿಯೋ ವೈರಸ್ ಹರಡುವಿಕೆ ಇನ್ನೂ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅಭಿಯಾನವನ್ನು ನಡೆಸಲಾಗುತ್ತಿದೆ. ಮೊದಲು ಜೂ. 28 ರಂದು ಪೋಲಿಯೋ ಬೂತ್‌ಗಳಲ್ಲಿ ಲಸಿಕೆ ನೀಡಲಾಗುವುದು. ನಂತರ 2-3

ಜೂ.28 – ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ Read More »

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ : ನೋಂದಣಿಗೆ ಸೂಚನೆ

ಉಡುಪಿ : ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಸ್ಥಳಿಯಾಡಳಿತ ಸಂಸ್ಥೆಗಳಲ್ಲಿ ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ 75,600 ರೂ. ಗಳಂತೆ ವಿಮಾ ಕಂತಿನ ದರವನ್ನು ಪ್ರತಿ ಹೆ.ಗೆ 1512 (2%) ರೂ. ಗಳಂತೆ ನಿಗದಿಪಡಿಸಿದ್ದು, ನೋಂದಣಿಗಾಗಿ ಅಧಿಸೂಚಿಸಲಾಗಿರುತ್ತದೆ. ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆ

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ : ನೋಂದಣಿಗೆ ಸೂಚನೆ Read More »

ನೀಟ್‌ ಮರುಪರೀಕ್ಷೆ ಬರೆಯಲು ಬಂದಿದ್ದ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಅರೆಸ್ಟ್‌

ಪಾಟ್ನಾ : ಬಿಹಾರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಿನ್ನೆ ನಡೆದ ನೀಟ್‌ ಯುಜಿ ಮರುಪರೀಕ್ಷೆ ವೇಳೆ 9 ನಕಲಿ ಅಭ್ಯರ್ಥಿಗಳು ಹಾಗೂ ಅವರೊಂದಿಗಿದ್ದವರನ್ನು ಸೇರಿ 30 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಲಖಿಸರಾಯ್ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಪರೀಕ್ಷಾ ಕೇಂದ್ರಗಳ ಮೇಲೆ ದಾಳಿ ನಡೆಸಿ ಬೇರೆಯವರ ಹೆಸರಿನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ 9 ನಕಲಿ ಅಭ್ಯರ್ಥಿಗಳು ಸೇರಿ 30 ಜನರನ್ನು ಪತ್ತೆಹಚ್ಚಿದೆ. ಮೂಲಗಳ ಪ್ರಕಾರ, ಲಖಿಸರಾಯ್ ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ನಡೆಸಿದ

ನೀಟ್‌ ಮರುಪರೀಕ್ಷೆ ಬರೆಯಲು ಬಂದಿದ್ದ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಅರೆಸ್ಟ್‌ Read More »

error: Content is protected !!
Scroll to Top