• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕ್ರೀಡೆ

ಬ್ಯಾಡ್ಮಿಂಟನ್‌ ತಾರೆ ಆಯುಷ್ ಶೆಟ್ಟಿಗೆ ಮುಖ್ಯಮಂತ್ರಿ ಅಭಿನಂದನೆ

ಬೆಂಗಳೂರು : ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ‌ ಕಾರ್ಕಳದ ಆಯುಷ್ ಶೆಟ್ಟಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಎ. 16ರಂದು ವಿಧಾನಸೌಧದ ಕಚೇರಿಯಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು, ವಿಧಾನಪರಿಷತ್ ಸದಸ್ಯ ಗೋವಿಂದರಾಜು, ಆಯುಶ್ ಶೆಟ್ಟಿಯವರ ತಂದೆ ರಾಮ ಪ್ರಕಾಶ್ ಶೆಟ್ಟಿ, ತಾಯಿ ಶಾಲ್ಮಲಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.ಆಯುಶ್ ಶೆಟ್ಟಿಯವರು ಚೀನಾದ ನಿಂಗ್ಬೋದಲ್ಲಿ ನಡೆದ ಸೆಮಿಫೈನಲ್‌ […]

ಬ್ಯಾಡ್ಮಿಂಟನ್‌ ತಾರೆ ಆಯುಷ್ ಶೆಟ್ಟಿಗೆ ಮುಖ್ಯಮಂತ್ರಿ ಅಭಿನಂದನೆ Read More »

ಕಾರ್ಕಳದ ಕಲಿ ಆಯುಷ್‌ ಶೆಟ್ಟಿಗೆ ಏಷ್ಯಾ ಬ್ಯಾಡ್ಮಿಂಟನ್‌ ಫೈನಲ್‌ ಪ್ರವೇಶ: ವಿಶ್ವದ ನಂ.1 ಆಟಗಾರನಿಗೆ ಸೋಲುಣಿಸಿ ಇತಿಹಾಸ

​ನಿಂಗ್ಬೊ (ಚೀನಾ) : ಕಾರ್ಕಳ ಸಾಣೂರಿನ ಉದಯೋನ್ಮುಖ ಪ್ರತಿಭೆ ಆಯುಷ್ ಶೆಟ್ಟಿ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಅಕ್ಷರಶಃ ವಿಶ್ವವನ್ನೇ ಬೆರಗುಗೊಳಿಸಿದ್ದಾರೆ. ಶನಿವಾರ ನಡೆದ ಪುರುಷರ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ವಿಶ್ವದ ನಂಬರ್ 1 ಆಟಗಾರ ಥಾಯ್ಲೆಂಡ್‌ನ ಕುನ್ಲಾವುತ್ ವಿಟಿಡ್ಸರ್ನ್ ಅವರನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.​ಐತಿಹಾಸಿಕ ಜಯ:20 ವರ್ಷದ ಭರವಸೆಯ ಆಟಗಾರ ಆಯುಷ್‌ ಶೆಟ್ಟಿ ಪ್ಯಾರಿಸ್ ಒಲಿಂಪಿಕ್ಸ್‌ನ ಬೆಳ್ಳಿ ಪದಕ ವಿಜೇತ ವಿಟಿಡ್ಸರ್ನ್ ವಿರುದ್ಧ 10-21, 21-19, 21-17 ಅಂತರದಲ್ಲಿ ರೋಚಕ ಜಯ ಸಾಧಿಸಿದರು. ಮೊದಲ ಸೆಟ್‌ನಲ್ಲಿ ಸೋತು

ಕಾರ್ಕಳದ ಕಲಿ ಆಯುಷ್‌ ಶೆಟ್ಟಿಗೆ ಏಷ್ಯಾ ಬ್ಯಾಡ್ಮಿಂಟನ್‌ ಫೈನಲ್‌ ಪ್ರವೇಶ: ವಿಶ್ವದ ನಂ.1 ಆಟಗಾರನಿಗೆ ಸೋಲುಣಿಸಿ ಇತಿಹಾಸ Read More »

ಮಾ. 1 : ಬಜಗೋಳಿಯಲ್ಲಿ ಹೊನಲು ಬೆಳಕಿನ ವಾಲಿಬಾಲ್‌ ಪಂದ್ಯಾಕೂಟ – ಶ್ರೀ ದುರ್ಗಾಪರಮೇಶ್ವರಿ ಟ್ರೋಫಿ

ಕಾರ್ಕಳ : ಮುಡಾರು ವಾಲಿಬಾಲ್‌ ಫ್ರೆಂಡ್ಸ್‌ ವತಿಯಿಂದ ಗ್ರಾಮೀಣ ಮಟ್ಟದ ಪುರುಷರ ಮುಕ್ತ ಹೊನಲು ಬೆಳಕಿನ ವಾಲಿಬಾಲ್‌ ಪಂದ್ಯಾಕೂಟ – ದುರ್ಗಾಪರಮೇಶ್ವರಿ ಟ್ರೋಫಿ ಮಾ.1ರಂದು ರಾತ್ರಿ 7 ಗಂಟೆಯಿಂದ ಬಜಗೋಳಿಯ ಅಬ್ಬೆಂಜಾಲು ಫ್ರೆಂಡ್ಸ್‌ ಕ್ಲಬ್‌ನಲ್ಲಿ ನಡೆಯಲಿದೆ.ಪ್ರವೇಶ ಶುಲ್ಕ 1 ಸಾ.ರೂ. ಇದ್ದು ವಿಜೇತರಿಗೆ ಪ್ರಥಮ 8 ಸಾ. ರೂ. ನಗದು ಹಾಗೂ ಟ್ರೋಫಿ, ದ್ವಿತೀಯ 5 ಸಾ.ರೂ. ನಗದು ಹಾಗೂ ಟ್ರೋಫಿ, ತೃತೀಯ ಮತ್ತು ಚತುರ್ಥ ಸ್ಥಾನ ಪಡೆದವರಿಗೆ ಟ್ರೋಫಿ ಮತ್ತು ಬೆಸ್ಟ್‌ ಆಟ್ಯಾಕರ್‌, ಪಾಸರ್‌ ಮತ್ತು

ಮಾ. 1 : ಬಜಗೋಳಿಯಲ್ಲಿ ಹೊನಲು ಬೆಳಕಿನ ವಾಲಿಬಾಲ್‌ ಪಂದ್ಯಾಕೂಟ – ಶ್ರೀ ದುರ್ಗಾಪರಮೇಶ್ವರಿ ಟ್ರೋಫಿ Read More »

ಸೌರಾಷ್ಟ್ರ ರಾಜ್ಯ ಮಹಿಳಾ ಕ್ರಿಕೆಟ್ ತಂಡಕ್ಕೆ ಮುನಿಯಾಲು ಮೂಲದ ನಿತ್ಯ ಶೆಟ್ಟಿ ಆಯ್ಕೆ

ಕಾರ್ಕಳ : ಸೌರಾಷ್ಟ್ರ (ಗುಜರಾತ್‌)‌ ರಾಜ್ಯ ಮಹಿಳಾ ಕ್ರಿಕೆಟ್‌ ತಂಡಕ್ಕೆ ಮುನಿಯಾಲು ಮೂಲದ ನಿತ್ಯಾ ಶೆಟ್ಟಿ ಆಯ್ಕೆಯಾಗಿದ್ದಾರೆ. 21ವರ್ಷದ ನಿತ್ಯಾ ಶೆಟ್ಟಿ ಫೆ. 6ರಂದು ರಾಂಚಿಯಲ್ಲಿ ನಡೆಯಲಿರುವ ಅಂಡರ್‌ 23 ವುಮೆನ್ಸ್ ಬಿಸಿಸಿಐ ಟೂರ್ನಮೆಂಟ್‌ನಲ್ಲಿ ಸೌರಾಷ್ಟ್ರ ತಂಡದಲ್ಲಿ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಹಾಗೂ ಮಧ್ಯಮ ವೇಗದ ಬೌಲರ್ ಆಗಿ ಆಡಲಿದ್ದಾರೆ. ಇವರು ಮೂಲತ: ಮುನಿಯಾಲು ಬೈಲಿನವರಾದ ಆರತಿ ಶೆಟ್ಟಿ ಮತ್ತು ಗುಜರಾತ್‌ನ ವಿಪುಲ್‌ ಪಾಂಚಾಲ್‌ ದಂಪತಿಯ ಪುತ್ರಿ.

ಸೌರಾಷ್ಟ್ರ ರಾಜ್ಯ ಮಹಿಳಾ ಕ್ರಿಕೆಟ್ ತಂಡಕ್ಕೆ ಮುನಿಯಾಲು ಮೂಲದ ನಿತ್ಯ ಶೆಟ್ಟಿ ಆಯ್ಕೆ Read More »

ದಕ್ಷಿಣ ಆಫ್ರಿಕಾ ವಿರುದ್ಧ ಶತಕ ಬಾರಿಸಿದ ವೈಭವ್‌ ಸೂರ್ಯವಂಶಿ

ಯೂತ್ ಏಕದಿನ ಇತಿಹಾಸದಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆ ದೆಹಲಿ : ಬುಧವಾರ ನಡೆದ ಮೂರನೇ ಯೂತ್ ಏಕದಿನ ಪಂದ್ಯದಲ್ಲಿ ಭಾರತ ಅಂಡರ್-19 ತಂಡ ದಕ್ಷಿಣ ಆಫ್ರಿಕಾ ಅಂಡರ್-19 ತಂಡದ ವಿರುದ್ಧ ಆರಂಭಿಕ ಜೋಡಿಯು ಅದ್ಭುತ ಪ್ರದರ್ಶನ ನೀಡಿ ಇತಿಹಾಸ ಪುಸ್ತಕಗಳಲ್ಲಿ ಹೊಸ ದಾಖಲೆ ಬರೆದಿದೆ. 14 ವರ್ಷದ ವೈಭವ್ ಸೂರ್ಯವಂಶಿ ಮತ್ತು ಅವರ ಆರಂಭಿಕ ಜೋಡಿ ಆ್ಯರನ್ ಜಾರ್ಜ್ ಈ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ್ದಾರೆ. ಮೊದಲ ವಿಕೆಟ್‌ಗೆ 227 ರನ್‌ಗಳ

ದಕ್ಷಿಣ ಆಫ್ರಿಕಾ ವಿರುದ್ಧ ಶತಕ ಬಾರಿಸಿದ ವೈಭವ್‌ ಸೂರ್ಯವಂಶಿ Read More »

14 ವರ್ಷಗಳ ಬಳಿಕ ಆಸಿಸ್ ನೆಲದಲ್ಲಿ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್

ಮೆಲ್ಬೋರ್ನ್ : ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆಲ್ಲುವ ಇಂಗ್ಲೆಂಡ್ ತಂಡದ 14 ವರ್ಷಗಳ ಕನಸು ಕೊನೆಗೂ ಈಡೇರಿದೆ. ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ಭರ್ಜರಿ ಜಯ ಸಾಧಿಸಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆದ್ದಿದ್ದು 2011 ರಲ್ಲಿ. ಆ್ಯಶಸ್ ಸರಣಿಯ ಮೊದಲು ಮೂರು ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದ್ದ ಇಂಗ್ಲೆಂಡ್ ತಂಡ ಈಗಾಗಲೇ ಸರಣಿ ಕೈ ಚೆಲ್ಲಿದ್ದು, ಇದೀಗ 4ನೇ ಟೆಸ್ಟ್ ಪಂದ್ಯ

14 ವರ್ಷಗಳ ಬಳಿಕ ಆಸಿಸ್ ನೆಲದಲ್ಲಿ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್ Read More »

ರಾಜ್ಯ ಮಟ್ಟದ ಜಂಪ್‌ರೋಪ್ ಸ್ಪರ್ಧೆ : ಜ್ಞಾನಸುಧಾ ತಂಡಕ್ಕೆ ಕಂಚು

ಕಾರ್ಕಳ : ಶಾಲಾಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವತಿಯಿಂದ ಕೊಪ್ಪಳದಲ್ಲಿ ಜರುಗಿದ ರಾಜ್ಯ ಮಟ್ಟದ ಜಂಪ್‌ರೋಪ್‌ ಸ್ಪರ್ಧೆಯ 30ಸೆಕೆಂಡ್ ಡಬಲ್ ಅಂಡರ್‌ ರಿಲೇ ವಿಭಾಗದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ನಿಖಿಲ್ ಎಂ.ವಿ, ಪೂರ್ವಜ್‌ ಗೌಡ ವಿ., ಪ್ರಥಮೇಶ್ ಡಿ.ಪಿ., ಎನ್. ನಿಖಿಲ್, ಶಾನ್ವಿ ಎಸ್‌. ಹಾಗೂ ಕಾಜೊಲ್ ಎಂ. ಪಿ. ತೃತೀಯ ಸ್ಥಾನ ಪಡೆದು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.ಸಾಧಕ ವಿದ್ಯಾರ್ಥಿಗಳಿಗೆ ಅಜೆಕಾರು ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್ನಅಧ್ಯಕ್ಷ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

ರಾಜ್ಯ ಮಟ್ಟದ ಜಂಪ್‌ರೋಪ್ ಸ್ಪರ್ಧೆ : ಜ್ಞಾನಸುಧಾ ತಂಡಕ್ಕೆ ಕಂಚು Read More »

ವಿಶ್ವಶಾಲಾ ಮಕ್ಕಳ ವಾಲಿಬಾಲ್ ಪಂದ್ಯಾಟ – ಭಾರತ ತಂಡಕ್ಕೆ ಕ್ರೈಸ್ಟ್‌ಕಿಂಗ್‌ನ ಶಗುನ್ ಎಸ್. ವರ್ಮ ಆಯ್ಕೆ

ಕರ್ನಾಟಕದಿಂದ ಆಯ್ಕೆಯಾದ ಏಕೈಕ ಆಟಗಾರ್ತಿ ಕಾರ್ಕಳ : ಕ್ರೈಸ್ಟ್‌ಕಿಂಗ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಶಗುನ್ ಎಸ್. ವರ್ಮ ರಾಷ್ಟ್ರೀಯ ಸ್ಕೂಲ್ ಗೇಮ್ಸ್ ಫೆಡರೇಶನ್‌ನವರು ನಡೆಸುವ 15ರ ವಯೋಮಿತಿಯ ವಿಶ್ವಾಶಾಲಾ ಬಾಲಕಿಯರ ವಿಭಾಗದ ವಿಶ್ವ ವಾಲಿಬಾಲ್ ಪಂದ್ಯಾಟದ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈಕೆ 15ರ ವಯೋಮಿತಿಯ ಭಾರತೀಯ ವಾಲಿವಾಲ್ ತಂಡಕ್ಕೆ ಆಯ್ಕೆಯಾದ ಕರ್ನಾಟಕದ ಏಕೈಕ ಆಟಗಾರ್ತಿ. ಅಂತರಾಷ್ಟ್ರೀಯ ಪಂದ್ಯವು ಡಿಸೆಂಬರ್ ತಿಂಗಳ 4 ರಿಂದ 13ನೇ ತಾರೀಖಿನವರೆಗೆ ಚೀನಾದ ಶಾಂಗ್ಲೋದಲ್ಲಿ ನಡೆಯಲಿದೆ. ಶಗುನ್ ಎಸ್.

ವಿಶ್ವಶಾಲಾ ಮಕ್ಕಳ ವಾಲಿಬಾಲ್ ಪಂದ್ಯಾಟ – ಭಾರತ ತಂಡಕ್ಕೆ ಕ್ರೈಸ್ಟ್‌ಕಿಂಗ್‌ನ ಶಗುನ್ ಎಸ್. ವರ್ಮ ಆಯ್ಕೆ Read More »

ರಾಜ್ಯಮಟ್ಟದ ವೇಯ್ಟ್‌ ಲಿಫ್ಟಿಂಗ್ ಚಾಂಪಿಯನ್ ಶಿಪ್ : ಆಳ್ವಾಸ್‌ಗೆ 6 ವಿಭಾಗದಲ್ಲಿ ಸಮಗ್ರ ತಂಡ ಪ್ರಶಸ್ತಿ

ಮೂಡುಬಿದಿರೆ : ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಅಸೋಸಿಯೇಷನ್ ಮತ್ತು ಸುಳ್ಯ ಸ್ಫೋರ್ಟ್ಸ್ ಎಂಡ್ ಆರ್ಟ್ಸ್ ಅಸೋಸಿಯೇಷನ್ ಇವುಗಳ ಜಂಟಿ ಆಶ್ರಯದಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್, ಸೀನಿಯರ್ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್‌ನಲ್ಲಿ ಆಳ್ವಾಸ್ ಕಾಲೇಜು ಒಟ್ಟು 6 ವಿಭಾಗದಲ್ಲಿ ತಂಡ ಪ್ರಶಸ್ತಿಯನ್ನು ಪಡೆದು ಸಮಗ್ರ ಚಾಂಪಿಯನ್ ಆಗಿ ಆಳ್ವಾಸ್ ಹೊರಹೊಮ್ಮಿತು. ಬಾಲಕಿಯರ ಸಬ್ ಜೂನಿಯರ್ ವಿಭಾಗದಲ್ಲಿ ಮಾನಸ, ಮಹಿಳಾ ವಿಭಾಗದಲ್ಲಿ ತನುಷ ಬೆಸ್ಟ್ ಲಿಪ್ಟರ್ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು. ವಿದ್ಯಾರ್ಥಿಗಳ

ರಾಜ್ಯಮಟ್ಟದ ವೇಯ್ಟ್‌ ಲಿಫ್ಟಿಂಗ್ ಚಾಂಪಿಯನ್ ಶಿಪ್ : ಆಳ್ವಾಸ್‌ಗೆ 6 ವಿಭಾಗದಲ್ಲಿ ಸಮಗ್ರ ತಂಡ ಪ್ರಶಸ್ತಿ Read More »

ರಾಜ್ಯ ಮಟ್ಟದ ಕುಸ್ತಿ – ಕ್ರೈಸ್ಟ್‌ಕಿಂಗ್‌ನ ಪೂರ್ಣಿಮಾ ಪ್ರಭುಗೆ ಕಂಚು

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ವಿಜಯಪುರ ಜಿಲ್ಲೆ ಹಾಗೂ ಹೆಚ್. ಜಿ. ಪ.ಪೂ. ಕಾಲೇಜು ಸಿಂದಗಿ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕಿಯರ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಕ್ರೈಸ್ಟ್‌ಕಿಂಗ್‌ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪೂರ್ಣಿಮಾ ಪ್ರಭು ಕಂಚಿನ ಪದಕ ಪಡೆದುಕೊಂಡಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಲಾವಣ್ಯ ಶೆಟ್ಟಿ ಪೂರ್ಣಿಮಾ ಪ್ರಭುಗೆ ತರಬೇತಿ ನೀಡಿದ್ದರು.

ರಾಜ್ಯ ಮಟ್ಟದ ಕುಸ್ತಿ – ಕ್ರೈಸ್ಟ್‌ಕಿಂಗ್‌ನ ಪೂರ್ಣಿಮಾ ಪ್ರಭುಗೆ ಕಂಚು Read More »

error: Content is protected !!
Scroll to Top