ವಾರದಲ್ಲಿ ಎರಡು ದಿನ ನಾಲ್ಕರಿಂದ ಐದು ಗ್ರಾಮಗಳಿಗೆ ಪೂರ್ವ ಸೂಚನೆ ನೀಡದೆ ದಿಢೀರ್ ಭೇಟಿ ಜಿಪಂ ಸಿಇಒಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ಬೆಂಗಳೂರು: ಸೆ.7 ರಾಜ್ಯದ ಎಲ್ಲ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ) ವಾರದಲ್ಲಿ ಕನಿಷ್ಠ ಎರಡು ದಿನ ನಾಲ್ಕರಿಂದ ಐದು ಗ್ರಾಮಗಳಿಗೆ ಪೂರ್ವ ಸೂಚನೆ ನೀಡದೆ ದಿಢೀರ್ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ.ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಕಾರ್ಯದರ್ಶಿಗೆ ಲಿಖಿತ ನಿರ್ದೇಶನ ನೀಡಿರುವ ಸಚಿವರು, ಸಿಇಒಗಳು ಗ್ರಾಮ ಪಂಚಾಯಿತಿಗಳಿಗೆ ಮುಂಚಿತ ಮಾಹಿತಿ ನೀಡದೆ ಭೇಟಿ ನೀಡಿ […]










