• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ವಿಧಾನಸಭೆ ಉಪಸಭಾಧ್ಯಕ್ಷರಾಗಿ ಮಂಕಾಳ ವೈದ್ಯ

ಬೆಂಗಳೂರು : ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಶಾಸಕ ಮಂಕಾಳ ವೈದ್ಯ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಕರಾವಳಿಯ ಸಾಮಾನ್ಯ ಕುಟುಂಬದ ಹಿನ್ನೆಲೆಯಿಂದ ಬಂದು ಮೀನುಗಾರಿಕೆ ಹಾಗೂ ಹೋಟೆಲ್ ಉದ್ಯಮದ ಮೂಲಕ ಬದುಕು ಕಟ್ಟಿಕೊಂಡ ಮಂಕಾಳ ವೈದ್ಯ ಅವರು ಜನಸೇವೆಯ ಮೂಲಕ ರಾಜಕೀಯ ಪ್ರವೇಶಿಸಿ ಜಿಲ್ಲಾ ಪಂಚಾಯತ್ ಸದಸ್ಯ, ಶಾಸಕ, ಸಚಿವರಾಗಿ ಬೆಳೆದು ಇದೀಗ ಕರ್ನಾಟಕ ವಿಧಾನಸಭೆಯ ಉಪಸಭಾಧ್ಯಕ್ಷ ಸ್ಥಾನದತ್ತ ಸಾಗಿದ್ದಾರೆ. ಕುಟುಂಬದ ಆರ್ಥಿಕ ಸಂಕಷ್ಟದಿಂದಾಗಿ ಪ್ರೌಢಶಾಲಾ ಹಂತದಲ್ಲೇ ಶಿಕ್ಷಣ ಮೊಟಕುಗೊಳಿಸಿದ ಮಂಕಾಳ ವೈದ್ಯ ಅವರು, ಬದುಕಿನ ನಿರ್ವಹಣೆಗಾಗಿ […]

ವಿಧಾನಸಭೆ ಉಪಸಭಾಧ್ಯಕ್ಷರಾಗಿ ಮಂಕಾಳ ವೈದ್ಯ Read More »

ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ಬೇಡ : ಸಿಎಂಗೆ ಸಚಿವ ಝಮೀರ್ ಅಹ್ಮದ್ ಪತ್ರ

ವಿಜಯನಗರ : ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಅವರು ವಿಜಯನಗರ ಜಿಲ್ಲೆ ಸೇರಿದಂತೆ ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಬಿಬಿಎಂಪಿ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ವಿಧಾನಸಭಾ ಉಪಚುನಾವಣೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಸಮಯ ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡದಂತೆ ಸಚಿವರು ಮನವಿ ಮಾಡಿದ್ದಾರೆ. ಈ ಹಿಂದೆ ವಿಜಯನಗರ ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ ಹಾಗೂ

ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ಬೇಡ : ಸಿಎಂಗೆ ಸಚಿವ ಝಮೀರ್ ಅಹ್ಮದ್ ಪತ್ರ Read More »

ರಾಹುಲ್ ವಿರುದ್ಧ ಆಕ್ರೋಶ – ಸಂಸತ್ ಆವರಣದಲ್ಲಿ ಎನ್‌ಡಿಎ ಸಂಸದರ ಬೃಹತ್ ಪ್ರತಿಭಟನಾ ಮೆರವಣಿಗೆ

ದೆಹಲಿ : ಸಂಸತ್‌ ಮುಂಗಾರು ಅಧಿವೇಶನದ 17ನೇ ದಿನವಾದ ಮಂಗಳವಾರವೂ ಆಡಳಿತಾರೂಢ ಎನ್‌ಡಿಎ ಹಾಗೂ ಪ್ರತಿಪಕ್ಷಗಳ ನಡುವಿನ ಸಂಘರ್ಷ ಮುಂದುವರಿದಿದೆ. ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್‌ ಕ್ರಮದ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ನೀಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿದ್ದು, ಆಡಳಿತ ಪಕ್ಷ ಚರ್ಚೆಗೆ ಸಿದ್ಧವಿದೆ ಎಂದು ಹೇಳಿದೆ. ಮಂಗಳವಾರ ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮಂಡಿಸಿರುವ ಎರಡು ಪ್ರಮುಖ ಮಸೂದೆಗಳನ್ನು ಪರಿಗಣಿಸಿ ಅಂಗೀಕರಿಸುವ ಸಾಧ್ಯತೆಯಿದೆ. ಕೇರಳ (ಹೆಸರು

ರಾಹುಲ್ ವಿರುದ್ಧ ಆಕ್ರೋಶ – ಸಂಸತ್ ಆವರಣದಲ್ಲಿ ಎನ್‌ಡಿಎ ಸಂಸದರ ಬೃಹತ್ ಪ್ರತಿಭಟನಾ ಮೆರವಣಿಗೆ Read More »

ಘೋಷಿತ ಆರೋಪಿಗೆ ಮಂತ್ರಿ ಪಟ್ಟ – ನಾಗೇಂದ್ರ ಕಾಂಗ್ರೆಸ್ ಹೈಕಮಾಂಡ್‌ನ “Payment” ಕೋಟಾ !

ಕರ್ನಾಟಕ ಕ್ಯಾಬಿನೇಟ್ ಕೋಟಾದಲ್ಲಿ “Full Meals” ಊಟ ಮಾಡಿದ್ದು ಯಾರು ಸ್ವಾಮಿ ? – ಸುನಿಲ್‌ ಕುಮಾರ್‌ ಕಾರ್ಕಳ : ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ಶಾಸಕ ಬಿ. ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದನ್ನು ಶಾಸಕ ವಿ. ಸುನಿಲ್ ಕುಮಾರ್‌ ತೀವ್ರವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಅವರು ತಮ್ಮ ಎಕ್ಸ್‌ (ಟಿಟ್ವರ್‌) ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಪೋಸ್ಟ್‌ನಲ್ಲೇನಿದೇ ?ಇಲ್ಲಿ ನೋಡಿ….! ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರ

ಘೋಷಿತ ಆರೋಪಿಗೆ ಮಂತ್ರಿ ಪಟ್ಟ – ನಾಗೇಂದ್ರ ಕಾಂಗ್ರೆಸ್ ಹೈಕಮಾಂಡ್‌ನ “Payment” ಕೋಟಾ ! Read More »

ಗೃಹಲಕ್ಷ್ಮೀ ಯೋಜನೆ ಮರು ಪರಿಶೀಲನೆಗೆ ಮಾರ್ಗಸೂಚಿ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಮುಗಿದ ತಕ್ಷಣ ಗೃಹಲಕ್ಷ್ಮೀ ಮರುಪರಿಶೀಲನೆ ಆರಂಭವಾಗಲಿದೆ. ಈ ಹಿನ್ನೆಲೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.ಗೃಹಲಕ್ಷ್ಮೀ ಮಾರ್ಗಸೂಚಿಗೆ ಸಿಎಂ ಡಿಕೆ ಶಿವಕುಮಾರ್ ಅವರು ಅಧಿಕೃತವಾಗಿ ಒಪ್ಪಿಗೆ ಸೂಚಿಸಿದ್ದಾರೆ. ಈ ಹಿನ್ನೆಲೆ ಎಸ್‌ಐಆರ್ ಮುಗಿದ ತಕ್ಷಣ ರಾಜ್ಯದಲ್ಲಿ ಗೃಹಲಕ್ಷ್ಮೀ ಮರುಪರಿಶೀಲನೆ ಶುರುವಾಗಲಿದ್ದು ಗ್ಯಾರಂಟಿ ಅನುಷ್ಠಾನ ಸಮಿತಿ ಸಮ್ಮುಖದಲ್ಲಿ ಅರ್ಜಿ ಭರ್ತಿ ಹಾಗೂ ಮರುಪರಿಶೀಲನೆ ನಡೆಯಲಿದೆ.ಸರ್ಕಾರವು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ. ಜಿಲ್ಲಾಮಟ್ಟದ ಸಮಿತಿಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾಮಟ್ಟದ ಸರ್ಕಾರಿ ಅಧಿಕಾರಿಗಳು,

ಗೃಹಲಕ್ಷ್ಮೀ ಯೋಜನೆ ಮರು ಪರಿಶೀಲನೆಗೆ ಮಾರ್ಗಸೂಚಿ Read More »

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ಡಿ.ಕೆ. ಶಿವಕುಮಾರ್‌

ಬೆಂಗಳೂರು : ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ ಮಾಡಲು ಹೇಳಿದ್ದೇನೆ ಎಂದು ಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಕ್ಷ ಮುಖ್ಯ, ಪಕ್ಷದಲ್ಲಿ ಶಿಸ್ತು ಮುಖ್ಯ ಎಂದರು. ವೀರೇಂದ್ರ ಪಾಟೀಲ್ ಕಾಲದಲ್ಲಿ ಬಂಗಾರಪ್ಪ, ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್ ಅವರಿಗೆ ಕೊಟ್ಟಿರಲಿಲ್ಲ. ನಾನು, ಪರಮೇಶ್ವರ್ ಕೂಡ ಸಚಿವ ಸ್ಥಾನ ಕೊಡದಿದ್ದಾಗ ಸುಮ್ಮನೆ ಇರಲಿಲ್ಲವಾ ಎಂದು ಪ್ರಶ್ನಸಿದ್ದಾರೆ. ತಾಳ್ಮೆಯಿಂದ ಇರಬೇಕು, ನಾನು ತಾಳ್ಮೆಯಿಂದ ಇರಲಿಲ್ಲವಾ? ಎಲ್ಲರೂ ತಾಳ್ಮೆಯಿಂದ ಇರಬೇಕು. ಶಾಸಕರು ರಾಜೀನಾಮೆ

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ಡಿ.ಕೆ. ಶಿವಕುಮಾರ್‌ Read More »

ಲಕ್ಷ್ಮಣ್‌ ಸವದಿಗೆ ಸಚಿವ ಸ್ಥಾನ- ಕಟೀಲು ದೇವಿಗೆ ಪೂಜೆ ಸಲ್ಲಿಸಿದ ಸವದಿ ಪುತ್ರ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ಲಕ್ಷ್ಮಣ್‌ ಸವದಿಗೆ ಸಚಿವ ಸ್ಥಾನ ನೀಡಿದ ಬೆನ್ನಲ್ಲೇ ಸವದಿ ಪುತ್ರ ಟೆಂಪಲ್‌ ರನ್‌ ಮಾಡಿದ್ದಾರೆ. ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸವದಿ ಪುತ್ರ ಶಶಿಕಾಂತ್‌ ಸವದಿ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ತಂದೆಗೆ ಸಚಿವ ಸ್ಥಾನ ಸಿಕ್ಕಿದ ಹಿನ್ನೆಲೆ ಕಟೀಲು ದೇವಿಗೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಟೀಲು ತಾಯಿಯ ಆಶೀರ್ವಾದದಿಂದ ತಂದೆಗೆ ಸಚಿವ ಸ್ಥಾನ ಲಭಿಸಿದೆ. ನಿನ್ನೆ ರಾತ್ರಿಯೇ ವಿಷಯ ಗೊತ್ತಾಯಿತು. ಬುಸಿನೆಸ್ ಕಾರ್ಯ ನಿಮಿತ್ತ ಉಡುಪಿಯಲ್ಲಿದ್ದೆ.

ಲಕ್ಷ್ಮಣ್‌ ಸವದಿಗೆ ಸಚಿವ ಸ್ಥಾನ- ಕಟೀಲು ದೇವಿಗೆ ಪೂಜೆ ಸಲ್ಲಿಸಿದ ಸವದಿ ಪುತ್ರ Read More »

ಡಿಕೆಶಿ ಸಚಿವ ಸಂಪುಟ 2.0 : ಹಲವು ಅಚ್ಚರಿ – ಹಲವು ನಿರಾಸೆ

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿ 60 ದಿನಗಳ ಅನಂತರ ಆ. 3ರಂದು 2.0 ನೂತನ ಸಚಿವರ ಪಟ್ಟಿ ಬಿಡುಗಡೆಯಾಗಿದೆ. ಆ ಪಟ್ಟಿಯಲ್ಲಿ ಹಲವು ಅಚ್ಚರಿ, ಹಲವು ನಿರಾಸೆ ಕಂಡುಬಂದಿದೆ. ಪಟ್ಟಿ ಫೈನಲ್ ಮಾಡಲು ಹೈಕಮಾಂಡ್ 60 ದಿನಗಳ ಕಾಲ ತೆಗೆದುಕೊಂಡಿತೇ ಎಂಬ ಪ್ರಶ್ನೆ ಈಗ ಪಾರ್ಟಿ ವಲಯದಲ್ಲಿ ಹರಿದಾಡುತ್ತಿದೆ. ತುಂಬಾ ಹಿರಿಯರನ್ನು ಕಡೆಗಣಿಸಿದ ಬಗ್ಗೆ ಆಕ್ರೋಶವೂ ಕೇಳಿಬರುತ್ತಿದೆ. ಬೂದಿ ಮುಚ್ಚಿದ ಕೆಂಡದಂತಿದ್ದ ಬಣಗಳು ಈಗ ಜಿದ್ದಿಗೆ ಬಿದ್ದ ಹಾಗೆ ಬಹಿರಂಗವಾಗಿ ತಮ್ಮ ಅಸಮಾಧಾನ ತೋಡಿಕೊಳ್ಳುತ್ತಿವೆ.ಚಿಕ್ಕಮಗಳೂರಿನಲ್ಲಿ 7

ಡಿಕೆಶಿ ಸಚಿವ ಸಂಪುಟ 2.0 : ಹಲವು ಅಚ್ಚರಿ – ಹಲವು ನಿರಾಸೆ Read More »

ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆ ಗೊಂದಲ – ಗೃಹ ಸಚಿವರ ರಾಜೀನಾಮೆಗೆ ಸಿ.ಟಿ.ರವಿ ಆಗ್ರಹ

ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಉಂಟಾದ ಗೊಂದಲದ ಪರಿಣಾಮ ಬಿಜೆಪಿ ಪರಿಷತ್‌ ಸದಸ್ಯ ಸಿ.ಟಿ ರವಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.ಸೋಷಿಯಲ್‌ ಮೀಡಿಯಾ ಎಕ್ಸ್‌ ನಲ್ಲಿ ಪೋಸ್ಟ್ ಮಾಡಿರುವ ಅವರು, OMR ಶೀಟ್ ಗೊಂದಲ ಮತ್ತು ಅಸಮರ್ಥ ವ್ಯವಸ್ಥೆಯಿಂದ ಸಾವಿರಾರು ಅಭ್ಯರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಆರೋಪಿಸಿದ್ದಾರೆ.ಅಭ್ಯರ್ಥಿಗಳು ನಡೆಸಿರುವ ಪ್ರತಿಭಟನೆ ರಾಜ್ಯ ಸರ್ಕಾರದ ವೈಫಲ್ಯಕ್ಕೆ ನೀಡಿರುವ ಇನ್ನೊಂದು ಸರ್ಟಿಫಿಕೇಟ್. ರಾಜ್ಯದ ಗೃಹ ಸಚಿವರು ಬೇರೆಯವರಿಗೆ ಸರ್ಟಿಫಿಕೇಟ್ ಕೊಡುತ್ತಾ ತನ್ನ

ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆ ಗೊಂದಲ – ಗೃಹ ಸಚಿವರ ರಾಜೀನಾಮೆಗೆ ಸಿ.ಟಿ.ರವಿ ಆಗ್ರಹ Read More »

ಉಪಸಭಾಪತಿ, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಎಂ.ಕೆ. ಪ್ರಾಣೇಶ್ ರಾಜೀನಾಮೆ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಹಾಗೂ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಅವರು ತಮ್ಮ ಉಪಸಭಾಪತಿ ಹುದ್ದೆ ಹಾಗೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ, ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಹುದ್ದೆ ಮತ್ತು ಶಾಸಕ ಸ್ಥಾನಕ್ಕೆ ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ. ಸದರಿ ರಾಜೀನಾಮೆ ಪತ್ರವನ್ನು ಅಂಗೀಕರಿಸುವಂತೆ ಕೋರುತ್ತೇನೆ ಎಂದು ತಿಳಿಸಿದ್ದಾರೆ. ಆಗಸ್ಟ್

ಉಪಸಭಾಪತಿ, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಎಂ.ಕೆ. ಪ್ರಾಣೇಶ್ ರಾಜೀನಾಮೆ Read More »

error: Content is protected !!
Scroll to Top