• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕ್ರೀಡೆ

ಕರಾಟೆಯಲ್ಲಿ ಸಾಧನೆಗೈದ ಅವಳಿ ಸಹೋದರರು

ನಿಟ್ಟೆ: ಕರಾಟೆ ಕ್ಷೇತ್ರದಲ್ಲಿ ಅತ್ಯಂತ ಚಿಕ್ಕ ವಯಸ್ಸಿನಲ್ಲೇ ಅದ್ಭುತ ಸಾಧನೆಗೈದಿರುವ ನಿಟ್ಟೆಯ ಪ್ರತಿಭಾನ್ವಿತ ಅವಳಿ ಸಹೋದರರಾದ ಅನುಷ್ ಅರುಣ್ ಕೆ. ಮತ್ತು ಆಯುಷ್ ಅರುಣ್ ಅವರಿಗೆ ಈ ವರ್ಷದ ಪ್ರತಿಷ್ಠಿತ ‘ಯುವ ಸಾಧಕ’ ಬಿರುದು ನೀಡಿ ಗೌರವಿಸಲಾಗಿದೆ.​ಕಾರ್ಕಳದ ತೆಲಿಕೆದ ತೆನಾಲಿ ತಂಡದ ಆಶ್ರಯದಲ್ಲಿ ಜರುಗಿದ ತೆಲಿಕೆದ ಸಂಭ್ರಮ-2026 ಸಾಂಸ್ಕೃತಿಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಈ ಇಬ್ಬರು ಯುವ ಕ್ರೀಡಾಪಟುಗಳನ್ನು ಸಾರ್ವಜನಿಕವಾಗಿ ಸನ್ಮಾನಿಸಿ ಬಿರುದು ಪ್ರದಾನ ಮಾಡಲಾಯಿತು.​ಬಾಲ್ಯದಲ್ಲೇ ಅಪ್ರತಿಮ ಕರಾಟೆ ಸಾಧನೆ​ಅನುಷ್ ಮತ್ತು ಆಯುಷ್ ಅವರು ಬಾಲ್ಯದಿಂದಲೇ ಕರಾಟೆಯಲ್ಲಿ […]

ಕರಾಟೆಯಲ್ಲಿ ಸಾಧನೆಗೈದ ಅವಳಿ ಸಹೋದರರು Read More »

ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಆದಾಯ ಪಡೆದ ಆಟಗಾರ

ದೆಹಲಿ : ಐಪಿಎಲ್ ಟೂರ್ನಿಯ 19 ವರ್ಷಗಳ ಇತಿಹಾಸದಲ್ಲಿ ಅತಿ ಹೆಚ್ಚು ಆದಾಯ ಪಡೆದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರ ಸ್ಥಾನ ಪಡೆದಿದ್ದಾರೆ ಎಂದು ವರದಿಯಾಗಿದೆ. ಫೆನಾಟಿಕ್ ಸ್ಪೋರ್ಟ್ಸ್ ಮತ್ತು ಹುರುನ್ ನೀಡಿರುವ ವರದಿ ಪ್ರಕಾರ ಐಪಿಎಲ್‌ನ 19 ಆವೃತ್ತಿಗಳಲ್ಲೂ ಆರ್‌ಸಿಬಿ ತಂಡವನ್ನು ಪ್ರತಿನಿಧಿಸಿರುವ ವಿರಾಟ್ ಕೊಹ್ಲಿ ಒಟ್ಟು 230 ಕೋಟಿ ಆದಾಯ ಪಡೆದು ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ಎಂಎಸ್ ಧೋನಿ ಅವರನ್ನು ಹಿಂದಿಕ್ಕಿದ್ದಾರೆ. ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ

ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಆದಾಯ ಪಡೆದ ಆಟಗಾರ Read More »

ಅಫ್ಘಾನಿಸ್ತಾನ ವಿರುದ್ಧದ ಏಕದಿನ ಹಾಗೂ ಟೆಸ್ಟ್‌ ಪಂದ್ಯಕ್ಕೆ ಭಾರತ ತಂಡ ಪ್ರಕಟ

ಟೆಸ್ಟ್‌ಗೆ ರಾಹುಲ್ ಉಪನಾಯಕ – ಮೂವರು ಕನ್ನಡಿಗರಿಗೆ ಅವಕಾಶ ಮುಂಬೈ : ಬಿಸಿಸಿಐ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಒಂದು ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಿದೆ. ಏಕದಿನ ಹಾಗೂ ಟೆಸ್ಟ್ ಎರಡೂ ತಂಡಗಳ ನಾಯಕನಾಗಿ ಶುಭ್​ಮನ್ ಗಿಲ್ ಅವರನ್ನೇ ಆಯ್ಕೆ ಸಮಿತಿ ಮುಂದುವರಿಸಿದ್ದು, ಟೆಸ್ಟ್ ತಂಡದ ಉಪನಾಯಕನಾಗಿ ಕೆಎಲ್ ರಾಹುಲ್ ಹಾಗೂ ಏಕದಿನ ತಂಡದ ಉಪನಾಯಕನಾಗಿ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಲಾಗಿದೆ.ಗುವಾಹಟಿಯಲ್ಲಿ ಸಭೆ ಸೇರಿದ್ದ ಆಯ್ಕೆ ಸಮಿತಿ ಎರಡೂ ತಂಡಗಳನ್ನು

ಅಫ್ಘಾನಿಸ್ತಾನ ವಿರುದ್ಧದ ಏಕದಿನ ಹಾಗೂ ಟೆಸ್ಟ್‌ ಪಂದ್ಯಕ್ಕೆ ಭಾರತ ತಂಡ ಪ್ರಕಟ Read More »

ಧೋನಿ ದಾಖಲೆ ಸರಿಗಟ್ಟಿದ ಕೊಹ್ಲಿ, ಶರ್ಮಾ

ರಾಯ್ಪುರ : ಭಾನುವಾರ ಆರ್‌ಸಿಬಿ ಹಾಗೂ ಮುಂಬೈ ನಡುವೆ ನಡೆದ ಹೈವೋಲ್ಟೇಜ್ ಐಪಿಎಲ್‌ ಪಂದ್ಯದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಮತ್ತು ರನ್ ಮೆಷಿನ್ ವಿರಾಟ್ ಕೊಹ್ಲಿ, ಎಂಎಸ್ ಧೋನಿ ಅವರ ದಾಖಲೆ ಸರಿಗಟ್ಟಿದ್ದಾರೆ. ಹೌದು, ಐಪಿಎಲ್‌ನಲ್ಲಿ ಅತಿಹೆಚ್ಚು ಪಂದ್ಯ ಆಡಿದ ಆಟಗಾರರ ಪಟ್ಟಿಯಲ್ಲಿ ಭಾರತದ ಮೂವರು ದಿಗ್ಗಜ ಆಟಗಾರರು ಈಗ ಒಟ್ಟಿಗೆ ಅಗ್ರಸ್ಥಾನದಲ್ಲಿದ್ದಾರೆ. ರಾಯ್ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ರೋ-ಕೋ ಜೋಡಿ ಈ ಸಾಧನೆ ಮಾಡಿದ್ದು, ಇದು

ಧೋನಿ ದಾಖಲೆ ಸರಿಗಟ್ಟಿದ ಕೊಹ್ಲಿ, ಶರ್ಮಾ Read More »

ಐಪಿಎಲ್ ಫೈನಲ್ ಬೆಂಗಳೂರಿನಿಂದ ಅಹಮದಾಬಾದಿಗೆ ಶಿಫ್ಟ್

ಬೆಂಗಳೂರು : 2026ರ ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಿಂದ ಅಹಮದಾಬಾದ್‌ಗೆ ಸ್ಥಳಾಂತರಗೊಂಡಿದೆ. ಸ್ಥಳೀಯ ಸಂಘಗಳ ಟಿಕೆಟ್ ಬೇಡಿಕೆಗಳು ಬಿಸಿಸಿಐ ಮಾರ್ಗಸೂಚಿಗಳಿಗೆ ವಿರುದ್ಧವಾಗಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ಯಶಸ್ವಿಯಾಗಿ ಲೀಗ್ ಪಂದ್ಯಗಳು ನಡೆದರೂ ಫೈನಲ್ ಆಯೋಜನೆ ನಿರೀಕ್ಷಿಸಿದ್ದ ಆರ್‌ಸಿಬಿ ಅಭಿಮಾನಿಗಳಿಗೆ ಇದು ನಿರಾಸೆ ತಂದಿದೆ. ಬಿಸಿಸಿಐ ಪ್ಲೇ ಆಫ್ ವೇಳಾಪಟ್ಟಿಯನ್ನೂ ಬಿಡುಗಡೆ ಮಾಡಿದೆ ಎದುರಾಗಿದ್ದ ಅಡೆತಡೆಗಳೆಲ್ಲವನ್ನು ಮೆಟ್ಟಿ ನಿಂತು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026 ರ ಐಪಿಎಲ್​ನ ಉದ್ಘಾಟನಾ ಪಂದ್ಯವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಆ

ಐಪಿಎಲ್ ಫೈನಲ್ ಬೆಂಗಳೂರಿನಿಂದ ಅಹಮದಾಬಾದಿಗೆ ಶಿಫ್ಟ್ Read More »

ಬ್ಯಾಡ್ಮಿಂಟನ್‌ ತಾರೆ ಆಯುಷ್ ಶೆಟ್ಟಿಗೆ ಮುಖ್ಯಮಂತ್ರಿ ಅಭಿನಂದನೆ

ಬೆಂಗಳೂರು : ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ‌ ಕಾರ್ಕಳದ ಆಯುಷ್ ಶೆಟ್ಟಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಎ. 16ರಂದು ವಿಧಾನಸೌಧದ ಕಚೇರಿಯಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು, ವಿಧಾನಪರಿಷತ್ ಸದಸ್ಯ ಗೋವಿಂದರಾಜು, ಆಯುಶ್ ಶೆಟ್ಟಿಯವರ ತಂದೆ ರಾಮ ಪ್ರಕಾಶ್ ಶೆಟ್ಟಿ, ತಾಯಿ ಶಾಲ್ಮಲಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.ಆಯುಶ್ ಶೆಟ್ಟಿಯವರು ಚೀನಾದ ನಿಂಗ್ಬೋದಲ್ಲಿ ನಡೆದ ಸೆಮಿಫೈನಲ್‌

ಬ್ಯಾಡ್ಮಿಂಟನ್‌ ತಾರೆ ಆಯುಷ್ ಶೆಟ್ಟಿಗೆ ಮುಖ್ಯಮಂತ್ರಿ ಅಭಿನಂದನೆ Read More »

ಕಾರ್ಕಳದ ಕಲಿ ಆಯುಷ್‌ ಶೆಟ್ಟಿಗೆ ಏಷ್ಯಾ ಬ್ಯಾಡ್ಮಿಂಟನ್‌ ಫೈನಲ್‌ ಪ್ರವೇಶ: ವಿಶ್ವದ ನಂ.1 ಆಟಗಾರನಿಗೆ ಸೋಲುಣಿಸಿ ಇತಿಹಾಸ

​ನಿಂಗ್ಬೊ (ಚೀನಾ) : ಕಾರ್ಕಳ ಸಾಣೂರಿನ ಉದಯೋನ್ಮುಖ ಪ್ರತಿಭೆ ಆಯುಷ್ ಶೆಟ್ಟಿ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಅಕ್ಷರಶಃ ವಿಶ್ವವನ್ನೇ ಬೆರಗುಗೊಳಿಸಿದ್ದಾರೆ. ಶನಿವಾರ ನಡೆದ ಪುರುಷರ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ವಿಶ್ವದ ನಂಬರ್ 1 ಆಟಗಾರ ಥಾಯ್ಲೆಂಡ್‌ನ ಕುನ್ಲಾವುತ್ ವಿಟಿಡ್ಸರ್ನ್ ಅವರನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.​ಐತಿಹಾಸಿಕ ಜಯ:20 ವರ್ಷದ ಭರವಸೆಯ ಆಟಗಾರ ಆಯುಷ್‌ ಶೆಟ್ಟಿ ಪ್ಯಾರಿಸ್ ಒಲಿಂಪಿಕ್ಸ್‌ನ ಬೆಳ್ಳಿ ಪದಕ ವಿಜೇತ ವಿಟಿಡ್ಸರ್ನ್ ವಿರುದ್ಧ 10-21, 21-19, 21-17 ಅಂತರದಲ್ಲಿ ರೋಚಕ ಜಯ ಸಾಧಿಸಿದರು. ಮೊದಲ ಸೆಟ್‌ನಲ್ಲಿ ಸೋತು

ಕಾರ್ಕಳದ ಕಲಿ ಆಯುಷ್‌ ಶೆಟ್ಟಿಗೆ ಏಷ್ಯಾ ಬ್ಯಾಡ್ಮಿಂಟನ್‌ ಫೈನಲ್‌ ಪ್ರವೇಶ: ವಿಶ್ವದ ನಂ.1 ಆಟಗಾರನಿಗೆ ಸೋಲುಣಿಸಿ ಇತಿಹಾಸ Read More »

ಮಾ. 1 : ಬಜಗೋಳಿಯಲ್ಲಿ ಹೊನಲು ಬೆಳಕಿನ ವಾಲಿಬಾಲ್‌ ಪಂದ್ಯಾಕೂಟ – ಶ್ರೀ ದುರ್ಗಾಪರಮೇಶ್ವರಿ ಟ್ರೋಫಿ

ಕಾರ್ಕಳ : ಮುಡಾರು ವಾಲಿಬಾಲ್‌ ಫ್ರೆಂಡ್ಸ್‌ ವತಿಯಿಂದ ಗ್ರಾಮೀಣ ಮಟ್ಟದ ಪುರುಷರ ಮುಕ್ತ ಹೊನಲು ಬೆಳಕಿನ ವಾಲಿಬಾಲ್‌ ಪಂದ್ಯಾಕೂಟ – ದುರ್ಗಾಪರಮೇಶ್ವರಿ ಟ್ರೋಫಿ ಮಾ.1ರಂದು ರಾತ್ರಿ 7 ಗಂಟೆಯಿಂದ ಬಜಗೋಳಿಯ ಅಬ್ಬೆಂಜಾಲು ಫ್ರೆಂಡ್ಸ್‌ ಕ್ಲಬ್‌ನಲ್ಲಿ ನಡೆಯಲಿದೆ.ಪ್ರವೇಶ ಶುಲ್ಕ 1 ಸಾ.ರೂ. ಇದ್ದು ವಿಜೇತರಿಗೆ ಪ್ರಥಮ 8 ಸಾ. ರೂ. ನಗದು ಹಾಗೂ ಟ್ರೋಫಿ, ದ್ವಿತೀಯ 5 ಸಾ.ರೂ. ನಗದು ಹಾಗೂ ಟ್ರೋಫಿ, ತೃತೀಯ ಮತ್ತು ಚತುರ್ಥ ಸ್ಥಾನ ಪಡೆದವರಿಗೆ ಟ್ರೋಫಿ ಮತ್ತು ಬೆಸ್ಟ್‌ ಆಟ್ಯಾಕರ್‌, ಪಾಸರ್‌ ಮತ್ತು

ಮಾ. 1 : ಬಜಗೋಳಿಯಲ್ಲಿ ಹೊನಲು ಬೆಳಕಿನ ವಾಲಿಬಾಲ್‌ ಪಂದ್ಯಾಕೂಟ – ಶ್ರೀ ದುರ್ಗಾಪರಮೇಶ್ವರಿ ಟ್ರೋಫಿ Read More »

ಸೌರಾಷ್ಟ್ರ ರಾಜ್ಯ ಮಹಿಳಾ ಕ್ರಿಕೆಟ್ ತಂಡಕ್ಕೆ ಮುನಿಯಾಲು ಮೂಲದ ನಿತ್ಯ ಶೆಟ್ಟಿ ಆಯ್ಕೆ

ಕಾರ್ಕಳ : ಸೌರಾಷ್ಟ್ರ (ಗುಜರಾತ್‌)‌ ರಾಜ್ಯ ಮಹಿಳಾ ಕ್ರಿಕೆಟ್‌ ತಂಡಕ್ಕೆ ಮುನಿಯಾಲು ಮೂಲದ ನಿತ್ಯಾ ಶೆಟ್ಟಿ ಆಯ್ಕೆಯಾಗಿದ್ದಾರೆ. 21ವರ್ಷದ ನಿತ್ಯಾ ಶೆಟ್ಟಿ ಫೆ. 6ರಂದು ರಾಂಚಿಯಲ್ಲಿ ನಡೆಯಲಿರುವ ಅಂಡರ್‌ 23 ವುಮೆನ್ಸ್ ಬಿಸಿಸಿಐ ಟೂರ್ನಮೆಂಟ್‌ನಲ್ಲಿ ಸೌರಾಷ್ಟ್ರ ತಂಡದಲ್ಲಿ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಹಾಗೂ ಮಧ್ಯಮ ವೇಗದ ಬೌಲರ್ ಆಗಿ ಆಡಲಿದ್ದಾರೆ. ಇವರು ಮೂಲತ: ಮುನಿಯಾಲು ಬೈಲಿನವರಾದ ಆರತಿ ಶೆಟ್ಟಿ ಮತ್ತು ಗುಜರಾತ್‌ನ ವಿಪುಲ್‌ ಪಾಂಚಾಲ್‌ ದಂಪತಿಯ ಪುತ್ರಿ.

ಸೌರಾಷ್ಟ್ರ ರಾಜ್ಯ ಮಹಿಳಾ ಕ್ರಿಕೆಟ್ ತಂಡಕ್ಕೆ ಮುನಿಯಾಲು ಮೂಲದ ನಿತ್ಯ ಶೆಟ್ಟಿ ಆಯ್ಕೆ Read More »

ದಕ್ಷಿಣ ಆಫ್ರಿಕಾ ವಿರುದ್ಧ ಶತಕ ಬಾರಿಸಿದ ವೈಭವ್‌ ಸೂರ್ಯವಂಶಿ

ಯೂತ್ ಏಕದಿನ ಇತಿಹಾಸದಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆ ದೆಹಲಿ : ಬುಧವಾರ ನಡೆದ ಮೂರನೇ ಯೂತ್ ಏಕದಿನ ಪಂದ್ಯದಲ್ಲಿ ಭಾರತ ಅಂಡರ್-19 ತಂಡ ದಕ್ಷಿಣ ಆಫ್ರಿಕಾ ಅಂಡರ್-19 ತಂಡದ ವಿರುದ್ಧ ಆರಂಭಿಕ ಜೋಡಿಯು ಅದ್ಭುತ ಪ್ರದರ್ಶನ ನೀಡಿ ಇತಿಹಾಸ ಪುಸ್ತಕಗಳಲ್ಲಿ ಹೊಸ ದಾಖಲೆ ಬರೆದಿದೆ. 14 ವರ್ಷದ ವೈಭವ್ ಸೂರ್ಯವಂಶಿ ಮತ್ತು ಅವರ ಆರಂಭಿಕ ಜೋಡಿ ಆ್ಯರನ್ ಜಾರ್ಜ್ ಈ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ್ದಾರೆ. ಮೊದಲ ವಿಕೆಟ್‌ಗೆ 227 ರನ್‌ಗಳ

ದಕ್ಷಿಣ ಆಫ್ರಿಕಾ ವಿರುದ್ಧ ಶತಕ ಬಾರಿಸಿದ ವೈಭವ್‌ ಸೂರ್ಯವಂಶಿ Read More »

error: Content is protected !!
Scroll to Top